Home ರಾಜ್ಯಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಕ್ಷಮೆ ಯಾಚಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ‌..!!

ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ‘ರಾಮನ ಅವತಾರ’ ಚಲನಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದು ಕ್ಷಮೆ ಯಾಚಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ‌..!!

by EDITOR NEWS WARRIORS
0 comments

ಬೆಂಗಳೂರು : ‘ರಾಮನ ಅವತಾರ’ ಎಂಬ ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ಕೋಟ್ಯಾಂತರ ಹಿಂದೂಗಳು ಅತ್ಯಂತ ಭಕ್ತಿಯಿಂದ ಪೂಜಿಸುವ ಮರ್ಯಾದ ಪುರುಷೋತ್ತಮ ಪ್ರಭು ಶ್ರೀ ರಾಮಚಂದ್ರನ ಚಾರಿತ್ರ್ಯಕ್ಕೆ ಕಳಂಕ ಬರುವಂತೆ ಚಿತ್ರಿಸಿದ್ದಾರೆ. ರಾಮನ ಅವತಾರ ರಘುಕುಲ ಸೋಮನ ಅವತಾರ ಎಂದು ಉಲ್ಲೇಖಿಸಿ ಚಿತ್ರದ ನಾಯಕ ಮಧ್ಯ ಸೇವಿಸುವುದು, ದುಶ್ಚಟಗಳಿಗೆ ದಾಸನಾಗಿರುವುದನ್ನು ತೋರಿಸಲಾಗಿದೆ. ಈ ರೀತಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ದೃಶ್ಯಗಳನ್ನು ತೆಗೆದು ಹಾಕಬೇಕು ಮತ್ತು ಬೇಷರತ್ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಮುಂದೆ ಕಾನೂನು ಕ್ರಮ ಜರುಗಿಸಲು ಮುಂದಾಗುತ್ತೇವೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ಮನವಿ ನೀಡಲಾಯಿತು‌

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ . ಮೋಹನ್ ಗೌಡ, ಹಿಂದೂ ಬ್ರಹ್ಮಚಾರಿ ಸಂಘದ . ಗಿರೀಶ್ ಕುಮಾರ್ ಬಿ, ನ್ಯಾಯವಾದಿ ಸುನೀಲ್ ಹೆಳವಾರ್, ವಕೀಲೆ ಸ್ವರಾಗ್ನೀ ಮೂರ್ತಿ, ಮಂಜುನಾಥ್ ರಾವ್, . ಪುರುಷೋತ್ತಮ, . ನರಸಿಂಹ ಮತ್ತಿತರ ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಿನಿಮಾದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗಿದೆ. ಇದು ಭಾರತೀಯ ದಂಡ ಸಂಹಿತೆ 295, 298 ಮತ್ತು 295 ಎ ಪ್ರಕಾರ ಗಂಭೀರ ಅಪರಾಧವಾಗಿದೆ. ಅದಲ್ಲದೇ ಸಿನಿಮಾಟೋಗ್ರಾಫ್ ಆಕ್ಟ್ 1952 ನ ಕಲಂ 5ಬಿ ಪ್ರಕಾರ ಇದು ಸೆನ್ಸಾರ್ ಮಂಡಳಿ ನಿಯಮದ ಉಲ್ಲಂಘನೆಯಾಗಿದೆ. ಇದರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಕಳೆದ ಸೋಮವಾರ, ಏಪ್ರಿಲ್ 17 ರಂದು ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧ್ಯಕ್ಷರಿಗೂ ಮನವಿ ಮಾಡಿದ್ದರು. ಇದೀಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ . ಬಿ.ಎಂ ಹರೀಶ್ ಇವರನ್ನು ಭೇಟಿ ಮಾಡಿ ಇಂತಹ ಅಹಿತಕರ ಘಟನೆಗಳು ಮುಂದುವರೆಯದಂತೆ ಎಚ್ಚರವಹಿಸಿ, ಚಲನಚಿತ್ರ ನಿರ್ಮಾಪಕರು ಮತ್ತು ನಿದೇರ್ಶಕರು, ತಂತ್ರಜ್ಞರಿಗೆ ಮತ್ತು ಈ ಚಿತ್ರದಲ್ಲಿ ಅಭಿನಯಿಸಿರುವ ನಟ, ನಟಿಯರಿಗೆ ಇನ್ನು ಮುಂದೆ ಈ ರೀತಿಯ ಆಕ್ಷೇಪಾರ್ಹ ದೃಶ್ಯಗಳು ಕಂಡುಬಾರದಂತೆ ಸೂಚನೆ ನೀಡಬೇಕು, ಯಾವುದೇ ಕಾರಣಕ್ಕೂ ಸಹ ಈ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಪಡೆಯಲು ವಾಣಿಜ್ಯ ಮಂಡಳಿ ಯಾವುದೇ ರೀತಿಯ ಶಿಪಾರಸ್ಸು ನೀಡಬಾರದೆಂದು ಮನವಿ ಮಾಡಿದ್ದಾರೆ..

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...