Sunday, June 15, 2025
Google search engine
Homeರಾಜ್ಯಕೋವಿಡ್ ರೋಗಿಗಳ ನೆರವಿಗಾಗಿ 30ಲಕ್ಷ ರೂ, ಮೌಲ್ಯದ ವೈದ್ಯಕೀಯ ನೆರವು ನೀಡಿದ ರೌಂಡ್ ಟೇಬಲ್...

ಕೋವಿಡ್ ರೋಗಿಗಳ ನೆರವಿಗಾಗಿ 30ಲಕ್ಷ ರೂ, ಮೌಲ್ಯದ ವೈದ್ಯಕೀಯ ನೆರವು ನೀಡಿದ ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆ ಅಗ್ರಸೇನ್ ಆಸ್ಪತ್ರೆ ಮತ್ತು ಜಯದೇವ ಆಸ್ಪತ್ರೆಗೆ ನೆರವು…

ಬೆಂಗಳೂರು,: ಕೊರೋನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ರೌಂಡ್ ಟೇಬಲ್ ಇಂಡಿಯಾ (ಆರ್ಟಿಐ) ಮತ್ತು ಲೇಡೀಸ್ ಸರ್ಕಲ್ ಇಂಡಿಯಾ (ಎಲ್ಸಿಐ) ಸಂಸ್ಥೆಗಳು ಡೋನರ್ಸ್ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. (ಮೇಪಲ್ ಟ್ರೀ ಪ್ರಾಪರ್ಟಿ), ಬೆಂಗಳೂರು ರೌಂಡ್ ಟೇಬಲ್ 07 ಮತ್ತು ಬೆಂಗಳೂರು ಲೇಡೀಸ್ ಸರ್ಕಲ್ 19 ಸಹಯೋಗದಲ್ಲಿ ಬೆಂಗಳೂರಿನ ಅಗ್ರಸೇನ್ ಆಸ್ಪತ್ರೆ ಮತ್ತು ಜಯದೇವ ಆಸ್ಪತ್ರೆಗಳಿಗೆ 30 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿವೆ. ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ಬಡವರ ಚಿಕಿತ್ಸೆಗಾಗಿ ಈ ಉಪಕರಣಗಳನ್ನು ಬಳಸಲಾಗುತ್ತದೆ.

ದಾನಿಗಳಿಗೆ ಧನ್ಯವಾದ ಅರ್ಪಿಸಿರುವ ಅಗ್ರಸೇನ್ ಆಸ್ಪತ್ರೆಯ ಅಧ್ಯಕ್ಷ ಸತೀಶ್ ಜೈನ್, “ಅಡಮಾಸ್ ಬಿಲ್ಡರ್ಸ್, ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ವತಿಯಿಂದ ನಾವು ಸುಮಾರು 15 ಲಕ್ಷ ರೂ. ಮೌಲ್ಯದ ಒಂದು ವೆಂಟಿಲೇಟರ್ ಹಾಗೂ ನಾಲ್ಕು ಮಾನಿಟರ್ಗಳನ್ನು ಸ್ವೀಕರಿಸಿದ್ದೇವೆ. ಇವುಗಳನ್ನು ಪಡೆದುಕೊಳ್ಳುವಲ್ಲಿ ನೆರವಾದ ನಮ್ಮ ಟ್ರಸ್ಟಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಮೇಪಲ್ ಟ್ರೀ, ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳು ಸಮಾಜದ ಬಗ್ಗೆ ಹೊಂದಿರುವ ಕಳಕಳಿ, ಔದಾರ್ಯ ಹಾಗೂ ಈ ಸಂಸ್ಥೆಗಳ ಸದಸ್ಯರ ಮಾನವೀಯ ನೆರವಿನ ಮನೋಭಾವವನ್ನು ಶ್ಲಾಘಿಸಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ| ಮಂಜುನಾಥ್, “ಮೇಪಲ್ ಟ್ರೀ, ರೌಂಡ್ ಟೇಬಲ್ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳು ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋಗೆ ಉದಾರ ನೆರವು ನೀಡಿವೆ. ಇವು ನೀಡಿರುವ ವೈದ್ಯಕೀಯ ಉಪಕರಣಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಜೀವ ಉಳಿಸಲು ನೆರವಾಗಲಿವೆ. ಇನ್ನು ಮುಂದೆಯೂ ಕೂಡ ಹೆಚ್ಚಿನ ನೆರವು ನೀಡುವುದಿದ್ದರೆ ಈ ಸಂಸ್ಥೆಗಳ ಜೊತೆಗೆ ಜಯದೇವ ಆಸ್ಪತ್ರೆಯು ಸಂತೋಷದಿಂದ ಕೈಜೋಡಿಸಲಿದೆ” ಎಂದು ಹೇಳಿದ್ದಾರೆ.

ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ವತಿಯಿಂದ ಸ್ವಪ್ನಾ (ಲೇಡೀಸ್ ಸರ್ಕಲ್ ರಾಷ್ಟ್ರೀಯ ಅಧ್ಯಕ್ಷೆ), ಸಂದೇಶ್ (ಏರಿಯಾ 6 ಚೇರ್ಮನ್), ಸಿಮ್ರಿತಾ (ಏರಿಯಾ 6 ವೈಸ್ ಚೇರ್ಮನ್), ಪರಶುರಾಮ್ (ಬೆಂಗಳೂರು ರೌಂಡ್ ಟೇಬಲ್ 7 ಚೇರ್ಮನ್), ತುಳಸಿ (ಲೇಡೀಸ್ ಸರ್ಕಲ್ 19 ಚೇರ್ಮನ್), ವೈಭವ್ ಅರೋರಾ (ಏರಿಯಾ ಪ್ರಾಜೆಕ್ಟ್ಸ್ ಕನ್ವೀನರ್), ಹಿಮಾಂಶು (ರೌಂಡ್ ಟೇಬಲ್ ಇಂಡಿಯಾದ ನಿವೃತ್ತ ರಾಷ್ಟ್ರೀಯ ಅಧ್ಯಕ್ಷ), ಶ್ರವಣ್ (ರೌಂಡ್ ಟೇಬಲ್ 7 ಮಾಜಿ ಚೇರ್ಮನ್) ಹಾಗೂ ರೌಂಡ್ ಟೇಬಲ್ 7ನ ಮಾಜಿ ಸದಸ್ಯ ಸಚಿನ್ ಉಪಸ್ಥಿತರಿದ್ದರು.

30 ಲಕ್ಷ ರೂ. ಮೌಲ್ಯದ ಉಪಕರಣಗಳನ್ನು ಅಗ್ರಸೇನ್ ಮತ್ತು ಜಯದೇವ ಆಸ್ಪತ್ರೆಗೆ ದೇಣಿಗೆ ನೀಡಿರುವ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. ಸಂಸ್ಥೆಗೆ ಇದೇ ಸಂದರ್ಭದಲ್ಲಿ ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳ ಪದಾಧಿಕಾರಿಗಳು ಧನ್ಯವಾದ ಸಲ್ಲಿಸಿದ್ದಾರೆ. ಕೊರೋನಾದಂತಹ ವಿಪತ್ತಿನ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ವೈದ್ಯಕೀಯ ಮೂಲಸೌಕರ್ಯದ ನೆರವು ನೀಡುವ ಮೂಲಕ ಸಮಾಜದ ಒಳಿತಿಗಾಗಿ ಇನ್ನು ಮುಂದೆಯೂ ಶ್ರಮಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ…

ವರದಿ.. ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!