Violation of traffic rules:ಪ್ರಕರಣಗಳಲ್ಲಿ, ಸಾರ್ವಜನಿಕರು ಬಾಕಿ ಇರುವ ಇ-ಚಲನ್ ದಂಡದ ಮೊತ್ತವನ್ನು ದಿನಾಂಕ 11-02-2023 ರ ಒಳಗೆ ಪಾವತಿ ಮಾಡಿದ್ದಲ್ಲಿ, ಶೇಕಡ 50% ರಷ್ಟು ರಿಯಾಯಿತಿ ಅನೌನ್ಸ್ಮೆಂಟ್ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ,ಕೆ..!!
ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ನಗರದ ಶಿವಪ್ಪ ನಾಯಕ ಸರ್ಕಲ್ನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆಯ ಪ್ರಕರಣಗಳಲ್ಲಿ, ಸಾರ್ವಜನಿಕರು ಬಾಕಿ ಇರುವ ಇ-ಚಲನ್ ದಂಡದ ಮೊತ್ತವನ್ನು ದಿನಾಂಕ 11-02-2023 ರ ಒಳಗೆ ಪಾವತಿ ಮಾಡಿದ್ದಲ್ಲಿ, ಶೇಕಡ 50% ರಷ್ಟು ರಿಯಾಯಿತಿ ಇರುವ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ ಕೊಡಲು ರಿಯಾಯಿತಿ ದಂಡದ ಮೊತ್ತದ ಮಾಹಿತಿ ಇರುವ ಬ್ಯಾನರ್ ಗಳನ್ನು ಅಳವಡಿಸಿ ಹಾಗೂ ಆಟೋಗಳಲ್ಲಿ ದ್ವನಿ ವರ್ಧಕಗಳನ್ನು ಅಳವಡಿಸಿಕೊಂಡು ಅನೌಸ್ಮೆಂಟ್ ಮಾಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.
ರಾಜಣ್ಣ ಸಂಕಣ್ಣನವರ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಶಿವಮೊಗ್ಗ ಮತ್ತು ಮಿಥುನ್ ಕುಮಾರ್ ಜಿ,ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆರವರು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ಈ ಸಂದರ್ಭದಲ್ಲಿ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀಮತಿ ಜಯಶ್ರೀ ಎಸ್ ಮನೆ, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ರವರು ಉಪಸ್ಥಿತರಿದ್ದರು...