Wednesday, April 30, 2025
Google search engine
Homeದಾವಣಗೆರೆದಾವಣಗೆರೆ ಬೆರಳು ಮುದ್ರೆ ಘಟಕದ ಹೆಡ್ ಕಾನ್ಸ್ಟೇಬಲ್ ಅಕ್ತರ್ ಎಸ್ ,ಎಂ ಗೆ ಮುಖ್ಯಮಂತ್ರಿ ಪದಕ..!!...

ದಾವಣಗೆರೆ ಬೆರಳು ಮುದ್ರೆ ಘಟಕದ ಹೆಡ್ ಕಾನ್ಸ್ಟೇಬಲ್ ಅಕ್ತರ್ ಎಸ್ ,ಎಂ ಗೆ ಮುಖ್ಯಮಂತ್ರಿ ಪದಕ..!! ಅಭಿನಂದನೆಗಳನ್ನು ಸಲ್ಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ರಿಶ್ವಂತ್ ಹಾಗೂ ಜಿಲ್ಲಾ ಬೆರಳುಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್..!!

ದಾವಣಗೆರೆ : ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಪ್ರಸ್ತುತ ಪದನ್ನೂತಿ ಹೊಂದಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಕ್ತರ್ ಎಸ್ ,ಎಂ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.

ಏನು ಇವರ ಕಾರ್ಯಸಾಧನೆಗಳು :

ಜಗಳೂರು ಟೌನ್ ಎಡಿ ಕಾಲೋನಿ ಮಹಮದ್ ಅಲಿ ಮತ್ತು ಯಮನಬಾಯಿ ದಂಪತಿಗಳ ಮಗನಾಗಿ ಜನಿಸಿದ ಇವರು ಎಂ ಎ ಕನ್ನಡ ಪದವೀಧರರಾಗಿದ್ದು. 2011ರಲ್ಲಿ ಪೊಲೀಸ್ ಇಲಾಖೆಗೆ ಸೇರುತ್ತಾರೆ. ನಂತರ ಚಿತ್ರದುರ್ಗ ಹಾಗೂ ಶಿವಮೊಗ್ಗದಲ್ಲಿ ಬೆರಳು ಮುದ್ರೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಾರೆ.

ನಂತರ ನವದೆಹಲಿಯಲ್ಲಿ 2015‌ ರಲ್ಲಿ ಜರಗುವ ಅಖಿಲ ಭಾರತ ಬೆರಳು ಮುದ್ರೆ ತಜ್ಜರ ಪರೀಕ್ಷೆ ಪಾಸು ಮಾಡಿ ದಾವಣಗೆರೆ ಬೆರಳು ಮುದ್ರೆ ಘಟಕಕ್ಕೆ ಹೆಡ್ ಕಾನ್ಸ್ಟೇಬಲ್ ಆಗಿ ಪದನ್ನೂತಿ ಹೊಂದುತ್ತಾರೆ.

170ಕ್ಕೂ ಹೆಚ್ಚು ಸ್ವತ್ತು ಕಳುವು ಪ್ರಕರಣಗಳ ಪತ್ತೆ ಮತ್ತು 4 ಕೊಲೆ ಪ್ರಕರಣಗಳ ಪತ್ತೆ ಹಚ್ಚಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಸಂಶೆಗೆ ಪಾತ್ರರಾಗಿ 159 ನಗದು ಬಹುಮಾನ ಶ್ಲಾಘನ ಪತ್ರಗಳನ್ನು ಪಡೆದಿದ್ದಾರೆ.

ಪ್ರಸ್ತುತ 2021/ 22ನೇ ಸಾಲಿನಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ಭೇದಿಸಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ…

ಇವರ ಈ ಸಾಧನೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ರಿಶ್ವಂತ್ ಹಾಗೂ ಬೆರಳು ಮುದ್ರೆ ಘಟಕದ ಡಿವೈಎಸ್ಪಿ ರುದ್ರೇಶ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ….

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...