Thursday, June 19, 2025
Google search engine
Homeರಾಜ್ಯಸೌಹಾರ್ದತೆಯಿಂದ ಮಾತ್ರ ಸುಂದರ ಜಗತ್ತಿನ ನಿರ್ಮಾಣ.. ಮಂಜುನಾಥ್ ಸಾಗರ್ ..!!

ಸೌಹಾರ್ದತೆಯಿಂದ ಮಾತ್ರ ಸುಂದರ ಜಗತ್ತಿನ ನಿರ್ಮಾಣ.. ಮಂಜುನಾಥ್ ಸಾಗರ್ ..!!

ಮಂಗಳೂರು, ಮೇ 1 : ಸಂಘಟನೆ ಮತ್ತು ಸಾಧನೆಗೆ ಅಗಾಧ ಪರಿಶ್ರಮದ ಅವಶ್ಯಕತೆ ಇದೆ. ಅತ್ಯಂತ ತಾಳ್ಮೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆಗಳು ನಿರಂತರವಾಗಿ, ಕ್ರಿಯಾಶೀಲತೆಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಮಿಸ್ಸೆಸ್ ಇಂಡಿಯಾ ಕ್ಲಾಸಿಕ್ – ರನ್ನರ್ ಅಪ್ ವಿಜೇತೆ ಮುಂಬಯಿಯ ಶ್ರೀಮತಿ ಪ್ರಭಾ ಸುವರ್ಣ ಅವರು ಮೇ 1ರಂದು ಮಂಗಳೂರಿನ ಅಬ್ಬಕ್ಕ ವಿಹಾರ ನೌಕೆಯಲ್ಲಿ 38ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಾರಂಭದ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಹೀಗೆ ಅಭಿಪ್ರಾಯಪಟ್ಟರು.

ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಐ) ಮತ್ತು ಮಂಜುನಾಥ್ ಎಜುಕೇಶನ್ ಟ್ರಸ್ಟ್ (ರಿ), ಮಂಗಳೂರು ಸಂಯುಕ್ತವಾಗಿ. ಸಮಾರಂಭವನ್ನು ಆಯೋಸಿದ್ದವು.

ಐಸಿಎಫ್‌ಸಿಐ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಅವರು ಮಾತನಾಡಿ “ನಾವು 30ಕ್ಕೂ ಹೆಚ್ಚು ದೇಶಗಳಲ್ಲಿ ಆಯೋಜಿಸಿರುವ. ಸಾಂಸ್ಕೃತಿಕ ಸೌರಭಗಳು ಸೌಹಾರ್ದತೆ, ಸ್ನೇಹ ಮತ್ತು ಸಹೋದರತೆಯ ಸಂದೇಶವನ್ನು ಸಾರುವ ಪ್ರಯತ್ನವನ್ನು 15 ವರ್ಷಗಳಿಂದ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದೇವೆ. ಅದು ” ನಾವು ವಿಶ್ವ ಸೌಹಾರ್ದ ಪ್ರಿಯರು” ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿದೆ, ಸಾಮರಸ್ಯದಿಂದ ಮಾತ್ರ ಸುಂದರ ಜಗತ್ತಿನ ನಿರ್ಮಾಣ ಸಾಧ್ಯ” ಎಂದರು.

ದುಬೈಯ ತುಳುಕೂಟದ ಮಾಜಿ ಸಂಚಲಕರಾದ ಶೇಕಬ್ಬ ಕೋಟೆ ಹೆಜಮಾಡಿ ಅವರು ಮಾತನಾಡಿ ತಂದೆ ತಾಯಿಯವರು ಕೂಡುವ ಸಂಸ್ಕಾರ ಅಮೂಲ್ಯವಾದದು. ಅದು ಜೀವನ ಪರ್ಯಂತ ನಮ್ಮೊಂದಿಗೆ ಉಳಿಯುತ್ತದೆ, ವಿವಿಧತೆಯಲ್ಲಿ ಏಕತೆಯನ್ನು ತೋರುವ ಮನೋಧರ್ಮ ಸರ್ವ ಶ್ರೇಷ್ಠವಾದದ್ದು. ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ್ತ ಡೀನ್ ಡಾ‌. ಎಸ್ ಎಂ. ಶಿವಪ್ರಕಾಶ್ ” ನಮ್ಮ ದೇಶದ ಪ್ರತಿಯೊಂದು ರಾಜ್ಯವು ವಿಭಿನ್ನ ಭಾಷೆ ಮತ್ತು ಸಂಸ್ಕೃತಿಯನ್ನು ಹೊಂದಿವೆ ಆದರೆ ಅವುಗಳೆಲ್ಲದರ ಸಾರ ಸಮುದಾಯಗಳ ನಡುವೆ ಸಾಮರಸ್ಯವನ್ನು ಬೆಸುವುದೇ ಆಗಿದೆ. ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಗಣ್ಯರಾದ ಬೆಂಗಳೂರಿನ ಸ್ವಾಮಿ ಎಂಟರ್ಪ್ರೈಸಸ್ ಎಂ.ಡಿ. ಗೋ ನಾ ಸ್ವಾಮಿ, ಮೈಸೂರಿನ ನಿವೃತ್ತ ಡಿವೈಎಸ್ಪಿ. ಕೆ ಎಸ್ ಕೃಷ್ಣಮೂರ್ತಿ ಮತ್ತು ಮನೋಶಾಸ್ತ್ರಜ್ಞ ಹಾಗು ಆಪ್ತ ಸಮಾಲೋಚಕರಾದ ಡಾ. ಗುರುರಾಜ್ ರಾವ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರದ ಸಾಧಕರಾದ. ಡಾ. ವಸಂತ ಮುರಳಿ ಬೆಂಗಳೂರು, ಪ್ರತಿಭಾ ಸಾಲಿಯಾನ್ ಮಂಗಳೂರು, ವಾಮನ ಕುದ್ರೊಳಿ ಮತ್ತು ಡಾ ಸಂಗೀತಾ ಹೊಳ್ಳ ಅವರಿಗೆ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರತಿಭಾ ಸಾಲ್ಯಾನ್ , ಪ್ರತೀಕ್ಷಾ ಪ್ರಭು ಮತ್ತು ತಂಡದಿಂದ ವಿವಿಧ ನೃತ್ಯಗಳು ಹಾಗು ಗಾಯಕರಾದ ಗೋ. ನಾ. ಸ್ವಾಮಿ, ಡಾ. ಶಿವಪ್ರಕಾಶ್, ಶಿವರಾಜ್ ಪಾಂಡೇಶ್ವರ, ‌ಚಂದ್ರಕಾಂತ್ ಮತ್ತು ಎನ್. ನಾಗೇಂದ್ರ ಇವರು ಕನ್ನಡ ತುಳು ಮತ್ತು ಹಿಂದಿ ಗೀತೆಗಳನ್ನ ಹಾಡಿ ರಂಜಿಸಿದರು…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!