Thursday, May 1, 2025
Google search engine
Homeರಾಜ್ಯಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಟೈರ್ ಸುಟ್ಟು ಪ್ರತಿಭಟನೆಯ ಬಿಸಿ ಮುಟ್ಟಿಸಿದ ಅಭಿಮಾನಿಗಳು..!! ನಾಳೆ ಪತ್ರಿಕಾಗೋಷ್ಠಿ...

ಶಿವಮೊಗ್ಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಟೈರ್ ಸುಟ್ಟು ಪ್ರತಿಭಟನೆಯ ಬಿಸಿ ಮುಟ್ಟಿಸಿದ ಅಭಿಮಾನಿಗಳು..!! ನಾಳೆ ಪತ್ರಿಕಾಗೋಷ್ಠಿ ಕರೆದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸುಂದರೇಶ್..!!

ಶಿವಮೊಗ್ಗ: ಟಿಕೆಟ್ ಗಾಗಿ ತೀವ್ರ ಕಸರತ್ತು ನಡೆಸಿದ್ದ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪಕ್ಷದ ಹೈಕಮಾಂಡ್ ನಿರಾಸೆ ಮಾಡಿದೆ.

ಪ್ರಬಲ ಆಕಾಂಕ್ಷಿಗಳಾಗಿದ್ದ ಮಾಜಿ ಎಂಎಲ್ಎ ಕೆಬಿ ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್, ಗ್ರಾಮಾಂತರದ ನಾರಾಯಣಸ್ವಾಮಿ, ಜಿ ಪಲ್ಲವಿ, ರವಿಕುಮಾರ್ ಅವರಿಗೆ ತೀವ್ರ ನಿರಾಶೆಯಾಗಿದೆ.

ಇನ್ನೊಬ್ಬ ಆಕಾಂಕ್ಷಿ ಮಹಾನಗರ ಪಾಲಿಕೆಯ ಸದಸ್ಯರಾದ ಮಾಜಿ ಎಂಎಲ್ಎ ಚಂದ್ರಶೇಖರಪ್ಪ ಪುತ್ರರಾದ ಯೋಗೀಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಇನ್ನೊಂದು ಕಡೆ ಶಿಕಾರಿಪುರದಲ್ಲಿ ನಾಗರಾಜ್ ಗೌಡ ಬದಲಿಗೆ ಗೋಣಿ ಮಾಲ್ತೇಶ್ ಕೆ ಟಿಕೆಟ್ ನೀಡಲಾಗಿದೆ.

ಇವೆಲ್ಲ ಬೆಳವಣಿಗೆಗಳಿಂದ ನೊಂದ‌ ಟಿಕಟ್ ಆಕಾಂಕ್ಷಿಗಳ ಅಭಿಮಾನಿಗಳು ಕಾರ್ಯಕರ್ತರು ಟೈರ್ ಸುಟ್ಟು ಪ್ರತಿಭಟನೆ ಮಾಡುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಗೆ ತಮ್ಮ ತಮ್ಮ ನಾಯಕರಿಗೆ ಟಿಕೆಟ್ ನೀಡಬೇಕು ಟಿಕೆಟ್ ಹಂಚಿಕೆ ಪ್ರಕ್ರಿಯೆ ಸರಿಯಿಲ್ಲ ಮತ್ತೆ ಪರಿಶೀಲನೆ ನಡೆಸಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ…

ಗ್ರಾಮಾಂತರ ಭಾಗದಲ್ಲಿ ನಾರಾಯಣಸ್ವಾಮಿ ಪಕ್ಷೇತರ ಅಭ್ಯರ್ಥಿಯಾಗಿ, ಶಿಕಾರಿಪುರದಲ್ಲಿ ನಾಗರಾಜ್ ಗೌಡ ಪಕ್ಷೇತರ ಅಭ್ಯರ್ಥಿಯಾಗಿ, ನಿಲ್ಲಲು ತಯಾರಿ ನಡೆಸಿದ್ದಾರೆ…

ಇವೆಲ್ಲ ಬೆಳವಣಿಗೆಗಳ ಮಧ್ಯೆ ನಾಳೆ ಜಿಲ್ಲಾ ಅಧ್ಯಕ್ಷರಾದ ಸುಂದರೇಶ್ ಅವರು ಪತ್ರಿಕಾಗೋಷ್ಠಿ ಕರೆದಿದ್ದು ಟಿಕೆಟ್ ಹಂಚಿಕೆ ಬಗ್ಗೆ ಅಭಿಮಾನಿಗಳ ಕಾರ್ಯಕರ್ತರ ಆಕ್ರೋಶದ ಬಗ್ಗೆ ಮುಂದಿನ ಪಕ್ಷದ ನಿಲುವಿನ ಬಗ್ಗೆ ಯಾವ ನಿರ್ಧಾರ ಪ್ರಕಟಿಸುತ್ತಾರೆ ಕಾದು ನೋಡಬೇಕು…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...