Friday, June 20, 2025
Google search engine
Homeರಾಜ್ಯJds Pancharatna Yatra : ರಾಜ್ಯಾದ್ಯಂತ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ರಾಜ್ಯ ಪ್ರಧಾನ ಕಾರ್ಯದರ್ಶಿ...

Jds Pancharatna Yatra : ರಾಜ್ಯಾದ್ಯಂತ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವ ನಾಯ್ಕ್..!!


ಮಾಜಿ ಮುಖ್ಯಮಂತ್ರಿ ಹಾಗೂ ಜನಾನುರಾಗಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಗೆ ರಾಜ್ಯದ್ಯಂತ ಅಭೂತ ಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಫೆ.೨೧ ರಿಂದ ಸಂಚರಿಸಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಯನೂರು ಶಿವನಾಯ್ಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ರಾಜ್ಯಾಧ್ಯಕ್ಷ ಹೆಚ್.ಇಬ್ರಾಹಿಂ ಸಾಹೇಬರು ಹಾಗೂ ಕುಮಾರ ಸ್ವಾಮಿ, ಮಾಜಿ ಶಾಸಕಿ ಶಾರದಾಪೂರ್ಯನಾಯ್ಕ್, ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಫೆ.೨೧ ರಿಂದ ಪಂಚರತ್ನ ಯಾತ್ರೆ ಸಂಚರಿಸಲಿದೆ. ಬಿಜೆಪಿ ಸರಕಾರದ ಬಡವರ ವಿರೋಧಿ ಆಡಳಿತ ನೋಡಿರುವ ಶಿವಮೊಗ್ಗ ಮತ್ತು ಮಲೆನಾಡಿನ ಜನರು ಈ ಬಾರಿ ಜೆಡಿಎಸ್ ಬೆಂಬಲಿಸಲಿದ್ದಾರೆ. ಮೂವರು ಶಾಸಕರನ್ನು ಹೊಂದಿದ್ದ ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಯಶಸ್ಸು ಸಿಗಲಿದೆ ಎಂದಿದ್ದಾರೆ.


ಶಿವಮೊಗ್ಗ ಗ್ರಾಮಾಂತರ ,ಭದ್ರಾವತಿ ಹಾಗೂ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪಕ್ಷ ಭದ್ರ ಬುನಾದಿ ಹೊಂದಿದೆ. ಪಂಚರತ್ನ ಯಾತ್ರೆಯಿಂದ ಈ ಕ್ಷೇತ್ರಗಳಲ್ಲಿ ಮತ್ತಷ್ಟು ಶಕ್ತಿ ಬರಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಗರ್‌ಹುಕುಂ ಸಾಗುವಳಿದಾರರ ಸಮಸ್ಯೆ, ಅಡಕೆ ಎಲೆ ಚುಕ್ಕಿ ರೋಗ, ಶರಾವತಿ ಸಂತ್ರಸ್ತರ ಸಮಸ್ಯೆ ಮತ್ತು ಜೀವನಾಡಿಗಳಾದ ಎಂ.ಪಿಎಂ.ಮತ್ತು ವಿಐಎಸ್‌ಎಲ್ ಕಾರ್ಖಾನೆಗಳ ದುಸ್ಥಿತಿಯಿಂದ ಜನ ಸಂಕಷ್ಟದಲ್ಲಿದ್ದಾರೆ. ಇವುಗಳಿಗೆ ಸರಿಯಾದ ಪರಿಹಾರ ಕೊಡಬಲ್ಲ ಜನನಾಯಕ ಕುಮಾರಣ್ಣ ಅವರು ಮಾತ್ರ ಎಂದು ಶಿವಾನಾಯ್ಕ್ ತಿಳಿಸಿದ್ದಾರೆ.


ಡಬಲ್ ಎಂಜಿನ್ ಸರಕಾರಗಳಿಂದ ಜಿಲ್ಲೆಯ ಸಮಸ್ಯೆಗಳು ಜಟಿಲವಾಗಿವೆ. ಕಾಂಗ್ರೆಸ್ ನಾಯಕರು ಬರೀ ಯಾತ್ರೆ ಮಾಡಿ ಭರವಸೆ ನೀಡುತ್ತಿದ್ದಾರೆ. ಹೆಚ್ಚು ಕಾಲ ದೇಶ ಹಾಗೂ ರಾಜ್ಯದಲ್ಲಿ ಆಳ್ವಿಕೆ ಮಾಡಿದ ಆ ಪಕ್ಷದ ನಾಯಕರು ಸಮಸ್ಯೆಗಳು ಇನ್ನೂ ಯಾಕೆ ಉಳಿದಿವೆ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ಜಿಲ್ಲೆಯ ಸಮಸ್ಯೆಗಳಿಗೆ ಉತ್ತರ ನೀಡಲು ದೇವೇಗೌಡರು, ಕುಮಾರಸ್ವಾಮಿ ಅವರಿಂದ ಮಾತ್ರ ಸಾಧ್ಯ. ಆದ್ದರಿಂದ ಪಂಚರತ್ನ ಯಾತ್ರೆಗೆ ಜಿಲ್ಲೆಯ ಪಕ್ಷದ ಕಾರ್ಯಕರ್ತರು, ದೇವೇಗೌಡರು, ಕುಮಾರಣ್ಣ ಹಾಗೂ ಎಂ.ಶ್ರೀಕಾಂತ್ ಅವರ ಅಭಿಮಾನಿಗಳು ಹೆಚ್ಚಿನ ಸಂಖೆಯಲ್ಲಿ ಆಗಮಿಸಬೇಕೆಂದು ಶಿವಾನಾಯ್ಕ್ ಮನವಿ ಮಾಡಿದ್ದಾರೆ..

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!