Saturday, May 3, 2025
Google search engine
Homeರಾಜ್ಯBig shock for BJP sitting MLAs:ಹಲವರಿಗೆ ಕೋಕ್ ಹೊಸ ಮುಖಗಳಿಗೆ ಆಧ್ಯತೆ ನೀಡುವ ಸಾಧ್ಯತೆ..!!

Big shock for BJP sitting MLAs:ಹಲವರಿಗೆ ಕೋಕ್ ಹೊಸ ಮುಖಗಳಿಗೆ ಆಧ್ಯತೆ ನೀಡುವ ಸಾಧ್ಯತೆ..!!

ಚುನಾವಣೆ ಇನ್ನೇನು ಹತ್ತಿರದಲ್ಲಿದೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಆಕಾಂಕ್ಷಿಗಳು ಟಿಕೆಟ್ ಕಾಗಿ ಬಕಪಕ್ಷಿಗಳ ತರ ಕಾಯುತ್ತಾ ನಿಂತಿದ್ದಾರೆ. ಈಗಾಗಲೇ ಜೆಡಿಎಸ್ ತನ್ನ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸಂಭಾವ್ಯ ಪಟ್ಟಿ ಎಲ್ಲೆಡೆ ವೈರಲ್ ಆಗುತ್ತಿದೆ.

ಇದರ ಮಧ್ಯೆ ಆಡಳಿತ ಪಕ್ಷ ಬಿಜೆಪಿ ಮಾತ್ರ ತನ್ನ ಟಿಕೆಟ್ ಹಂಚಿಕೆ ವಿಚಾರವನ್ನು ಗೌಪ್ಯವಾಗಿ ಇಟ್ಟಿದೆ. ಮಾಜಿ ಮುಖ್ಯಮಂತ್ರಿ ರಾಜಾಹುಲಿ ಎಂದೇ ಖ್ಯಾತಿ ಪಡೆದಿರುವ ಬಿ ಎಸ್ ಯಡಿಯೂರಪ್ಪ ಹೇಳಿಕೆಯ ಪ್ರಕಾರ ನೋಡುವುದಾದರೆ ಈ ಸಲ ಚುನಾವಣೆಯಲ್ಲಿ ಹಲವು ಹೊಸ ಮುಖಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ. ಹಾಲಿ ಶಾಸಕರುಗಳಿಗೆ ಬಿಜೆಪಿ ಹೈಕಮಾಂಡ್ ಕೋಕ್ ನೀಡುವ ಸಾಧ್ಯತೆ ಹೆಚ್ಚಾಗಿದೆ. ಏಕೆಂದರೆ ಹಲವು ಶಾಸಕರು ವಿವಿಧ ಹಗರಣಗಳಲ್ಲಿ ಸಿಲುಕಿಕೊಂಡು ತಮ್ಮ ವರ್ಚಸ್ಸನ್ನು ಕಳೆದುಕೊಂಡಿದ್ದಾರೆ.

ಹಾಲಿ ಸಚಿವರಾದ ಗೋವಿಂದ ಕಾರಜೋಳ್, ಮಾಜಿ ಸಚಿವರಾದ ಹಾಲಿ ಶಾಸಕರಾದ ಕೆ ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಮಾಡಾಳ್ ವಿರುಪಾಕ್ಷಪ್ಪ ಹೀಗೆ ಹಲವು ಹೆಸರುಗಳು ಮುಂಚೂಣಿಯಲ್ಲಿವೆ.

ಆದರೆ ಎಲ್ಲವೂ ಬಿಜೆಪಿ ಹೈಕಮಾಂಡ್ ಅಂದುಕೊಂಡಂತೆ ನಡೆಯುವುದಿಲ್ಲ ಏಕೆಂದರೆ ಸ್ಥಳೀಯವಾಗಿ ಬಲಿಷ್ಠ ವಾಗಿರುವ ನಾಯಕರನ್ನು ಕಡೆಗಣಿಸಿದರೆ ಪಕ್ಷಕ್ಕೆ ಡ್ಯಾಮೇಜ್ ಎನ್ನುವ ಅರಿವು ಕೂಡ ಅವರಿಗೆ ಇದೆ.

ಆ ದೃಷ್ಟಿಯಲ್ಲಿ ನೋಡುವುದಾದರೆ ಮಾಜಿ ಸಚಿವ ಹಾಲಿ ಶಾಸಕರಾದ ಕೆ ಎಸ್ ಈಶ್ವರಪ್ಪನವರಿಗೆ ಬಿಜೆಪಿಯ ಅಲಿಖಿತ ನಿಯಮದ ಪ್ರಕಾರ ಹಾಗೂ ಭ್ರಷ್ಟಾಚಾರದ ಆರೋಪದ ನೆಪಪೋಡ್ಡಿ ಟಿಕೆಟ್ ನಿರಾಕರಿಸಿದರೆ ಸಹಜವಾಗಿ ಬಿಜೆಪಿಯ ವಿರುದ್ಧ ಸಚಿವ ಈಶ್ವರಪ್ಪ ತಿರುಗು ಬೀಳಬಹುದು. ಇಲ್ಲವೇ ತನ್ನ ಮಗ ಕೆ ಇ ಕಾಂತೇಶ್ ಕೆ ಟಿಕೆಟ್ ನೀಡಿ ಎಂದು ಕೇಳಬಹುದು. ಅದು ಸಾಧ್ಯವಾಗದಿದ್ದರೆ ಪಕ್ಷಕ್ಕೆ ಅಥವಾ ಪಕ್ಷದಿಂದ ಆಯ್ಕೆಯಾದ ಅಭ್ಯರ್ಥಿಗೆ ಸಹಕರಿಸದೆ ಇರಬಹುದು. ಇದೇ ವಾತಾವರಣ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾಡಾಳ್ ವಿರೂಪಾಕ್ಷಪ್ಪ ಕ್ಷೇತ್ರದಲ್ಲೂ ಇದೆ.

ಇನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಷಯಕ್ಕೆ ಬರುವುದಾದರೆ ಯಾವಾಗ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆದರೂ ಅಂದಿನಿಂದಲೇ ಜಗದೀಶ್ ಶೆಟ್ಟರ್ ಪಕ್ಷದಲ್ಲಿ ಮೂಲೆಗುಂಪು ಆಗುತ್ತಾ ಬರುತ್ತಿದ್ದಾರೆ ಹಾಗಾಗಿ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯಕ್ಕೆ ಕುತೂಹಲವಾಗಿದೆ.

ಹೀಗೆ ಹಲವರು ಹಗರಣಗಳಿಂದ ತಮ್ಮ ವರ್ಚಸ್ಸನ್ನು ಕಳೆದುಕೊಂಡಿದ್ದರೆ, ಇನ್ನೂ ಕೆಲವರು ಬಿಜೆಪಿಯ ಅಲಿಖಿತ

ನಿಯಮದ ಪ್ರಕಾರ ನಿವೃತ್ತಿಯ ಅಂಚಿನಲ್ಲಿದ್ದಾರೆ.

ದಲಿತ ಸಮುದಾಯದ ನಾಯಕ ಗೋವಿಂದ್ ಕಾರಜೋಳ ಸ್ಥಿತಿ ಇದೆ ಆಗಿದೆ ಆದರೆ ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ಗೋವಿಂದ್ ಕಾರಜೋಳ ಪಕ್ಷಕ್ಕೆ ತಿರುಗಿ ಬೀಳುವುದು ಕಷ್ಟ ಪಕ್ಷ ಹೇಳಿದಂತೆ ಕೇಳಬಹುದು.

ಒಟ್ಟಿನಲ್ಲಿ ಈ ಸಲದ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ಆಸೆ ಇಟ್ಟುಕೊಂಡಿದೆ. ಆದರೆ ಭ್ರಷ್ಟಾಚಾರದ ಆರೋಪ ಬೆಲೆ ಏರಿಕೆ ಇನ್ನೂ ಹತ್ತಾರು ಆರೋಪಗಳನ್ನು ಹೋತ್ತಿರುವ ಹಾಲಿ ಸರ್ಕಾರಕ್ಕೆ ಅಷ್ಟು ಸ್ಥಾನ ಸಿಗುತ್ತಾ ಸಮೀಕ್ಷೆಗಳ ಪ್ರಕಾರ ಬಿಜೆಪಿ ಸರ್ಕಾರ ಬರುವುದೇ ಡೌಟ್ ಎನ್ನುವ ಅಂಶ ಎಲ್ಲೆಡೆ ಬಹಿರಂಗವಾಗಿದೆ ಹಾಗಾಗಿ ಬಿಜೆಪಿ ಹೈಕಮಾಂಡ್ ಒಂದಷ್ಟು ಹೊಸ ಮುಖಗಳಿಗೆ ವರ್ಚಸ್ಸು ಇರುವ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಇದೆ, ಇವೆಲ್ಲ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ..

ರಘುರಾಜ್ ಹೆಚ್. ಕೆ ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...