Wednesday, April 30, 2025
Google search engine
Homeರಾಜ್ಯKaranataka:Congress v/s bjp ವಿಪಕ್ಷ ನಾಯಕನ ಆಯ್ಕೆಗೆ ಹಲವು ವಿಘ್ನ .‌‌.! ಅಂದು ಬಿಜೆಪಿ ವ್ಯಂಗ್ಯ...

Karanataka:Congress v/s bjp ವಿಪಕ್ಷ ನಾಯಕನ ಆಯ್ಕೆಗೆ ಹಲವು ವಿಘ್ನ .‌‌.! ಅಂದು ಬಿಜೆಪಿ ವ್ಯಂಗ್ಯ ಇಂದು ಕಾಂಗ್ರೆಸ್ ಸರದಿ ನಾಳೆ ವಿಪಕ್ಷ ನಾಯಕನ ಆಯ್ಕೆ ಅಂತಿಮವಾಗುವ ಸಾಧ್ಯತೆ..?!

ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿದು ಸರ್ಕಾರ ನಡೆಸುತ್ತಿದೆ. ಬಹುಮತ ಬಂದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾ ಆಯ್ಕೆ ಬಗ್ಗೆ ಹಲವು ಭಿನ್ನಮತಗಳು ಎದುರಾಗಿದ್ದವು. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಹಾದಿಗಾಗಿ ತೀವ್ರ ಹೋರಾಟ ಏರ್ಪಡಾಗಿತ್ತು. ಕೊನೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಆಯ್ಕೆಯಾದರು.

ಈ ಸಮಯದಲ್ಲಿ ಹಿಂದೆ ಆಡಳಿತ ನಡೆಸುತ್ತಿದ್ದ ಬಿಜೆಪಿ ಪಕ್ಷ 66 ಸೀಟುಗಳನ್ನು ಅಷ್ಟೇ ತೆಗೆದುಕೊಂಡು ಹೀನಾಯ ಸೋಲು ಕಂಡಿತ್ತು. ಆದರೆ ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಆಯ್ಕೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ವ್ಯಂಗ್ಯ ಮಾಡಿತ್ತು.

ಆದರೆ ಈಗ ಕಾಂಗ್ರೆಸ್ ಪಕ್ಷ ಮಂತ್ರಿ ಮಂಡಲವನ್ನು ವಿಸ್ತರಣೆ ಮಾಡಿ ಅಧಿಕಾರವನ್ನು ನಡೆಸುತ್ತಿದೆ ಆದರೆ ಬಿಜೆಪಿ ಪಕ್ಷ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಇನ್ನು ಅಂತಿಮಗೊಳಿಸಿಲ್ಲ. ಈಗ ವ್ಯಂಗ್ಯ ಮಾಡುವ ಸರದಿ ಕಾಂಗ್ರೆಸ್ ದ್ದು ಅವರು ಬಿಜೆಪಿ ಪಕ್ಷದ ವಿಪಕ್ಷ ನಾಯಕನ ಬಗ್ಗೆ ಟ್ವಿಟ್ ಮೂಲಕ ವ್ಯಂಗ್ಯ ಮಾಡಿದ್ದು ಈ ಕೆಳಗಿನಂತಿದೆ.

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.

  • ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
  • RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

*ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.

  • ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಕಾಂಗ್ರೆಸ್ ವ್ಯಂಗ್ಯ ಮಾಡುತ್ತಿದೆ.

ಆದರೆ ಬಿಜೆಪಿ ಪಕ್ಷದಲ್ಲಿ ಒಳಜಗಳಗಳು ಶುರುವಾಗಿವೆ ಈ ಶೀತಲ ಸಮರ ಯಾವ ಮಟ್ಟಕ್ಕೆ ತಲುಪುತ್ತದೆ ಕಾದುನೋಡಬೇಕು ಇದರ ನಡುವೆ ವಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ನಡೆಯುತ್ತಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಗೆ ಬಿಜೆಪಿ ಹೈ ಕಮಾಂಡ್ ಬುಲಾವ್ ನೀಡಿದ್ದು ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದ್ದು. ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ವಿ ಸುನಿಲ್ ಕುಮಾರ್, ಬಸನಗೌಡ ಯತ್ನಾಳ್, ಡಾಕ್ಟರ್ ಅಶ್ವಥ್ ನಾರಾಯಣ್, ಹಾಗೆ ಇದೇ ಪ್ರಥಮ ಬಾರಿಗೆ ಗೆದ್ದಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಕಿರಿಯ ಪುತ್ರ ಬಿ ವೈ ವಿಜಯೇಂದ್ರ ಹೆಸರುಗಳು ಮುಂಚೂಣಿಯಲ್ಲಿವೆ.

ಅಂತಿಮವಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆಗಳು ಅಧಿಕವಾಗಿವೆ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...