
ಸಾಗರ : ಕಳೆದ ಜನವರಿ 12ರಂದು ಸಾಗರದ ಗಾಂಧಿ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಸಾಗರ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿವೃತ್ತ ನೌಕರರಿಗೆ, ಮಾಜಿ ಯೋಧರಿಗೆ ಅಭಿನಂದನೆ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಅಭಿನಂದನೆ ಹಾಗೂ ತಾಲೂಕು ನೌಕರರ ಸಮಾವೇಶ ನಡೆದಿತ್ತು .
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ, ಎಸ್ ಷಡಾಕ್ಷರಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ “ಯಾವನೋ ಆರ್.ಟಿ.ಐ ಕಾರ್ಯಕರ್ತ ತಾಳಗುಪ್ಪದವನಂತೆ ಅವನಿಗೆ ಎಚ್ಚರ ಕೊಡಲು ಬಂದಿದ್ದೇನೆ, ನಾನು ಯಾರಿಗೂ ಸಹ ಹೆದರುವುದಿಲ್ಲ. ನಾನು ಎಲ್ಲದಕ್ಕು ರೆಡಿ ಇದ್ದೇನೆ. ನನಗೆ ಕಾನೂನು ಗೊತ್ತು ಎಲ್ಲಾ ಗೊತ್ತು. ನಿನ್ನ ಆರ್ ಟಿ ಐ ಮುಂದಿಟ್ಟುಕೊಂಡು ಏನೂ ಮಾಡಲಾಗುವುದಿಲ್ಲ ಇದು ಶಿವಮೊಗ್ಗ ಜಿಲ್ಲೆ ನಿನಗೆ ನನ್ನ ವಿಷಯ ಗೊತ್ತಿಲ್ಲ, ಮುಂದೆ ಜೀವನ ನಡೆಸುವುದು ಕಷ್ಟವಾಗಬಹುದು ಈ ಹಿಂದೆ ನನ್ನ ವಿರುದ್ಧ ಹೇಳಿಕೆ ನೀಡಿದವರ ವಿರುದ್ಧ ಶಿಕಾರಿಪುರದಲ್ಲಿ, ಜಿಲ್ಲಾ ಪಂಚಾಯತ್ ಸದಸ್ಯನಿಗೆ ಜೈಲಿಗೆ ಕಳಿಸಿರುತ್ತೇನೆ ಎಚ್ಚರಿಕೆ ಇರಲಿ ಎಂದು ಏರುಧ್ವನಿಯಲ್ಲಿ, ಬೈದು ಪ್ರಾಣ ಬೆದರಿಕೆ ಹಾಕಿದ್ದು, ಇದನ್ನು ಮುಂದಿಟ್ಟುಕೊಂಡು ಓಂಕಾರ ಎಸ್ ವಿ ತಾಳಗುಪ್ಪ ನನಗೆ ಜೀವ ಬೆದರಿಕೆ ಇದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಹಾಗೂ ಪತ್ರಿಕಾಗೋಷ್ಠಿ ನಡೆದು ಬಹಿರಂಗವಾಗಿ ಹೇಳಿಕೆಗಳು ಸಹ ನೀಡಿದ್ದರು. ಆದರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರಲಿಲ್ಲ ಎಪರ್ ದಾಖಲಿಸುವಂತೆ ಕೋರ್ಟ್ ಮೊರೆ ಹೋಗಿದ್ದರು.ಈಗ ಘನ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಪಿಸಿಆರ್ ಅಡಿಯಲ್ಲಿ ಪೊಲೀಸ್ ಇಲಾಖೆಗೆ ತಿಳಿಸಿದೆ…
ಘನ ನ್ಯಾಯಾಲಯದ ಆದೇಶದ ಮೇರೆಗೆ ಸಾಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ವಿರುದ್ಧ 504,506 ಕೇಸ್ ಗಳನ್ನು ದಾಖಲಿಸಿದ್ದಾರೆ.
ಈಗ ಷಡಾಕ್ಷರಿ ಜಾಮೀನು ತೆಗೆದುಕೊಳ್ಳಬೇಕು ಹಾಗೂ ಪೊಲೀಸ್ ಇಲಾಖೆಯ ವಿಚಾರಣೆಯನ್ನು ಎದುರಿಸಬೇಕು…
ರಘುರಾಜ್ ಹೆಚ್.ಕೆ…9449553305…