
ರಾಜ್ಯ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 2615 ಮಂದಿ ಅಭ್ಯರ್ಥಿಗಳ ಭವಿಷ್ಯ ಮತದಾರರ ಕೈ ಬೆರಳಿನಲ್ಲಿದೆ….
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕುಟುಂಬ ಸಮೇತರಾಗಿ ತೀರ್ಥಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ರಾಜ್ಯದಲ್ಲಿ ಒಟ್ಟು 5, 31,33,054 ಕೋಟಿ ಮತದಾರರಿದ್ದಾರೆ. ಈ ಪೈಕಿ 2,67,28,053 ಕೋಟಿ ಪುರುಷ ಮತದಾರರು ಹಾಗೂ 2,64,00,074 ಕೋಟಿ ಮಹಿಳಾ ಮತದಾರರಿದ್ದಾರೆ. ಜೊತೆಗೆ 11, 71,558 ಯುವ ಮತದಾರರು ಇದ್ದಾರೆ. ಒಟ್ಟು ಮತದಾರರ ಪೈಕಿ 4,92,85,247 ಮತದಾರರಿಗೆ ಮತದಾರರ ಚೀಟಿ ವಿತರಿಸಲಾಗಿದ್ದು.
ರಾಜ್ಯದಲ್ಲಿ ಸಕ್ರಿಯ ಮತಗಟ್ಟೆ ಕೇಂದ್ರಗಳು- 58,282, ಹೆಚ್ಚುವರಿ ಮತಗಟ್ಟೆ ಕೇಂದ್ರಗಳು- 263 ಒಳಗೊಂಡು ಒಟ್ಟು – 58,545 ಮತಗಟ್ಟೆಗಳು ಇವೆ…
ರಘುರಾಜ್ ಹೆಚ್.ಕೆ..9449553305…