Wednesday, May 7, 2025
Google search engine
Homeರಾಜ್ಯದ್ವೀಪದ ತೀರಕ್ಕೆ ಹೋಗಲು ನೀರಿಲ್ಲ ಆತಂಕದಲ್ಲಿ ಸ್ಥಳೀಯರು..!!

ದ್ವೀಪದ ತೀರಕ್ಕೆ ಹೋಗಲು ನೀರಿಲ್ಲ ಆತಂಕದಲ್ಲಿ ಸ್ಥಳೀಯರು..!!

ಸಾಗರ: ದ್ವೀಪದ ಕರೂರು ಹೋಬಳಿಯಿಂದ ಕಾರ್ಗಲ್. ಜೋಗಕ್ಕೆ ತ್ವರಿತವಾಗಿ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್ ಮಾರ್ಗ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಶರಾವತಿ ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆ ಕಂಡುಬಂದ ಹಿನ್ನೆಲೆಯಲ್ಲಿ ಹಲ್ಕೆ ಮುಪ್ಪಾನೆ ಲಾಂಚ್ ಗೆ ಆಡಚಣೆ ಉಂಟಾಗಿದೆ. ಶುಕ್ರವಾರ ಬೆಳಿಗ್ಗೆ ಸಹ ಲಾಂಚ್ ಸಂಚಾರದ ವೇಳೆ ಮರದ ದಿಮ್ಮಿ ಹಾಗೂ ಮರಳಿನ ದಿಬ್ಬಗಳು ಲಾಂಚ್ ತಳಭಾಗದ ಬಾಟಮ್ ಗೆ ಲಗುಲಿದೆ. ಇದರಿಂದ ಲಾಂಚ್ ತಾಂತ್ರಿಕ ದೋಷಕ್ಕೆ ಒಳಗಾಗುವ ಸಾಧ್ಯತೆಯಿದ್ದು. ಮುಂಜಾಗ್ರತಾ ಕ್ರಮವಾಗಿ ಹಾಗೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಮೇ 26ರಿಂದ ತಾತ್ಕಾಲಿಕವಾಗಿ ಲಾಂಚ್ ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ ಎಂದು ಕಡವು ನಿರೀಕ್ಷಕ ಧನೇಂದ್ರ ಕುಮಾರ್ ತಿಳಿಸಿದ್ದಾರೆ.

ಈ ಭಾಗದ ತುಮರಿ. ಮಾರಲಗೋಡು. ಬ್ಯಾಕೋಡು ಭಾಗದ ತುರ್ತು ಆರೋಗ್ಯ ಸೇವೆ ಸೇರಿದಂತೆ ಜೋಗ ಕಾರ್ಗಲ್ ತೆರಳಲು ಹಾಗೂ ಸಿಗಂದೂರು ಪ್ರವಾಸಿಗರು ಹೊಳೆಬಾಗಿಲು ಲಾಂಚ್ ನಲ್ಲಿ ಪ್ರತಿನಿತ್ಯ ಜನದಟ್ಟಣೆ ಇರುವ ಕಾರಣ ಬಹುತೇಕರು ಈ ಸುಗಮ ಮಾರ್ಗದ ಮೊರೆ ಹೋಗಿದ್ದರು ಸದ್ಯ ಇದು ಕೂಡ ಸ್ಥಗಿತಗೊಂಡಿದ್ದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.

ಸದ್ಯ ಈ ಭಾಗದಲ್ಲಿ ಮುಂಗಾರು ಇನ್ನೂ ಪ್ರಾರಂಭವಾಗಿಲ್ಲ. ವಾಡಿಕೆ ಮಳೆ ಸಹಿತ ಸರಿಯಾಗಿ ಆಗಿಲ್ಲ ಹೀಗಾಗಿ ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಆಧರಿಸಿ ಲಾಂಚ್ ಸೇವೆ ನೀಡಲಿದೆ ಎಂದು ಕಡವು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ…

ಓಂಕಾರ ಎಸ್ ವಿ ತಾಳಗುಪ್ಪ….

RELATED ARTICLES
- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!