ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಯ ಕುರಿತು ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಹಾಗೆ ಯೋಜನೆ ಜಾರಿಗೆ ತರುತ್ತೇವೆ ಎಂದು ಕೂಡ ಹೇಳಿಕೆ ನೀಡಿಲ್ಲ ಇದರ ವಿರುದ್ಧ ಸಿಡಿದೆದ್ದಿರುವ ರಾಜ್ಯ ಸರ್ಕಾರಿ ನೌಕರರು ಸರ್ಕಾರ ಕೂಡಲೇ 7ನೇ ವೇತನ ಆಯೋಗವನ್ನು ಜಾರಿಗೆ ತರಬೇಕು ಈ ಬಗ್ಗೆ ಹೇಳಿಕೆ ನೀಡಬೇಕು ಇಲ್ಲವಾದಲ್ಲಿ ಮಾರ್ಚ್ 1ರಿಂದ ಎಲ್ಲಾ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸದನದಲ್ಲಿ ಕಾನೂನು ಬದ್ಧವಾಗಿ ರಾಜ್ಯ ಸರ್ಕಾರಿ ನೌಕರಿಗೆ ಸಲ್ಲ ಬೇಕಾಗಿರುವ 7ನೇ ವೇತನ ಆಯೋಗವನ್ನು ಜಾರಿಗೆ ತರಬೇಕು ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರಿ ನೌಕರರು ಬೀದಿಗೆ ಬರದಂತೆ ಸರ್ಕಾರ ನೋಡಿಕೊಳ್ಳಬೇಕು ಈ ಬಗ್ಗೆ ಇಂದಿನ ಅಧಿವೇಶನದಲ್ಲಿ ಸರ್ಕಾರ ಉತ್ತರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು…

ರಘುರಾಜ್ ಹೆಚ್.ಕೆ..9449553305…