Wednesday, April 30, 2025
Google search engine
Homeರಾಜ್ಯಕರಕುಶಲ ಕರ್ಮಿಗಳ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ ಸರ್ಕಾರ, ಪುರಾತನ ಸಂಪ್ರದಾಯಕ್ಕೆ ತಿಲಾಂಜಲಿ ನೀಡಲು...

ಕರಕುಶಲ ಕರ್ಮಿಗಳ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ ಸರ್ಕಾರ, ಪುರಾತನ ಸಂಪ್ರದಾಯಕ್ಕೆ ತಿಲಾಂಜಲಿ ನೀಡಲು ಕಾರಣವೇನು? ಆದೇಶ ಹಿಂಪಡೆಯಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಬಿ, ಆರ್ ಸಂತೋಷ್ ಆಗ್ರಹ…..


ದಿನಾಂಕ 10.08.2021ರಂದು ಕರ್ನಾಟಕ ಸರ್ಕಾರ, ಸರ್ಕಾರದ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸಭೆ ಸಮಾರಂಭಗಳಲ್ಲಿ ಅತಿಥಿಗಳಿಗೆ ನೆನಪಿನ ಕಾಣಿಕೆ, ಹಾರ,ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ಈ ರಾಜ್ಯದ ಕುಶಲಕರ್ಮಿಗಳ ಮೇಲೆ ನಡೆಸಿರುವ ಗಧಾ ಪ್ರಹಾರ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಬಿ.ಆರ್. ಸಂತೋಷ್ ತಮ್ಮ ವಿಷಾದ ವ್ಯಕ್ತ ಪಡಿಸಿದ್ದಾರೆ.

ರಾಜ ಮಹಾರಾಜರ ಕಾಲದಿಂದಲೂ ಯಾವುದೇ ಗಣ್ಯ ವ್ಯಕ್ತಿ ಭೇಟಿ ನೀಡಿದಾಗ, ಅದರ ನೆನಪಿಗಾಗಿ ಸ್ಮರಣಿಕೆಗಳನ್ನು ನೀಡಿ ಗೌರವಿಸುವುದು ನಮ್ಮ ರಾಜ್ಯದ ಸತ್ಸಂಪ್ರದಾಯ. ಈ ಕರಕುಶಲ ಕಲೆಯನ್ನೇ ನಂಬಿಕೊಂಡು ಬಂದಿರುವ ಈ ರಾಜ್ಯದ ಕುಶಲಕರ್ಮಿಗಳು ತಯಾರಿಸಿಕೊಟ್ಟ ಸ್ಮರಣಿಕೆಗಳು ನಮ್ಮ ರಾಜ್ಯದ ಮತ್ತು ರಾಷ್ಟ್ರದ ಸಂಸ್ಕ್ರತಿಯ ಪ್ರತೀಕವಾಗಿ ಇಂದಿಗೂ ದೇಶ, ವಿದೇಶಗಳಲ್ಲಿ ತಮ್ಮ ಕಂಪನ್ನು ಮೂಡಿಸಿವೆ. ಅದರಲ್ಲೂ ಮಹಿಳೆಯರೇ ಹೆಚ್ಚಾಗಿ ತಯಾರಿಸುವ ಶ್ರೀಗಂಧದ ಹಾರಗಳು, ಮಣಿಪುಷ್ಪ ಹಾರಗಳು, ಏಲಕ್ಕಿ ಹಾರಗಳು ದೇಶ ವಿದೇಶಿಯರ ಮನ ಸೆಳೆದು ಇಂದಿಗೂ ಸ್ಮರಣಿಕೆಗಳಾಗಿ ಉಳಿದಿವೆ.

ಕರೋನಾ ಪೀಡಿತ ಪ್ರಸಕ್ತ ಸನ್ನಿವೇಶದಲ್ಲಿ ಇಡೀ ಕುಶಲಕರ್ಮಿ ವರ್ಗವೇ ಆರ್ಥಿಕವಾಗಿ ಅತ್ಯಂತ ಶೋಚನೀಯ ಪರಿಸ್ಥಿತಿಯಲ್ಲಿರುವ ಇಂತಹ ವಿಷಮ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇಂತಹದ್ದೊಂದು ಆದೇಶ ಹೊರಡಿಸಿ ಗಾಯದ ಮೇಲೆ ಬರೆ ಎಳೆದಿದೆ.

ರೂ. 2.25 ಲಕ್ಷ ಕೋಟಿ ಬಜೆಟ್ ಹೊಂದಿರುವ ಕರ್ನಾಟಕ ಸರ್ಕಾರಕ್ಕೆ ಕೇವಲ ನೆನಪಿನ ಕಾಣಿಕೆ, ಹಾರ, ಶಾಲುಗಳ ಖರೀದಿಯಿಂದ ಬಹಳ ದೊಡ್ಡ ಆರ್ಥಿಕ ಉಳಿತಾಯವಾಗುವುದು ನಿಜಕ್ಕೂ ನಂಬಲು ಅನರ್ಹವಾದ ವಿಚಾರ. ಆದರೆ ಈ ಉದ್ಯೋಗದಿಂದ ದೈನಂದಿನ ಜೀವನ ಸಾಗಿಸುತ್ತಿರುವ ಬಡ ಕುಶಲಕರ್ಮಿಗಳು ಮುಂದಿನ ದಿನಗಳಲ್ಲಿ ತಮ್ಮ ಕರಕುಶಲ ವ್ರತ್ತಿಯನ್ನು ತ್ಯಜಿಸಿದಲ್ಲಿ ರಾಜ್ಯದಲ್ಲಿರುವ ಸಾಂಪ್ರದಾಯಿಕ ಕಲೆಗಳು ನಶಿಸಿ ಹೋಗುವುದರಲ್ಲಿ ಯಾವುದೇ ಸಂಶಯವಿಲ್ಲ.

ಈ ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರೇ ತಮಗೆ ನೀಡಿರುವ ಎಲ್ಲಾ ನೆನಪಿನ ಕಾಣಿಕೆಗಳನ್ನು ಸಂಗ್ರಹಿಸುವ ಅಭ್ಯಾಸ ಹೊಂದಿದ್ದಾರೆ.

ಆದ್ದರಿಂದ ದಯವಿಟ್ಟು ರಾಜ್ಯಸರ್ಕಾರ ಪ್ರಸಕ್ತ ಆದೇಶವನ್ನು ಹಿಂಪಡೆದು ಕುಶಲಕರ್ಮಿಗಳಿಗೆ ಕನಿಷ್ಠ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಬಿ.ಆರ್. ಸಂತೋಷ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬಿ.ಆರ್. ಸಂತೋಷ್
9448127407

ವರದಿ… ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...