Home ರಾಜ್ಯತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸರಳ ಸುಂದರ 75ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ!!

ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸರಳ ಸುಂದರ 75ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ!!

by EDITOR NEWS WARRIORS
1 comment


ರಾಜ್ಯ ಸರ್ಕಾರಿ ನೌಕರರ ಸಂಘ,ತಾಲ್ಲೂಕು ಶಾಖೆ ತೀರ್ಥಹಳ್ಳಿಯಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಟಿ ವಿ ಸತೀಶ ಧ್ವಜಾರೋಹಣ ನೆರವೇರಿಸಿದರು. ಹಿರಿಯ ನಾಗರೀಕ ಕಾಡಪ್ಪ ಗೌಡರು ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನಗಳನ್ನು ಸ್ಮರಿಸಿ ಇಂದಿನ ಹಾಗೂ ಮುಂದಿನ ಪೀಳಿಗೆ ಅವರಿಗೆ ಸದಾ ಕೃತಜ್ಞರಾಗಿರಬೇಕು ಎಂದರು.
ಸಂಘದ ಕಾರ್ಯದರ್ಶಿ ರಾಮು ಬಿ, ಉಪಾಧ್ಯಕ್ಷರುಗಳಾದ ಸುಭಾಷ್ ಬಾಬು, ಸುಷ್ಮ ಎಸ್ ಪಿ, ಜಂಟಿ ಕಾರ್ಯದರ್ಶಿ ಕೌಶಿಕ್, ಕ್ರೀಡಾ ಕಾರ್ಯದರ್ಶಿ ಜಯಪ್ರಕಾಶ್, ನಿಕಟಪೂರ್ವ ಗೌರವಾಧ್ಯಕ್ಷ ಆರ್ ಎಂ ಧರ್ಮಕುಮಾರ್, ಶಿರಸ್ತೇದಾರ್ ಮೇಘರಾಜ್, ಗ್ರಾಮ ಲೆಕ್ಕಾಧಿಕಾರಿ ವಿಘ್ನೇಶ್ ಮತ್ತಿತರರು ಇದ್ದರು.
ಸ್ವಾತಂತ್ರೋತ್ಸವದ ಪ್ರಯುಕ್ತ ಸಂಘದ ವತಿಯಿಂದ ಸತತ ಐದನೇ ವರ್ಷದ ರಕ್ತದಾನದಲ್ಲಿ ಪಾಲ್ಗೊಂಡ ಸಂಘದ ಪದಾಧಿಕಾರಿಗಳು, ಸದಸ್ಯರು, ಸಹೃದಯಿ ನಾಗರೀಕ ಬಂಧುಗಳು ರೋಟರಿ ಐಎಂಎ ರಕ್ತನಿಧಿಯಲ್ಲಿ ಉತ್ಸಾಹ ಸಡಗರ ಸಂಭ್ರಮದಿಂದ ರಕ್ತದಾನ ಮಾಡಿದರು. ತಹಶಿಲ್ದಾರ್ ಡಾ. ಶ್ರೀಪಾದ ಆಗಮಿಸಿ ಸಂಘದ ನಿರಂತರ ಸಮಾಜಮುಖಿ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.


ತಾಲ್ಲೂಕು ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಕಟ್ಟೆ ಮಂಜುನಾಥ್ ಮತ್ತು ಸಂಘದ ಕ್ರೀಡಾ ಕಾರ್ಯದರ್ಶಿ ಜಯಪ್ರಕಾಶ್ ನೇತೃತ್ವದ ಕಂದಾಯ ಇಲಾಖಾ ತಂಡ, ಸಂಘದ ಉಪಾಧ್ಯಕ್ಷ ರಾಘವೇಂದ್ರ ಎಸ್ ನೇತೃತ್ವದ ಆರ್ ಡಿ ಪಿ ಆರ್ ತಂಡ, ಜಂಟಿ ಕಾರ್ಯದರ್ಶಿ ಕೌಶಿಕ್ ನೇತೃತ್ವದ ಕೃಷಿ ಇಲಾಖಾ ತಂಡ, ಉಪಾಧ್ಯಕ್ಷೆ ಸುಷ್ಮ ಎಸ್ ಪಿ ನೇತೃತ್ವದ ಭೂಮಾಪನ ತಂಡ, ಆರಕ್ಷಕ ಉಪನಿರೀಕ್ಷಕರಾದ ಎಲ್ಲಪ್ಪನವರ್ ನೇತೃತ್ವದ ಪೋಲಿಸ್ ತಂಡ, ರಾಘವೇಂದ್ರ ನೇತೃತ್ವದ ಆರೋಗ್ಯ ಇಲಾಖಾ ತಂಡಗಳ ಜೊತೆಗೆ ಉಪನ್ಯಾಸಕ ಕೆ ನಾಗಭೂಷಣ, ಮಾರಿಕಾಂಬ ಡ್ರೈವಿಂಗ್ ಶಾಲೆಯ ಕವಿರಾಜ್, ಸುಭಾಷ್, ರಜತ್ ಮೋಟರ್ಸ್ ನ ಸುರೇಶ್ ಶೆಟ್ಟಿ, ಕೃಷಿಕ ಮಹೇಶ್ವರ, ಉದ್ಯಮಿ ಯಜ್ಞನಾರಾಯಣ ಉಡುಪ, ವಿದ್ಯಾರ್ಥಿ ನಚಿಕೇತ್ ಎಸ್ ಶೆಟ್ಟಿ ಮುಂತಾದವರು ರಕ್ತದಾನ ಮಾಡಿ ಸಂಭ್ರಮಿಸಿದರು.


ಏಳು ಜನ ಇದೇ ಪ್ರಥಮ ಬಾರಿಗೆ ರಕ್ತದಾನ ಮಾಡುವ ಮೂಲಕ ರಕ್ತದಾನಿಗಳ ತಂಡಕ್ಕೆ ಸೇರ್ಪಡೆಗೊಂಡಿದ್ದು ವಿಶೇಷವಾಗಿತ್ತು
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿವಾಗಿ ಪಾಲ್ಗೊಂಡು ಎಪ್ಪತ್ತೈದನೇ ಸ್ವಾತಂತ್ರೋತ್ಸವದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಹಕರಿಸಿದ ಎಲ್ಲಾ ಸಹೃದಯಿಗಳಿಗೂ ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

Related Articles

1 comment

Manuelcic October 15, 2025 - 5:31 pm

В обзорной статье вы найдете собрание важных фактов и аналитики по самым разнообразным темам. Мы рассматриваем как современные исследования, так и исторические контексты, чтобы вы могли получить полное представление о предмете. Погрузитесь в мир знаний и сделайте шаг к пониманию!
Ознакомиться с деталями – https://vivod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...