
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಮುಖ್ಯಮಂತ್ರಿ ಆಯ್ಕೆಯ ಕಸರತ್ತನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು.
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇದರೊಂದಿಗೆ ಸಿದ್ದರಾಮಯ್ಯನವರಿಗೆ ಕರ್ನಾಟಕ ರಾಜ್ಯ ಆಳುವ ಅವಕಾಶ 2ನೇ ಬಾರಿಗೆ ದೊರಕಿದೆ. ಆದರೆ ಸಂಪೂರ್ಣ ಅಧಿಕಾರ ಸಿಗುವುದು ಕಷ್ಟ ಮೊದಲ ಎರಡು ವರ್ಷ ಸಿದ್ದರಾಮಯ್ಯ ಮುಖ್ಯಮಂತ್ರಿ ನಂತರ ಮೂರು ವರ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಎನ್ನುವ ಸೂತ್ರವನ್ನು ಹೈಕಮಾಂಡ್ ಇಟ್ಟಿದೆ.
ಕರಗಿದ ಬಂಡೆ ಮುಖ್ಯಮಂತ್ರಿ ಪಟ್ಟ ಶತಾಯಗತಾಯ ಬೇಕೆಂದು ಪಟ್ಟು ಹಿಡಿದು ಕೂತಿದ್ದ ಕನಕಪುರದ ಬಂಡೆ ಡಿಕೆ ಶಿವಕುಮಾರ್ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಮಣಿದಿದ್ದು ಸಂಧಾನ ಸೂತ್ರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.
ನಾಳೆಯೇ ನೂತನ ಮುಖ್ಯಮಂತ್ರಿಯ ಪ್ರಮಾಣ ವಿಚಾರ ಬೆಂಗಳೂರು ಕಂಠೀರವ ಮೈದಾನದಲ್ಲಿ ನಡೆಯಲಿದೆ…
ನಾಳೆ ಮೊದಲ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ,ಕಂದಾಯ ಸಚಿವರಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಇದೆ…
ಮುಂದಿನ ಹಂತದಲ್ಲಿ ಉಳಿದ ಖಾತೆಯ ಸಚಿವರಗಳ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ…
ರಘುರಾಜ್ ಹೆಚ್.ಕೆ..9449553305….