Friday, June 20, 2025
Google search engine
Homeರಾಜ್ಯBig breaking news: ಮಾಜಿ ಕಾಂಗ್ರೆಸ್ ಶಾಸಕ ಕೆಬಿ ಪ್ರಸನ್ನ ಕುಮಾರ್ ಜೆಡಿಎಸ್ ತೆಕ್ಕೆಗೆ...

Big breaking news: ಮಾಜಿ ಕಾಂಗ್ರೆಸ್ ಶಾಸಕ ಕೆಬಿ ಪ್ರಸನ್ನ ಕುಮಾರ್ ಜೆಡಿಎಸ್ ತೆಕ್ಕೆಗೆ ..?! ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ ರಾಜಕೀಯ ಲೆಕ್ಕಾಚಾರ ವರ್ಕೌಟ್ ಆಗುತ್ತಾ..?!

ಶಿವಮೊಗ್ಗ : ಕಾಂಗ್ರೆಸ್ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್ ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದ ಕಾರಣ ಅಸಮಾಧಾನ ಗೊಂಡು ಜೆಡಿಎಸ್ ಪಕ್ಷಕ್ಕೆ ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಸನ್ನ ಕುಮಾರ್ ಅವರನ್ನು ಜೆಡಿಎಸ್ ಗೆ ಆತ್ಮೀಯವಾಗಿ ಸೇರ್ಪಡೆಗೊಳಿಸಿಕೊಂಡಿದ್ದಾರೆ.

.

ಈ ಸಮಯದಲ್ಲಿ ಇತ್ತೀಚೆಗೆ ಬಿಜೆಪಿಗೆ ಗುಡ್ ಬೈ ಹೇಳಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆಗೊಂಡು ಬಿ ಫಾರಂ ತೆಗೆದುಕೊಂಡು ನಾಮಪತ್ರ ಸಲ್ಲಿಸಿರುವ ಬಿಜೆಪಿಯ ರೆಬೆಲ್ ನಾಯಕ ಆಯನೂರು ಮಂಜುನಾಥ್, ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಶ್ರೀಕಾಂತ್ ಜೊತೆಗಿದ್ದರು..

ಜೆಡಿಎಸ್ ಗೆ ಮಾಜಿ ಕಾಂಗ್ರೆಸ್ ಶಾಸಕ ಕೆ ,ಬಿ ಪ್ರಸನ್ನ ಕುಮಾರ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಯನೂರು ಮಂಜುನಾಥ್. ಜೆಡಿಎಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಶ್ರೀಕಾಂತ್ ರವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯ ಸಂದರ್ಭದಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು ಮಾಜಿ ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಅವರ ಸಂಘಟನೆ ದೊಡ್ಡದಿದೆ ಅವರು ಕೂಡ ಕಾಂಗ್ರೆಸ್ನ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಲಿಲ್ಲ ಆದರೆ ಅದೆಲ್ಲವನ್ನು ಮರೆತು ಉತ್ತಮ ಸರ್ಕಾರ ತರಬೇಕು ಎನ್ನುವ ಆಕಾಂಕ್ಷೆಯನ್ನು ಹೊಂದಿ ಇಡೀ ರಾಜ್ಯದ್ಯಂತ ಸಂಚಲನ ಉಂಟು ಮಾಡುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಬರುತ್ತಿರುವುದು ಸಂತೋಷದ ಸಂಗತಿ ಎಂದು ಹೇಳಿದರು..

ಇದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷಕ್ಕೆ ತುಂಬಾ ಅಪಾಯಕಾರಿ ಬೆಳವಣಿಗೆಯಾಗಿದ್ದು ಪಕ್ಷಕ್ಕೆ ಡ್ಯಾಮೇಜ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ..

ಹಾಗೆ ಈ ಬೆಳವಣಿಗೆ ಮುಂದಿನ ದಿನಗಳಲ್ಲಿ ಹಾಗೂ ಈ ಚುನಾವಣೆಗೆ ಜೆಡಿಎಸ್ ಪಕ್ಷಕ್ಕೆ ವರದಾನವಾದರೂ ಅಚ್ಚರಿಪಡಬೇಕಾಗಿಲ್ಲ…

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ರಾಜಕೀಯ ಲೆಕ್ಕಾಚಾರದ ಪ್ರಕಾರ ಶಿವಮೊಗ್ಗ ರಾಜಕೀಯದಲ್ಲಿ ಬ್ರಾಹ್ಮಣ, ಲಿಂಗಾಯತ ಕುರುಬ ಸಮುದಾಯದ ಮೂರು ಜನ ನಾಯಕರ ಒಂದುಗೂಡುವಿಕೆಯಿಂದ ಪಕ್ಷ ಇನ್ನಷ್ಟು ಬಲಿಷ್ಠ ವಾಗುವುದರಲ್ಲಿ ಸಂಶಯವಿಲ್ಲ ಎನ್ನುವ ರಾಜಕೀಯ ಲೆಕ್ಕಾಚಾರ ಜೆಡಿಎಸ್ ನ ನಾಯಕರದ್ದು ಏಕೆಂದರೆ ಪ್ರತಿಯೊಬ್ಬ ನಾಯಕರು ಅವರದೇ ಆದ ವರ್ಚಸ್ಸು ಹಾಗೂ ಮತಗಳನ್ನು ಹೊಂದಿದ್ದಾರೆ..

ಇವೆಲ್ಲವೂ ಕ್ರೂಡಿಕರಣವಾದರೆ ಜೆಡಿಎಸ್ ಪಕ್ಷಕ್ಕೆ ವರದಾನವಾಗುವುದರಲ್ಲಿ ಸಂಶಯವಿಲ್ಲ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!