36
ತೀರ್ಥಹಳ್ಳಿ: ತಾಲೂಕಿನ ಆಗುಂಬೆಯಲ್ಲಿ 2019ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.
ಆಗಿನ ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಶಾಂತರಾಜ್,ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು,3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಧೀಶರಾದ ಮಾನು ಕೆ. ಎಸ್ ರವರು ದಿನಾಂಕ: 27-01-2023 ರಂದು ಆರೋಪಿತನ ವಿರುದ್ಧ ಕಲಂ 376(1), 506 ಮತ್ತು 450 IPC ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ತೀರ್ಥಹಳ್ಳಿ ತಾಲ್ಲೂಕಿನ 37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 57,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ...
ರಘುರಾಜ್ ಹೆಚ್.ಕೆ ..9449553305...


1 comment
В этой информационной статье вы найдете интересное содержание, которое поможет вам расширить свои знания. Мы предлагаем увлекательный подход и уникальные взгляды на обсуждаемые темы, побуждая пользователей к активному мышлению и критическому анализу!
Подробнее тут – https://quick-vyvod-iz-zapoya-1.ru/