Wednesday, April 30, 2025
Google search engine
Homeತೀರ್ಥಹಳ್ಳಿತೀರ್ಥಹಳ್ಳಿ :ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಗೆ ಮತ್ತೊಂದು ಗರಿ..!!

ತೀರ್ಥಹಳ್ಳಿ :ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಗೆ ಮತ್ತೊಂದು ಗರಿ..!!

ತೀರ್ಥಹಳ್ಳಿ: ತಾಲೂಕಿನ ಹೆಮ್ಮೆಯ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ ಸದಾ ಸುದ್ದಿಯಲ್ಲಿರುತ್ತದೆ.ಈಗ ಎಸ್ ಎಸ್ ಎಲ್‌ ಸಿ ಅತ್ಯುತ್ತಮ ಗುಣಮಟ್ಟದ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ 25 ಸಾವಿರ ನಗದು & ಪಾರಿತೋಷಕ 25 ಸಾವಿರ ನಗದು & ಪಾರಿತೋಷಕ ಲಭಿಸಿದೆ.

ಶಿಕ್ಷಣ ಇಲಾಖೆಯ ವತಿಯಿಂದ ಬಹುಮಾನದ ಚೆಕ್ ಮತ್ತು ಪಾರಿತೋಷಕವನ್ನು ಶಿವಮೊಗ್ಗ ಜಿಲ್ಲಾ ಉಪ ನಿರ್ದೇಶಕರಾದ ಪರಮೇಶ್ವರ್ ಅವರು ವಿತರಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ತಾಲ್ಲೂಕಿನ ಶೈಕ್ಷಣಿಕ, ಕ್ರೀಡೆ, ಸಹ ಪಠ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿ, ಮತ್ತೊಮ್ಮೆ ಗಮನ ಸೆಳೆದಿದೆ..‌

2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ, 100 % ಫಲಿತಾಂಶ ದಾಖಲಿಸಿದ್ದು , ಗುಣಮಟ್ಟದ ಶಿಕ್ಷಣದಲ್ಲೂ ಅತ್ಯುತ್ತಮ ಸಾಧನೆ ಮಾಡಿತ್ತು, ಎಸ್ ಎಸ್ ಎಲ್ ಸಿ ಮಕ್ಕಳ ಕಲಿಕಾ ಪ್ರೋತ್ಸಾಹ ಕ್ಕಾಗಿ ರಾತ್ರಿ ವಿಶೇಷ ತರಗತಿಯ ಆಯೋಜನೆ ಈ ಯಶಸ್ವಿನ ಹಿಂದೆ ಇದೆ ಎಂದರೇ ಅತಿಶಯೋಕ್ತಿ ಅಲ್ಲ..‌

ಶಾಲೆಯ ಕೀರ್ತಿ ಹೆಚ್ಚಿಸಿದ ಶಿಕ್ಷಕರ ಬಳಗಕ್ಕೆ,‌ ಮಕ್ಕಳಿಗೆ, ಎಸ್ ಡಿ ಎಂ ಸಿ ತಂಡಕ್ಕೆ, ಪೋಷಕರಿಗೆ, ಜನಪ್ರತಿನಿಧಿಗಳಿಗೆ, ಕೇರ್ ವರ್ಕ್ಸ್ ಪೌಂಡೇಷನ್ ಬೆಂಗಳೂರು, ಹಾಗೂ ಪ್ರತ್ಯಕ್ಷ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೆ, ತುಂಬು ಹೃದಯದ ಕೃತಜ್ಞತೆಗಳನ್ನು ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ ತಿಳಿಸಿದ್ದಾರೆ..‌..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...