ಶಿವಮೊಗ್ಗ : ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ವಸ್ತುಗಳು ಮತ್ತು ನಗದು ಹಣವನ್ನು ಅಮಾನತ್ತು ಪಡಿಸಿಕೊಂಡು ಉತ್ತಮ ಕರ್ತವ್ಯ ನಿರ್ವಹಿಸಿದ, ಪೊಲೀಸ್ ಅಧಿಕಾರಿಗಳಾದ,
1) ಸುರೇಶ್ ಎಂ,ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಬಿ ಉಪ ವಿಭಾಗ,
2) ಜಿತೇಂದ್ರ ಕುಮಾರ್ ದಯಾಮ, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ, 3) ಬಾಲರಾಜ್,ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ – ಎ ಉಪ ವಿಭಾಗ,
4) ಗಜಾನನ ವಾಮನ ಸುತರ, ಪೊಲೀಸ್ ಉಪಾಧೀಕ್ಷಕರು, ತೀರ್ಥಹಳ್ಳಿ, ಉಪ ವಿಭಾಗ,
5) ಶಿವಾನಂದ್ ಮದರಕಂಡಿ, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ, ಉಪ ವಿಭಾಗ,
6) ಪ್ರಭು, ಡಿ.ಟಿ, ಪೊಲೀಸ್ ಉಪಾಧೀಕ್ಷಕರು, ಜಿಲ್ಲಾ ಅಪರಾಧ ದಾಖಲಾತಿ ವಿಭಾಗ, ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ,
7) ರೋಹನ್ ಜಗದೀಶ್, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಸಾಗರ ಉಪ ವಿಭಾಗ,
8) ನಿಶೀಮಪ್ಪ, ಪೊಲೀಸ್ ಉಪಾಧೀಕ್ಷಕರು, ಡಿಎಆರ್, ಶಿವಮೊಗ್ಗ
9) ಶಿವಾನಂದ ಗುಣದಾಳ್ ಆರ್.ಪಿ.ಐ, ಡಿಎಆರ್, ಶಿವಮೊಗ್ಗ ರವರಿಗೆ ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ. ಕೆ ರವರು ಪ್ರಶಂಸನಾ ಪತ್ರವನ್ನು ನೀಡಿ, ಅಭಿನಂದಿಸಿರುತ್ತಾರೆ.
ಈ ಸಂದರ್ಭದಲ್ಲಿ ಅನಿಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಉಪಸ್ಥಿತರಿದ್ದರು...
ರಘುರಾಜ್ ಹೆಚ್.ಕೆ...9449553305...