Wednesday, April 30, 2025
Google search engine
Homeರಾಜ್ಯAppointment of Scheduled Castes and Scheduled Tribes as Chancellor of Hampi Kannada...

Appointment of Scheduled Castes and Scheduled Tribes as Chancellor of Hampi Kannada University..?! ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇದುವರೆಗೂ ಕುಲಪತಿಗಳಾಗಿ ನೇಮಕ ಆಗಿಲ್ಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರು..!! ಈ ಬಾರಿಯಾದರೂ ಈಡೇರುತ್ತಾ ಹಲವು ದಿನದ ಬೇಡಿಕೆ..?!

ಕರ್ನಾಟಕ ರಾಜ್ಯದ ಏಕೈಕ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ವಿಶ್ವವಿದ್ಯಾನಿಲಯ ಹೊಸದಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಯಲ್ಲಿರುವ ಉತ್ತಮವಾದ ಕ್ಯಾಂಪಸ್ ಅನ್ನು ಒಳಗೊಂಡ ವಿಶ್ವವಿದ್ಯಾನಿಲಯವಾಗಿದೆ.

ರಾಜ್ಯದ ಏಕೈಕ ಕನ್ನಡ ವಿಶ್ವವಿದ್ಯಾನಿಲಯ ಆಗಿರುವ ಹಂಪಿ ವಿಶ್ವವಿದ್ಯಾನಿಲಯಕ್ಕೆ ಇಲ್ಲಿಯವರೆಗೂ ನೇಮಕವಾಗಿರುವ ಕುಲಪತಿಗಳು ಪ್ರಬಲ ಸಮುದಾಯಕ್ಕೆ ಸೇರಿದ ಒಕ್ಕಲಿಗ ಸಮುದಾಯದ ಇಬ್ಬರು ಹಾಗೂ ಲಿಂಗಾಯತ ಸಮುದಾಯದ ಇಬ್ಬರಿಗೆ ಕುರುಬ ಸಮುದಾಯದ ಇಬ್ಬರಿಗೆ ಹಾಗೂ ಒಬಿಸಿ ಸಮುದಾಯಕ್ಕೆ ಸೇರಿದ ಇಬ್ಬರನ್ನು ಕುಲಪತಿಗಳನ್ನಾಗಿ ನೇಮಿಸಲಾಗಿದೆ.ಆದರೆ ಇದುವರೆಗೂ ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಸೇರಿದವರನ್ನು ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಗಳನ್ನಾಗಿ ನೇಮಕಾತಿ ಮಾಡಿರುವುದಿಲ್ಲ. ಹಾಲಿ ಹಿಂದೆ ಉಪಕುಲಪತಿಯಾಗಿದ್ದ ಸ.ಚಿ ರಮೇಶ್ ಅವರ ಅಧಿಕಾರ ಅವಧಿ ಕಳೆದ ತಿಂಗಳು ಅಂದರೆ ದಿನಾಂಕ 21.2.2023 ರಂದು ಕೊನೆಗೊಂಡಿದೆ.

ವಿಶ್ವವಿದ್ಯಾನಿಲಯದ ಅಧಿನಿಯಮ ಮತ್ತು ಪರಿನಿಯಮದ ಪ್ರಕಾರ ಈಗಾಗಲೇ ಕುಲಪತಿಗಳ ನೇಮಕಾತಿ ಸಂಬಂಧಿಸಿದಂತೆ ಡಾ/ ಎಸ್, ಕೆ ಸೈದಾಪುರ್ ಅವರ ಅಧ್ಯಕ್ಷತೆಯಲ್ಲಿ ಡಾ/ಸಿದ್ದು ಆಲ್ಗೂರು ಮತ್ತು ಡಾ/ ಎನ್ ಸಿ ಗೌತಮ್ ಸದಸ್ಯರನ್ನು ಒಳಗೊಂಡ ಸೋಧನಾ ಸಮಿತಿಯನ್ನು ದಿನಾಂಕ 20-3-2023 ರಂದು ನಡೆಸಲಾಗಿದೆ.

ಈ ಸಮಿತಿಯ ವರದಿಯ ಆಧಾರದ ಮೇಲೆ ಕುಲಪತಿಗಳ ನೇಮಕಾತಿ ನಡೆಯುತ್ತದೆ. ಹಾಗಾಗಿ ಈ ಬಾರಿ ಆದರೂ ಸಾಮಾಜಿಕ ನ್ಯಾಯ ದೊರಕಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಮುದಾಯದವರನ್ನು ಕನ್ನಡ ವಿಶ್ವವಿದ್ಯಾನಿಲಯಕ್ಕೆ ಕುಲಪತಿಯಾಗಿ ನೇಮಕಾತಿ ಮಾಡಲಾಗುತ್ತದೆಯೇ..?! ಎನ್ನುವುದನ್ನು ಕಾದು ನೋಡಬೇಕಾಗಿದೆ..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...