Home ರಾಜ್ಯAppointment of Scheduled Castes and Scheduled Tribes as Chancellor of Hampi Kannada University..?! ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇದುವರೆಗೂ ಕುಲಪತಿಗಳಾಗಿ ನೇಮಕ ಆಗಿಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರು..!! ಈ ಬಾರಿಯಾದರೂ ಈಡೇರುತ್ತಾ ಹಲವು ದಿನದ ಬೇಡಿಕೆ..?!

Appointment of Scheduled Castes and Scheduled Tribes as Chancellor of Hampi Kannada University..?! ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇದುವರೆಗೂ ಕುಲಪತಿಗಳಾಗಿ ನೇಮಕ ಆಗಿಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರು..!! ಈ ಬಾರಿಯಾದರೂ ಈಡೇರುತ್ತಾ ಹಲವು ದಿನದ ಬೇಡಿಕೆ..?!

by EDITOR NEWS WARRIORS
0 comments

ಕರ್ನಾಟಕ ರಾಜ್ಯದ ಏಕೈಕ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ವಿಶ್ವವಿದ್ಯಾನಿಲಯ ಹೊಸದಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯಲ್ಲಿರುವ ಉತ್ತಮವಾದ ಕ್ಯಾಂಪಸ್ ಅನ್ನು ಒಳಗೊಂಡ ವಿಶ್ವವಿದ್ಯಾನಿಲಯವಾಗಿದೆ.

ರಾಜ್ಯದ ಏಕೈಕ ಕನ್ನಡ ವಿಶ್ವವಿದ್ಯಾನಿಲಯ ಆಗಿರುವ ಹಂಪಿ ವಿಶ್ವವಿದ್ಯಾನಿಲಯಕ್ಕೆ ಇಲ್ಲಿಯವರೆಗೂ ನೇಮಕವಾಗಿರುವ ಕುಲಪತಿಗಳು ಪ್ರಬಲ ಸಮುದಾಯಕ್ಕೆ ಸೇರಿದ ಒಕ್ಕಲಿಗ ಸಮುದಾಯದ ಇಬ್ಬರು ಹಾಗೂ ಲಿಂಗಾಯತ ಸಮುದಾಯದ ಇಬ್ಬರಿಗೆ ಕುರುಬ ಸಮುದಾಯದ ಇಬ್ಬರಿಗೆ ಹಾಗೂ ಒಬಿಸಿ ಸಮುದಾಯಕ್ಕೆ ಸೇರಿದ ಇಬ್ಬರನ್ನು ಕುಲಪತಿಗಳನ್ನಾಗಿ ನೇಮಿಸಲಾಗಿದೆ.ಆದರೆ ಇದುವರೆಗೂ ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಸೇರಿದವರನ್ನು ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಗಳನ್ನಾಗಿ ನೇಮಕಾತಿ ಮಾಡಿರುವುದಿಲ್ಲ. ಹಾಲಿ ಹಿಂದೆ ಉಪಕುಲಪತಿಯಾಗಿದ್ದ ಸ.ಚಿ ರಮೇಶ್ ಅವರ ಅಧಿಕಾರ ಅವಧಿ ಕಳೆದ ತಿಂಗಳು ಅಂದರೆ ದಿನಾಂಕ 21.2.2023 ರಂದು ಕೊನೆಗೊಂಡಿದೆ.

ವಿಶ್ವವಿದ್ಯಾನಿಲಯದ ಅಧಿನಿಯಮ ಮತ್ತು ಪರಿನಿಯಮದ ಪ್ರಕಾರ ಈಗಾಗಲೇ ಕುಲಪತಿಗಳ ನೇಮಕಾತಿ ಸಂಬಂಧಿಸಿದಂತೆ ಡಾ/ ಎಸ್, ಕೆ ಸೈದಾಪುರ್ ಅವರ ಅಧ್ಯಕ್ಷತೆಯಲ್ಲಿ ಡಾ/ಸಿದ್ದು ಆಲ್ಗೂರು ಮತ್ತು ಡಾ/ ಎನ್ ಸಿ ಗೌತಮ್ ಸದಸ್ಯರನ್ನು ಒಳಗೊಂಡ ಸೋಧನಾ ಸಮಿತಿಯನ್ನು ದಿನಾಂಕ 20-3-2023 ರಂದು ನಡೆಸಲಾಗಿದೆ.

ಈ ಸಮಿತಿಯ ವರದಿಯ ಆಧಾರದ ಮೇಲೆ ಕುಲಪತಿಗಳ ನೇಮಕಾತಿ ನಡೆಯುತ್ತದೆ. ಹಾಗಾಗಿ ಈ ಬಾರಿ ಆದರೂ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರನ್ನು ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಯಾಗಿ ನೇಮಕಾತಿ ಮಾಡಲಾಗುತ್ತದೆಯೇ..?! ಎನ್ನುವುದನ್ನು ಕಾದು ನೋಡಬೇಕಾಗಿದೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...