
ಇಂದು ದಾವಣಗೆರೆಯಲ್ಲಿ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ತಗಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತ ಪೊಲೀಸ್ ಸಿಬ್ಬಂದಿಯನ್ನು ಆರ್.ಚೇತನ್(28) ಎಂದು ಗುರುತಿಸಲಾಗಿದ್ದು.
ಇಂದು ಬೆಳಗ್ಗೆ ಹುಣಸಘಟ್ಟದಲ್ಲಿ ಫೈರಿಂಗ್ ಪ್ರಾಕ್ಟೀಸ್ ಮುಗಿಸಿ ವಾಪಾಸ್ಸಾಗಿದ್ದ ಚೇತನ್ ಬಳಿಕ ಡಿ.ಆರ್.ಶಸ್ತ್ರಾಗಾರದಲ್ಲಿ ಬಂದೂಕು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಏನಿದು ಘಟನೆ?
ಸ್ವಚ್ಛಗೊಳಿಸುತ್ತಿದ್ದ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ಚೇತನ್ ಅವರ ಕುತ್ತಿಗೆಯನ್ನು ಹೊಕ್ಕಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದ ಚೇತನ್ ಅವರು ಡಿ.ಆರ್.ಪೊಲೀಸ್ ಪೇದೆಯಾಗಿ 2012ರಲ್ಲಿ ಸೇವೆಗೆ ಸೇರಿದ್ದರು ಒಂಬತ್ತು ವರ್ಷ ಸೇವೆ ಸಲ್ಲಿಸಿ ದುರಂತವಾಗಿ ಮೃತ ಪಟ್ಟಿದ್ದಾರೆ…
ವರದಿ ..ರಘುರಾಜ್ ಹೆಚ್. ಕೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…