Sunday, June 15, 2025
Google search engine
Homeರಾಜ್ಯಸಿ,ಟಿ ರವಿ ವಿವಾದಾತ್ಮಕ ಹೇಳಿಕೆ ನೆಹರುಗೆ ಹುಕ್ಕಾ ಬೇಕಿತ್ತು ಹೇಳಿಕೆ ಬೆನ್ನಲ್ಲೇ,ವಾಜಪೇಯಿಗೆ ಎರಡು ಪೆಗ್...

ಸಿ,ಟಿ ರವಿ ವಿವಾದಾತ್ಮಕ ಹೇಳಿಕೆ ನೆಹರುಗೆ ಹುಕ್ಕಾ ಬೇಕಿತ್ತು ಹೇಳಿಕೆ ಬೆನ್ನಲ್ಲೇ,ವಾಜಪೇಯಿಗೆ ಎರಡು ಪೆಗ್ ಸಾಕಾಗಿತ್ತು,‌ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ….. (ಅಪರೂಪದ ಫೋಟೋಗಳ ಸಮೇತ)….

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ ರವಿ ಸದಾ ಒಂದಿಲ್ಲೊಂದು ಹೇಳಿಕೆ ನೀಡುತ್ತಾ ಸುದ್ದಿಯಲ್ಲಿರುತ್ತಾರೆ.

ಈಗವರು ಸುದ್ದಿಯಲ್ಲಿರುವುದು ಕಾಂಗ್ರೆಸ್ ನ ಹಿರಿಯ ನಾಯಕರ ವಿರುದ್ಧ ನೀಡುತ್ತಿರುವ ಹೇಳಿಕೆಗಳು.ಹಲವು ಟೀಕೆ-ಟಿಪ್ಪಣಿಗಳಿಗೆ ಗುರಿಯಾಗುತ್ತಿದೆ. ನೆಹರು ಹುಕ್ಕಾ ಸೇದುತ್ತಿದ್ದರು ಡ್ರಿಂಕ್ಸ್ ಮಾಡುತ್ತಿದ್ದರು. ಆದ್ದರಿಂದ ಹಲವು ಯೋಜನೆಗಳಿಗೆ ನೆಹರು, ಇಂದಿರಾ ಹೆಸರಿಡುವ ಕಾಂಗ್ರೆಸ್ನನವರು ಬಾರ್ ಗಳಿಗೆ , ಹುಕ್ಕಾ ಸೆಂಟರ್ ಗಳಿಗೆ ನೆಹರು ,ಇಂದಿರಾ, ಹೆಸರಿಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರುಗಳು ಸಿ,ಟಿ ರವಿ ಇನ್ನೂ ಬಚ್ಚಾ ಎಂದು ಕೆಲವರು ಹೇಳಿದರೆ, ಸ್ವಾತಂತ್ರ್ಯ ಬಂದಾಗ ಸಿಟಿ ರವಿ ಇನ್ನೂ ಹುಟ್ಟಿರಲಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ.
ಆದರೆ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ ಖರ್ಗೆ ಒಂದು ಹೆಜ್ಜೆ ಮುಂದೆ ಹೋಗಿ ಅಜಾತಶತ್ರು ಎಂದು ಕರೆಸಿಕೊಳ್ಳುತ್ತಿದ್ದ. ಬಿಜೆಪಿಯ ಪ್ರಶ್ನಾತೀತ ನಾಯಕರಾಗಿದ್ದ ದಿವಂಗತ ಮಾಜಿ ಪ್ರಧಾನಿ ವಾಜಪೇಯಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಿಯಾಂಕ ಖರ್ಗೆ ವಾಜಪೇಯಿ ಡ್ರಿಂಕ್ ರ್ ಆಗಿದ್ದರು. ಅವರಿಗೆ ಡೈಲಿ ಎರಡು ಪೆಗ್ ವಿಸ್ಕಿ ಬೇಕಾಗಿತ್ತು.
ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ವಾಜಪೇಯಿ ಹೆಸರನ್ನು ಬಾರ್ ಗಳಿಗೆ ಇಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗೇ ಮುಂದುವರೆದು ವೀರ ಸಾವರ್ಕರ್ ಯಾರು? ಅವರ ಕೊಡುಗೆ ಭಾರತಕ್ಕೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ.

ಒಟ್ಟಿನಲ್ಲಿ ಮಾಜಿ ಪ್ರಧಾನ ಮಂತ್ರಿಗಳ ಹೆಸರು ಗಳನ್ನು ತೆಗೆದುಕೊಂಡು ಈಗಿನ ಕಾಂಗ್ರೆಸ್, ಬಿಜೆಪಿ ನಾಯಕರುಗಳು ವಿವಾದದ ಹೇಳಿಕೆಗಳನ್ನು ನೀಡುವುದು ಎಷ್ಟು ಸರಿ ಆ ಮೂಲಕ ಸಮಾಜದಲ್ಲಿ ಸಾಮರಸ್ಯವನ್ನು ಹಾಳು ಮಾಡುವುದು ಇವರ ಉದ್ದೇಶನಾ? ಹೆಸರು ಮಾಡುವುದು ಇವರ ಉದ್ದೇಶನಾ? ಕೋವಿ ಡ್ ಸಾಂಕ್ರಮಿಕ ಕಾಯಿಲೆ, ವ್ಯಾಪಕ ಮಳೆ, ಜನರ ಆರ್ಥಿಕ ಸಂಕಷ್ಟ ಕೇಳುವ ಬದಲು ಈ ತರದ ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡುವುದು ಎಷ್ಟು ಸರಿ? ಎನ್ನುವುದು ಸಾಮಾನ್ಯ ಜನರ ಪ್ರಶ್ನೆ ಇನ್ನುಮುಂದಾದರೂ ಇದಕ್ಕೆ ಬ್ರೇಕ್ ಹಾಕುತ್ತಾರ? ಜನರ ಸಂಕಷ್ಟಗಳಿಗೆ ಧ್ವನಿ ಯಾಗುತ್ತಾರ? ಕಾದು ನೋಡೋಣ….

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!