Wednesday, April 30, 2025
Google search engine
Homeರಾಜ್ಯಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಅಧಿಕಾರಿಗಳ ಸಾಥ್ 4 ಕ್ವಿಂಟಲ್ ಗೋಮಾಂಸ ವಶ....

ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಅಧಿಕಾರಿಗಳ ಸಾಥ್ 4 ಕ್ವಿಂಟಲ್ ಗೋಮಾಂಸ ವಶ….

ಗೃಹಸಚಿವರ ತವರಲ್ಲಿ ಅಧಿಕಾರಿಗಳು ಹಾಗೂ ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಗೋಮಾಂಸ ಸಾಗಾಟ ಜಾಲವನ್ನು ಭೇಧಿಸಿದ ಆಗುಂಬೆಯ ಪೋಲಿಸ್ ಹಾಗೂ ಅರಣ್ಯ ತಪಾಸಣಾ ಸಿಬ್ಬಂದಿ.

ಶಿವಮೊಗ್ಗದಿಂದ ಮಂಗಳೂರಿಗೆ ಗೋಮಾಂಸ ಸಾಗಿಸುತ್ತಿದ್ದ ಇರ್ಷಾದ್ ಬಿನ್ ಮುಸ್ತಫಾ ಕಂಕನಾಡಿ ಹಾಗೂ ದೇರಳಕಟ್ಟೆಯ ಇಮ್ತಿಯಾಜ್ ಬಿನ್ ಹಸನಬ್ಬ ಎಂಬುವವರನ್ನು ತೀರ್ಥಹಳ್ಳಿ ತಾಲೂಕು ಆಗುಂಬೆ ಅರಣ್ಯ ಇಲಾಖೆ ತಪಾಸಣಾ ಕೇಂದ್ರದಲ್ಲಿ ಬಂಧಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ
ತೀರ್ಥಹಳ್ಳಿಯ ವಿಶ್ವಹಿಂದೂ ಪರಿಷತ್ ಭಜರಂಗದಳದ ಮುಖಂಡರು ಹಾಗೂ ಕಾರ್ಯಕರ್ತರ ತಂಡದ ಜತೆ ಆಗುಂಬೆ ಘಟಕದ ಭಜರಂಗದಳ ಪ್ರಮುಖರು ಹಾಗೂ ಕಾರ್ಯಕರ್ತರು ಸಹಕಾರ ನೀಡಿದರು.

ಎ.ಎನ್.ಎಸ್ ನ ಸಿಬ್ಬಂದಿಯಾದ ಪ್ರವೀಣ್ ರವರು ಹಾಗೂ ಅರಣ್ಯ ತನಿಖಾ ಠಾಣೆಯ ಜಗದೀಶ್ ರವರು ಜೀವದ ಹಂಗು ತೊರೆದು ವಾಹನ ಅಡ್ಡಗಟ್ಟಿ ಗೋ ಮಾಂಸ ದಂಧೆಕೋರರನ್ನು ಬಂಧಿಸಲು ಸಹಕರಿಸಿದ್ದಾರೆ. ತಮ್ಮ ಇಲಾಖೆಯ ಕೆಲಸಗಳ ಜತೆಗೆ ನೆರೆ, ಅಪಘಾತಗಳಂತಹ ಸಮಯದಲ್ಲಿ ಸಹಾಯಹಸ್ತ ನೀಡುವ ಸಮಾಜಮುಖಿ ಕೆಲಸದಲ್ಲಿ ಈ ಸಿಬ್ಬಂದಿಗಳು ತೊಡಗಿಸಿಕೊಂಡಿದ್ದಾರೆ. ಆಗುಂಬೆಯ ಪಿ.ಎಸ್.ಐ ಯವರಾದ ಶಿವಕುಮಾರ್ ರವರು ಯಾವುದೇ ಒತ್ತಡಕ್ಕೆ ಮಣಿಯದೇ ಗೋಮಾತೆಯ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಇಂದೂ ಕೂಡಾ ಅಪರಾಧಿಗಳನ್ನು ಬಂಧಿಸಿ ಎಫ್.ಐ.ಆರ್ ದಾಖಲಿಸಿದ್ದು ಸ್ಥಳೀಯರು ಈ ಎಲ್ಲಾ ಸಿಬ್ಬಂದಿಗಳನ್ನು ಪ್ರಶಂಸಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ ಎಲ್ಲ ಕಾರ್ಯಕರ್ತರಿಗೂ ಸಾರ್ವಜನಿಕರಿಗೂ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಂಡ ಇಲಾಖೆಯ ಅಧಿಕಾರಿಗಳಿಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ತೀರ್ಥಹಳ್ಳಿ ಹಾಗೂ ಆಗುಂಬೆ ವಲಯ ಧನ್ಯವಾದಗಳನ್ನು ಸಲ್ಲಿಸಿದೆ….

ವರದಿ.. ರಘುರಾಜ್ ಹೆಚ್.ಕೆ….

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...