Friday, June 20, 2025
Google search engine
Homeರಾಜ್ಯಓಟು ಮಾರಾಟಕ್ಕಿದೆ, ಕಿರುಚಿತ್ರದ ಪೋಸ್ಟರ್ ಬಿಡುಗಡೆ..!!

ಓಟು ಮಾರಾಟಕ್ಕಿದೆ, ಕಿರುಚಿತ್ರದ ಪೋಸ್ಟರ್ ಬಿಡುಗಡೆ..!!


ಬೆಂಗಳೂರ : ಕಿನ್ನಾಳ ಟಾಕೀಸ್ ಲಾಂಛನದಡಿ ನಿರ್ಮಾಣ ಆಗಿರುವ ‘ಓಟು ಮಾರಾಟಕ್ಕಿದೆ’ ಕಿರುಚಿತ್ರದ ಮೊದಲ ಪೋಸ್ಟರ್ ಅನ್ನು ಕನ್ನಡದ ರ‍್ಯಾಪ್‌ಸ್ಟಾರ್ ಚಂದನ್‌ಶೆಟ್ಟಿ ಅವರು ಬಿಡುಗಡೆ ಮಾಡಿ, ತಂಡಕ್ಕೆ ಶುಭ ಹಾರೈಸಿದರು.


ಎಲೆಕ್ಷನ್ ಬಂದಿರುವ ಈ ಸಂದರ್ಭದಲ್ಲಿ ಟೈಟಲ್ನಿಂದಲೆ ಈ ಕಿರುಚಿತ್ರ ಸದ್ದು ಮಾಡುತ್ತಿದ್ದು. ವಿಶೇಷ ಎಂದರೆ ಪ್ರಜ್ವಲ್ ಕಿನ್ನಾಳ ಎನ್ನುವ ೮ ವರ್ಷದ ಬಾಲಕ ನಾಯಕನಾಗಿ ನಟಿಸಿ, ರಚಿಸಿ, ನಿರ್ದೇಶಿಸಿದ್ದಾನೆ.. ಹಾಗೂ ಮಕ್ಕಳೇ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. (ದೊಡ್ಡವರಂತೆ ಮೀಸೆ ಅಂಟಿಸಿಕೊಂಡು). ಎನ್ ಎಂ.ವಿಶ್ವ, ಶ್ರೀಧರ ಕಶ್ಯಪ್, ವೈಭವ ನಾಗರಾಜ ಆರತಿ, ರಮೇಶ್ ಪ್ರೇಮ್, ಲಕ್ಷಿತಾ ಕಂಠದಾನ ಮಾಡಿದ್ದಾರೆ.


ಶ್ರೀಮತಿ ಭವಾನಿ ಕಿನ್ನಾಳರಾಜ್ ಅವರು ಈ ಕಿರುಚಿತ್ರ ನಿರ್ಮಿಸಿದ್ದು, ಜಿ ವಿ ನಾಗರಾಜ್ ಛಾಯಾಗ್ರಹಣ, ಆಕಾಶ್ ಪರ್ವ ಸಂಗೀತ, ಕೆಜಿಎಫ್ ಮೊದಲಾದ ಹಲವಾರು ಹಿಟ್ ಚಲನಚಿತ್ರಗಳಿಗೆ ಹಾಡುಗಳನ್ನು ರಚಿಸಿರುವ, ಹಿಟ್ಲರ್ ಚಲನಚಿತ್ರ ನಿರ್ದೇಶಕ ಕಿನ್ನಾಳರಾಜ್ ಚಿತ್ರಕಥೆ, ಸಂಭಾಷಣೆ ಬರೆಯುವದರ ಜೊತೆಗೆ ಸಂಕಲನವನ್ನು ಮಾಡಿದ್ದಾರೆ. ಟೈಟಲ್ ಗ್ರಾಫಿಕ್ಸ್ ಪ್ರಕಾಶ್ ಡಿ .ಜೆ, ಶಿವಶರಣ ಸುಗ್ನಳ್ಳಿ, ಧ್ವನಿಮುದ್ರಣ ಜಯಚಂದ್ರ ಮಾಡಿದ್ದಾರೆ. ಪತ್ರಿಕಾಪ್ರಚಾರ ಆರ್.ಚಂದ್ರಶೇಖರ್, ಡಾ ಪ್ರಭು ಗಂಜಿಹಾಳ. ಡಾ. ವೀರೇಶ್ ಹಂಡಿಗಿ ಅವರದ್ದಾಗಿದೆ.
ಕಿರು ಚಿತ್ರದಲ್ಲಿ ವಿಷ್ಣು, ವಿಜಯಕುಮಾರ್, ಅಗಸ್ತ್ಯ, ಮನೋಜ್, ಸೃಷ್ಟಿ, ಮಾನಸ, ಆರಾಧ್ಯ,ಸಾಹಿತ್ಯ, ಸುಹಾಸ್, ದಿಲೀಪ್, ಅನ್ವಿತಾ, ಕುನಾಲ್, ಯಶವಂತ್,ಶ್ರೀ ನಾಗರ್ನಿಕ, ಆಕಾಶ್. ವಿಕಾಸ್. ಪುಟ್ಟರಾಜು, ಸಹನಾ, ಅನ್ವೀಕಾ, ಅಭಿ , ಆರ್ನವ್ ಇನ್ನೂ ಅನೇಕ ಬಾಲ ಕಲಾವಿದರು ಅಭಿನಯಿಸಿದ್ದಾರೆ. ಈ ಕಿರುಚಿತ್ರವು ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ವರದಿ-ಡಾ.ಪ್ರಭು ಗಂಜಿಹಾಳ.
ಮೊ-೯೪೪೮೭೭೫೩೪೬….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!