Friday, June 20, 2025
Google search engine
Homeರಾಜ್ಯShivamogga: Don't want NPS, want OPS : ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ...

Shivamogga: Don’t want NPS, want OPS : ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ..!!ಸರ್ಕಾರ ಇವರ ಹೋರಾಟಕ್ಕೆ ಮಣಿಯುತ್ತಾ..?! ಅಥವಾ ಕಾದು ನೋಡುವ ತಂತ್ರ ಅನುಸರಿಸುತ್ತಾ..?!

ಶಿವಮೊಗ್ಗ: ಬೆಂಗಳೂರಿನಲ್ಲಿ ಕಳೆದ ಮೂರು ತಿಂಗಳಿಂದ ನಡೆಯುತ್ತಿರುವ ಎನ್‌ಪಿಎಸ್ ನೌಕರರ ಹೋರಾಟದ ಬಿಸಿ ಶಿವಮೊಗ್ಗ ನಗರಕ್ಕೆ ತಲುಪಿದ್ದು ಹಳೆ ಪಿಂಚಣಿ ಯೋಜನೆಯನ್ನ ಮರುಜಾರಿಗೊಳಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ ಅವರ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆದಿದೆ.


ನಿಶ್ಚಿತ ಪಿಂಚಣಿ ನಮ್ಮ ಹಕ್ಕು ಎಂಬ ಬಾವುಟ ಹಿಡಿದು ಬೈಕ್ ಜಾಥಾ, ಕಾಲು ನಡುಗೆ ಮೂಲಕ ಹೋರಾಟ ಫ್ರೀಡಂ ಪಾರ್ಕ್ ಗೆ ಬಂದು ತಲುಪಿದ್ದು.

ಸರ್ಕಾರಿ ನೌಕರರು ಇಂದು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ಹಳೇ ಜೈಲಿನ ಫ್ರೀಡಂ ಪಾರ್ಕ್ ಮೈದಾನದ ವರೆಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಮತ್ತು ಹೊಸ ಪಿಂಚಣಿ ಯೋಜನೆ ರದ್ದು ಮಾಡಬೇಕು ಎಂದು ಪ್ರತಿಭಟನೆಯಲ್ಲಿ ಘೋಷಣೆ ಕೂಗಲಾಯಿತು.

2006 ರಲ್ಲಿ ಆರಂಭವಾದ ಎನ್ ಪಿಎಸ್ ಯೋಜನೆಗೆ ಪ್ರಾರಂಭದಲ್ಲಿ ಅಂತ ವಿರೋಧ ವ್ಯಕ್ತವಾಗಿಲ್ಲವಾದರೂ ನಂತರ ಇದರ ತೀವ್ರತೆ ಅರಿತ ಸರ್ಕಾರಿ ನೌಕರರು ಎನ್‌ಪಿಎಸ್ ಗಿಂತ ಓಪಿಎಸ್ ಒಳಿತು ಎನ್ನುವುದನ್ನು ಅರಿತು 2014 ರಲ್ಲಿ ರಕ್ತಕೊಟ್ಟೆವು ಒಪಿಎಸ್ ಬಿಡೆವು ಎಂಬ ಅಭಿಯಾನವನ್ನ ಸರ್ಕಾರಿ ನೌಕರರು ಮಾಡಿಕೊಂಡು ಬಂದರು. ಈಗ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದು ಸರ್ಕಾರ ಇದನ್ನು ಜಾರಿಗೊಳಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎನ್ನುವ ಛಲದೊಂದಿಗೆ ನಿರಂತರವಾಗಿ ಬೆಂಗಳೂರಿನಲ್ಲಿ ಹೋರಾಟ ಮಾಡುತ್ತಿದ್ದ ಎನ್ ಪಿ ಎಸ್ ನೌಕರರು ಇಂದು ಶಿವಮೊಗ್ಗ ನಗರದಲ್ಲಿಯೂ ಕೂಡ ಬೃಹತ್ ಪ್ರತಿಭಟನ ರ್ಯಾಲಿ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ…

ಸರ್ಕಾರ ಇವರ ಹೋರಾಟಕ್ಕೆ ಮಣಿಯುತ್ತಾ..?! ಅಥವಾ ಕಾದು ನೋಡುವ ತಂತ್ರ ಅನುಸರಿಸುತ್ತಾ..?!


ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಕೆ  ಅಧ್ಯಕ್ಷತೆ ವಹಿಸಿದ್ದರು, ಪ್ರಧಾನ.ಕಾರ್ಯದರ್ಶಿ, ನಾಗನಗೌಡ, ಸಿದ್ದಪ್ಪ ಸಂಗಣ್ಣ, ಉಪಾಧ್ಯಕ್ಷ ಚಂದ್ರಕಾಂತ್ ತಳವಾರ್, ಗುರುಸ್ವಾಮಿ, ಶಿಕ್ಷಕರ ಪರಿಷತ್ತಿನ ಸಹಕಾರ ಸಂಘದ ಮಹಬಲೇಶ್ ಹೆಗಡೆ, ರಾಧ, ರವಿ ಅಸೂಟಿ ಮೊದಲಾದವರು ಭಾಗಿಯಾಗಿದ್ದರು….

ರಘುರಾಜ್ ಹೆಚ್. ಕೆ..9449553305…



RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!