Saturday, June 14, 2025
Google search engine
Homeರಾಜ್ಯನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?

ಬೆಂಗಳೂರು>ಆಗಸ್ಟ್15> ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು ಈ ದಿನಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ.

ಇಂದು ಸಂಗೊಳ್ಳಿ ರಾಯಣ್ಣರ ಜನ್ಮದಿನವೂ ಆಗಿದೆ
ಧ್ವಜಾರೋಹಣ ನೆರವೇರಿಸಿದ ಬಳಿಕ ಭಾಷಣ ಆರಂಭಿಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ರಾಣಿ ಚೆನ್ನಮ್ಮ ನಮ್ಮೆಲ್ಲರ ಅಭಿಮಾನದ ಸಂಕೇತ. ಸಂಗೊಳ್ಳಿ ರಾಯಣ್ಣರ ಜನ್ಮದಿನವೂ ಇಂದೇ ಆಗಿದೆ.
ರಾಯಣ್ಣರ ತ್ಯಾಗ, ಬಲಿದಾನ ಬಹಳ ಮಹತ್ವದ್ದಾಗಿದೆ. ರಾಯಣ್ಣ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಅವರ ಜನ್ಮ ದಿನ ಆಚರಿಸುತ್ತಿರುವುದು ನಮಗೆ ಖುಷಿಯ ವಿಚಾರ. ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಸ್ಮರಣೆ ಮಾಡಬೇಕು. ಅನಾಮಧೇಯ ಸ್ವಾತಂತ್ರ್ಯ ಸೇನಾನಿಗಳಿಗೆ ಭಾವಪೂರ್ಣ, ಭಕ್ತಿಪೂರ್ಣ ನಮನ ಎಂದು ನಮನ ಸಲ್ಲಿಸಿದ್ದಾರೆ.

ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭ


ಭಾರತ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕವಾಗಿ ವಿಶ್ವದ ಗಮನವನ್ನು ಸೆಳೆದಿದೆ. ಗ್ರಾಮಗಳಿಂದ ಬಾಹ್ಯಾಕಾಶದವರೆಗೂ ಪ್ರಧಾನಿ ಮೋದಿ ಹಲವು ಯೋಜನೆ ಕೊಟ್ಟಿದ್ದಾರೆ. ಇಂದಿನಿಂದಲೇ ನವ ಕರ್ನಾಟಕ ನಿರ್ಮಾಣ ಆರಂಭವಾಗುತ್ತದೆ. ಹೊಸ ಚಿಂತನೆ, ಹೊಸ ದಾರಿ, ಹೊಸ ದಿಕ್ಸೂಚಿ ಇದೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ.

ರೈತರ ಬದುಕಿನಲ್ಲಿ ಕ್ರಾಂತಿ….

ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತನನ್ನು ಕೇಂದ್ರ ಬಿಂದುವಾಗಿ ಅಭಿವೃದ್ಧಿ ಮಾಡಬೇಕು. ರೈತ ಕೇಂದ್ರಿತ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ. ರೈತನ ಶ್ರಮ, ಕೂಲಿಕಾರನ ಬೆವರಿನಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ ಕೊಡಬೇಕು. ಕೃಷಿ ಕ್ಷೇತ್ರದಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ, ಕೈಗಾರಿಕಾ ಕ್ಷೇತ್ರದಲ್ಲಿ ಶೇ.4ರಷ್ಟು ಬೆಳವಣಿಗೆಯಾಗುತ್ತೆ, ಸೇವಾ ವಲಯದಲ್ಲಿ ಶೇ.10ರಷ್ಟು ಬೆಳವಣಿಗೆಯಾಗುತ್ತೆ ಎಂದರು.

ನನಗೆ 20 ತಿಂಗಳು ಮಾತ್ರ ಅಧಿಕಾರ ಇದೆ ಎಂದು ನೆನಪಿಸಿಕೊಂಡ ಮುಖ್ಯಮಂತ್ರಿಗಳು….

ಎಲ್ಲ ಯೋಜನೆ ಮನೆ ಬಾಗಿಲಿಗೆ ತಲುಪುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತೆ. ಬೆಳವಣಿಗೆ ಅಂದರೆ ಕೇವಲ ಅಂಕಿ ಅಂಶವಲ್ಲ. ರಾಜ್ಯದ ಪ್ರತಿಯೊಬ್ಬರ ಬದುಕು ಹಸನಾಗಬೇಕು. ಪ್ರತಿ ಕುಟುಂಬಕ್ಕೂ ಸರ್ಕಾರದ ಯೋಜನೆ ಮುಟ್ಟಬೇಕು. ದೀರ್ಘಾವಧಿ, ಅಲ್ಪಾವಧಿ ಯೋಜನೆಗಳನ್ನು ಮಾಡುತ್ತೇನೆ. ನನಗೆ 20 ತಿಂಗಳು ಮಾತ್ರ ಅಧಿಕಾರ ಇದೆ. ಅಲ್ಪಾವಧಿ ಯೋಜನೆಗಳನ್ನು ಶೇ.100ರಷ್ಟು ಮಾಡುತ್ತೇವೆ.

ಕೋರೋಣ ಸರ್ಕಾರಕ್ಕೆ ಸವಾಲು….

ಕೊರೊನಾದಿಂದ ರಾಜ್ಯದ ಜನ ಸಂಕಷ್ಟ ಅನುಭವಿಸಿದ್ದಾರೆ. ಕೊರೊನಾ ಒಂದು ಸವಾಲು. ಕೊರೊನಾ ನಿಯಂತ್ರಣಕ್ಕೆ ಬಿಎಸ್‌ವೈ ನಿರಂತರ ಪ್ರಯತ್ನಿಸಿದ್ದರು. ಆರೋಗ್ಯ ಇಲಾಖೆಗೆ ಹೆಚ್ಚು ಹಣಕಾಸು ನೆರವು ನೀಡಿದ್ದಾರೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಸಹಾಯವಾಗಿದೆ. ಯಡಿಯೂರಪ್ಪಗೆ ಧನ್ಯವಾದ ತಿಳಿಸುತ್ತೇನೆ. ಜೀವ ಜೀವನವನ್ನು ಸಮತೋಲವಾಗಿ ಕಾಪಾಡಲು ಕೊರೊನಾ ತಡೆಗೆ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ.

ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು….


ಶೇ.100ರಷ್ಟು ಘನತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು, ಸೌರವಿದ್ಯುತ್, ಡಿಜಿಟಲ್ ಗ್ರಂಥಾಲಯಗಳೊಂದಿಗೆ ಶಾಲೆ ಸ್ಥಾಪನೆ. ಶಾಲೆಗಳ ಸಮಗ್ರ ಮೂಲಸೌಕರ್ಯದೊಂದಿಗೆ ಅಭಿವೃದ್ಧಿ ಮಾಡಲಾಗುವುದು ಎಂದರು.

ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಗೆ ಚಾಲನೆ…


ಇನ್ನು ರೈತ, ನೇಕಾರ ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ, ಮಾರಾಟಕ್ಕೆ ವಿಶೇಷ ಪ್ರೋತ್ಸಾಹ ನೀಡಲು ಸಂಸ್ಥೆಗಳ ಆರಂಭ ಮಾಡಲಾಗುವುದು. 750 ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಸ್ಥೆಗೆ 30 ಲಕ್ಷ ರೂ.ನಂತೆ 3 ವರ್ಷ ನೀಡಲಾಗುವುದು. ಇದಕ್ಕಾಗಿ 225 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಅಮೃತ ರೈತ ಉತ್ಪಾದಕ ಸಂಸ್ಥೆ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದಾರೆ.

ಅಮೃತ ನಿರ್ಮಲ ನಗರ ಯೋಜನೆಗೆ ಚಾಲನೆ..
ಆಯ್ದ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಲು ಅಮೃತ ನಿರ್ಮಲ ನಗರ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ಪ್ರತಿ ಸ್ಥಳೀಯ ಸಂಸ್ಥೆಗೆ 1 ಕೋಟಿ ರೂಪಾಯಿ ನೀಡಲಾಗುವುದು
ಇದಕ್ಕಾಗಿ ಒಟ್ಟು 75 ಕೋಟಿ ರೂ. ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಅಮೃತ ಶಾಲಾ ಸೌಲಭ್ಯ ಯೋಜನೆಗೆ ಚಾಲನೆ..


ಆಯ್ದ 750 ಶಾಲೆಗಳಿಗೆ ಸುಸಜ್ಜಿತ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಶೌಚಾಲಯ ಇತ್ಯಾದಿ ಸಮಗ್ರ ಸೌಲಭ್ಯಗಳಿಗಾಗಿ 750 ಶಾಲೆಗಳಿಗೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು. ಇದಕ್ಕಾಗಿ ಒಟ್ಟು 75 ಕೋಟಿ ರೂ. ವೆಚ್ಚ ಮಾಡಲಾಗಿದೆ.

750 ಅಂಗನವಾಡಿ ಕೇಂದ್ರಗಳು ಮೇಲ್ದರ್ಜೆಗೆ ಅಮೃತ ಅಂಗನವಾಡಿ ಯೋಜನೆಯಡಿ ಪ್ರತಿ ಅಂಗನವಾಡಿ 1 ಲಕ್ಷ ರೂಪಾಯಿ ನೀಡಲಾಗುವುದು. ಇದಕ್ಕಾಗಿ 7.5 ಕೋಟಿ ರೂ. ವಿನಿಯೋಗಿಸಲಾಗುವುದು. ಅಮೃತ ಸ್ವಸಹಾಯ ಕಿರು ಉದ್ದಿಮೆಯಡಿ 7,500 ಸ್ವಸಹಾಯ ಗುಂಪು ಉದ್ದಿಮೆಗಳಾಗಿ ಬದಲಾವಣೆ ಮಾಡಿ ಕಿರು ಉದ್ಯಮ ಸಂಸ್ಥೆಗಳಾಗಿ ರೂಪಿಸಲು ತಲಾ 1 ಲಕ್ಷ ರೂ. ನೀಡಲಾಗುತ್ತದೆ ಎಂದರು….

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!