Home ಶಿವಮೊಗ್ಗSHIVAMOGGA BREAKING NEWS: ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ..!!

SHIVAMOGGA BREAKING NEWS: ಒಂಟಿ ಮಹಿಳೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ತಾಯಿ ಮನನೊಂದು ಆತ್ಮಹತ್ಯೆಗೆ ಯತ್ನ..!!

by EDITOR NEWS WARRIORS
0 comments

ಶಿವಮೊಗ್ಗ : ತಾಲೂಕಿನ ಹುಣಸೋಡು ಗ್ರಾಮದಲ್ಲಿ ಸೀತಾಬಾಯಿ(50) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು

ಆತ್ಮಹತ್ಯೆಗೆ ಕಾರಣ :

ಇದೇ ಜೂನ್ 17ರಂದು ಹಣದಾಸೆಗೆ ಶಿವಮೊಗ್ಗದ ವಿಜಯನಗರದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ ಎಂಬುವರನ್ನು ಕೊಲೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ.

ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ಹಣವನ್ನು ದೋಚಲಾಗಿತ್ತು.

ಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕ ನ ಬೆನ್ನು ಬಿದ್ದಿದ್ದರು.

ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ
ಮಗ ಹನುಮಂತ ನಾಯ್ಕ , ಪತಿ
ರೂಪ್ಲಾ ನಾಯ್ಕ ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದರು.

ಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇಂದು ಬೆಳಗ್ಗೆ 10ಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಸೀತಾಬಾಯಿಯನ್ನು ರಕ್ಷಿಸಿ ಸಂಬಂಧಿಕರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ‌

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೀತಾ ಬಾಯಿ ಚಿಕಿತ್ಸೆಗೆ ದಾಖಲಾಗಿದ್ದು. ವೈದ್ಯರು ಐಸಿಯುವಿನಲ್ಲಿ ಚಿಕಿತ್ಸೆ ನೀಡುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ….

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!