The police caught the robbers: ಕಳ್ಳತನ ಮಾಡಿದ 24 ಗಂಟೆ ಒಳಗೆ ಕಳ್ಳರನ್ನು ಹಿಡಿದ ವಿನೋಬನಗರದ ಪೊಲೀಸರು..!! ಬಹುಮಾನ ಘೋಷಿಸಿ ಪ್ರಶಂಸೆ ವ್ಯಕ್ತಪಡಿಸಿದ ಶಿವಮೊಗ್ಗ ಜಿಲ್ಲಾ ಅಧೀಕ್ಷಕರು..!!
ಶಿವಮೊಗ್ಗ: ದಿನಾಂಕಃ 27-01-2023 ರಂದು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಕೊಳ ಗ್ರಾಮದ ವಾಸಿ ಮಾಣಿಕ್ಯಂ ರವರು ತಮ್ಮ ಮನೆಗೆ ಬೀಗವನ್ನು ಹಾಕಿ,ಬೀಗದ ಕೀಯನ್ನು ಮನೆಯ ಆವರಣದಲ್ಲಿನ ನೀರಿನ ಮೋಟಾರ್ ಕೆಳಗೆ ಇಟ್ಟು ಹೋಗಿದ್ದು, ಯಾರೋ ಕಳ್ಳರು ಸದರಿ ಬೀಗದ ಕೀಯನ್ನು ತೆಗೆದುಕೊಂಡು, ಮನೆಯ ಬಾಗಿಲನ್ನು ತೆರೆದು ಒಳಗೆ ಹೋಗಿ,ಬೀರುವಿನಲ್ಲಿ ಇಟ್ಟಿದ್ದ ಬಂಗಾರದ ಆಭರಣಗಳು, ಬೆಳ್ಳಿಯ ಚೈನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0014/2023 ಕಲಂ 380 ಐಪಿಸಿ ರೀತ್ಯಾ ಪ್ರಕರಣವನ್ನು ದಾಖಲೆ ಮಾಡಿಕೊಂಡು ತನಿಖೆ ಕೈಗೊಂಡ ವಿನೋಬನಗರದ ಪೊಲೀಸರು.
ಮಿಥುನ್ ಕುಮಾರ್ ಜಿ.ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಅನಿಲ್ ಕುಮಾರ್ ಭೂಮರಡ್ಡಿ,ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಸುರೇಶ್ ಎಂ,ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಉಪವಿಭಾಗ-ಬಿ ರವರ ಮೇಲ್ವಿಚಾರಣೆಯಲ್ಲಿ, ಸದರಿ ಪ್ರಕಣದಲ್ಲಿ ಕಳುವಾದ ವಸ್ತುಗಳು ಮತ್ತು ಆರೋಪಿತರ ಪತ್ತೆಗಾಗಿ ರವಿ ಎನ್ ಎಸ್,ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ರಮೇಶ್ ಎಎಸ್ಐ ಮತ್ತು ಸಿಬ್ಬಂದಿಗಳಾದ ಸಿಪಿಸಿ ರಾಜು ಕೆ.ಆರ್ ಮತ್ತು ಚಂದ್ರಾ ನಾಯ್ಕ್ ರವರುಗಳನ್ನೊಳಗೊಂಡ ತಂಡವನ್ನು ರಚನೆ ಮಾಡಲಾಗಿರುತ್ತದೆ.
ಸದರಿ ತನಿಖಾ ತಂಡವು ಕೂಡಲೇ ಕಾರ್ಯ ಪ್ರವೃತ್ತರಾಗಿ ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರಾದ 1 ರಾಹುಲ್ ಎ.ಆರ್ ಬಿನ್ ಅಣ್ಣಪ್ಪ ಕೆ.ಆರ್, 26 ವರ್ಷ, ಶ್ರೀರಾಮ ಬಡಾವಣೆ ಆಂಜನೇಯ ದೇವಸ್ಥಾನದ ಹತ್ತಿರ ದಾವಣೆಗೆರೆ ಟೌನ್ ಮತ್ತು 2] ಗಣೇಶ ಬಿನ್ ಹಾಲೇಶಪ್ಪ, 28 ವರ್ಷ, ಬೊಮ್ಮನಕಟ್ಟೆ ಬಿ ಬ್ಲಾಕ್ ಕ್ಯಾಂಪ್ ಶಿವಮೊಗ್ಗ ಟೌನ್ ರವರನ್ನು ಪತ್ತೆ ಹಚ್ಚಿ ದಿನಾಂಕಃ 28-01-2023 ರಂದು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ಅಂದಾಜು ಮೌಲ್ಯ 1,09,250/- ರೂ ಗಳ 30 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು 100 ಗ್ರಾಂ ತೂಕದ ಬೆಳ್ಳಿಯ ಚೈನ್ ಅನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.
ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ ತನಿಖಾ ತಂಡದ ಉತ್ತಮ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶ್ಲಾಘಿಸಿ ಬಹುಮಾನವನ್ನು ಘೋಷಿಸಿ ಅಭಿನಂದಿಸಿರುತ್ತಾರೆ...
ರಘುರಾಜ್ ಹೆಚ್.ಕೆ...9449553305...