Home ರಾಜ್ಯPunishment for sexual assault : ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ 57 ಸಾವಿರ ರೂ,ದಂಡ..!!

Punishment for sexual assault : ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ 57 ಸಾವಿರ ರೂ,ದಂಡ..!!

by EDITOR NEWS WARRIORS
1 comment
  ತೀರ್ಥಹಳ್ಳಿ: ತಾಲೂಕಿನ ಆಗುಂಬೆಯಲ್ಲಿ 2019ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.

   ಆಗಿನ ತನಿಖಾಧಿಕಾರಿಗಳಾದ  ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

  ಪ್ರಕರಣದಲ್ಲಿ ಸರ್ಕಾರದ ಪರವಾಗಿ  ಶಾಂತರಾಜ್,ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು,3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಧೀಶರಾದ ಮಾನು ಕೆ. ಎಸ್ ರವರು ದಿನಾಂಕ: 27-01-2023 ರಂದು ಆರೋಪಿತನ ವಿರುದ್ಧ ಕಲಂ 376(1), 506 ಮತ್ತು 450 IPC ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ತೀರ್ಥಹಳ್ಳಿ ತಾಲ್ಲೂಕಿನ  37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 57,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿರುತ್ತಾರೆ...

ರಘುರಾಜ್ ಹೆಚ್.ಕೆ ‌..9449553305...

Related Articles

1 comment

VictorWeema September 21, 2025 - 5:17 am

В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Подробнее тут – https://quick-vyvod-iz-zapoya-1.ru/

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!