Friday, June 20, 2025
Google search engine
Homeರಾಜ್ಯಪತ್ರಿಕಾ ಸಂವಾದದಲ್ಲಿ ಅಭಿವೃದ್ಧಿ ಹಾಗೂ ಸರ್ವೇ ಜನ ಸುಖಿನೋ ಭವಂತು ಮಂತ್ರ ಜಪಿಸಿದ ಬಿಜೆಪಿ ನಗರ...

ಪತ್ರಿಕಾ ಸಂವಾದದಲ್ಲಿ ಅಭಿವೃದ್ಧಿ ಹಾಗೂ ಸರ್ವೇ ಜನ ಸುಖಿನೋ ಭವಂತು ಮಂತ್ರ ಜಪಿಸಿದ ಬಿಜೆಪಿ ನಗರ ಅಭ್ಯರ್ಥಿ ಚನ್ನಬಸಪ್ಪ (ಚೆನ್ನಿ)..!!


ಶಿವಮೊಗ್ಗ: ಸಂಘಟನೆ ಮತ್ತು ಈಶ್ವರಪ್ಪ ಅವರ ಮಾರ್ಗದರ್ಶನದಲ್ಲಿ ಗೆದ್ದು ಅವರ ಆಶೀರ್ವಾದ ಪಡೆದು ಸಂಘಟನೆಯ ಅಪೇಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ. ನಗರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ನಗರದ ನಾಗರಿಕರು ಬಿಜೆಪಿ ಬಗ್ಗೆ ಅಪೇಕ್ಷೆ ಹೊಂದಿದ್ದಾರೆ ಎಂದು ಪಕ್ಷದ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಹೇಳಿದರು.

ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಘಟನೆಯೇ ಶಕ್ತಿ. ಬಿಜೆಪಿ ಸಂಘಟನಾತ್ಮಕವಾಗಿ ಪ್ರಬಲವಾಗಿದ್ದು, ಶಿವಮೊಗ್ಗದಲ್ಲಿ ಗೆಲುವಿಗೆ ಪೂರಕ ವಾತಾವರಣವಿದೆ ಎಂದರು.
ಬಿಜೆಪಿ ಕಾರ್ಯಕರ್ತನಾದ ನನಗೆ ಪಕ್ಷ ಸ್ಪರ್ಧೆಗೆ ಅವಕಾಶ ನೀಡಿದೆ. ಯಡಿಯೂರಪ್ಪ, ಈಶ್ವರಪ್ಪ, ಮೇಲ್ಪಂಕ್ತಿ ಹಾಕಿದ್ದಾರೆ. ೧೯೮೦ರ ದಶಕದಿಂದ ಶಿವಮೊಗ್ಗ ಶಾಸಕರಾಗಿ ಈಶ್ವರಪ್ಪ ಕೆಲಸ ಮಾಡಿದ್ದಾರೆ. ನಾನು ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಅವರು ನನ್ನನ್ನು ಬೆಳೆಸಿದ್ದಾರೆ ಎಂದರು.”


: “ದೇಶ ಮೊದಲು ಎನ್ನುವ ಪಕ್ಷ ನಮ್ಮದು. ಸರ್ವೆ ಆಧರಿಸಿ ನನಗೆ ಟಿಕೆಟ್ ನೀಡಲಾಗಿದೆ. ನಾನು ಟಿಕೆಟ್ ಹಿಂದೆ ಹೋದವನಲ್ಲ. ನಾನು ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡಿದ್ದೇನೆಯೇ ಹೊರತು ರೇಸ್‌ನಲ್ಲಿ ಇರಲಿಲ್ಲ. ಪಕ್ಷದ ಮುಖಂಡರು ಪಕ್ಷ ಬಿಟ್ಟು ಹೋಗಬಹುದು. ಆದರೆ ಬಿಜೆಪಿ ಕಾರ್ಯಕರ್ತರ ಪಕ್ಷ. ಕಾರ್ಯಕರ್ತರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದರು.
ನಾವು ಎಂದೂ ಕೂಡ ಅಶಾಂತಿ ನಿರ್ಮಾಣಕ್ಕೆ ಕಾರಣರಾಗಿಲ್ಲ. ಆ ರೀತಿ ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಹೋರಾಟ ನಡೆಸಿದ್ದೇವೆ. ನಮ್ಮಿಂದ ಎಂದೂ ಕೂಡ ಗಲಭೆ ಆರಂಭವಾಗಿಲ್ಲ. ಗಲಭೆ ನಡೆದ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಚನ್ನಬಸಪ್ಪ ಹೇಳಿದರು.


ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಇದ್ದರು.”

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!