Wednesday, April 30, 2025
Google search engine
Homeಶಿವಮೊಗ್ಗNEWS WARRIORS BIG IMPACT:ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ಗೆ ನೋಟಿಸ್ ನೀಡಿದ ಮಹಾನಗರ ಪಾಲಿಕೆ...

NEWS WARRIORS BIG IMPACT:ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ಗೆ ನೋಟಿಸ್ ನೀಡಿದ ಮಹಾನಗರ ಪಾಲಿಕೆ ನೋಟಿಸ್ ನಲ್ಲಿ ಏನಿದೆ..?!

ಶಿವಮೊಗ್ಗ: ನಗರದ ಪ್ರತಿಷ್ಠಿತ ಹೈಟೆಕ್ ಆಸ್ಪತ್ರೆ ಮ್ಯಾಕ್ಸ್ ಆಸ್ಪತ್ರೆಗೆ ಮಹಾನಗರ ಪಾಲಿಕೆಯವರು ನೋಟಿಸ್ ಜಾರಿಗೊಳಿಸಿ ದಿಟ್ಟ ಕ್ರಮ ತೆಗೆದುಕೊಂಡಿದ್ದಾರೆ. ಮ್ಯಾಕ್ಸ್ ಆಸ್ಪತ್ರೆಯ ಮುಂಭಾಗ ಪಾದಚಾರಿಗಳು ಓಡಾಡುವ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದು ಕೂಡಲೇ ಅದನ್ನು ತೆರವುಗೊಳಿಸಬೇಕು ಹಾಗೂ ನೆಲಮಾಹಡಿ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದು ಕಂಡುಬಂದಿದ್ದು ಅದನ್ನು ಪಾರ್ಕಿಂಗ್ಗೆ ಬಳಸಿ ಆಸ್ಪತ್ರೆಯ ಸುತ್ತಮುತ್ತಲಿನ ಜಾಗವನ್ನು ಅತಿಕ್ರಮ ಮಾಡಿಕೊಂಡು ವಾಹನ ನಿಲ್ಲಿಸುತ್ತಿರುವುದು ಹಾಗೂ ವಾಹನ ನಿಲ್ಲಿಸುತ್ತಿರುವುದಕ್ಕೆ ಅನುವು ಮಾಡಿಕೊಳ್ಳುತ್ತಿರುವುದು ಸೇರಿದಂತೆ ಕನ್ಸ್ಯುರೆನ್ಸಿಗಳನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಕೂಡಲೇ ತೆರುವು ಗೊಳಿಸಿ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ತಿಳುವಳಿಕೆ ನೋಟಿಸ್ ಒಂದನ್ನು ನೀಡಿದ್ದಾರೆ.

ಈ ನೋಟಿಸ್ ಅನ್ನು ಮ್ಯಾಕ್ಸ್ ಆಸ್ಪತ್ರೆಯವರು ನಿರ್ಲಕ್ಷ್ಯ ಮಾಡುವಂತಿಲ್ಲ ಏಕೆಂದರೆ ಇದು ಪ್ರಾಥಮಿಕ ನೋಟಿಸ್ ಆಗಿದ್ದು ಇನ್ನೂ ಎರಡು ನೋಟಿಸ್ ನೀಡಿದರೆ ಅದಕ್ಕೂ ಮ್ಯಾಕ್ಸ್ ಆಸ್ಪತ್ರೆಯವರು ನಿರ್ಲಕ್ಷ ಮಾಡಿ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ಮಹಾನಗರಪಾಲಿಕೆಯವರು ಕಾನೂನು ಮೂಲಕ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಅದನ್ನು ಎದುರಿಸಬೇಕಾಗುತ್ತದೆ ಎಚ್ಚರ…

ಈಗ ಸ್ವಲ್ಪ ದಿನಗಳ ಹಿಂದೆ ನಿಮ್ಮ ನ್ಯೂಸ್ ವಾರಿಯರ್ಸ್ ಪತ್ರಿಕೆ ಮ್ಯಾಕ್ಸ್ ಆಸ್ಪತ್ರೆಯವರು ಫುಟ್ಬಾತ್ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ಸುದ್ದಿ ಮಾಡಿತ್ತು. ಹಾಗೂ ಮಹಾ ನಗರಪಾಲಿಕೆ ಅವರಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ದೂರು ನೀಡಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದು ಅದರ ಪ್ರಕಾರ ಮಹಾನಗರ ಪಾಲಿಕೆಯವರು ದಿಟ್ಟ ಕ್ರಮ ತೆಗೆದುಕೊಂಡಿದ್ದು. ಮ್ಯಾಕ್ಸ್ ಆಸ್ಪತ್ರೆಯವರಿಗೆ ನೋಟಿಸ್ ನೀಡಿದ್ದಾರೆ.

ಇನ್ನು ಮುಂದಾದರೂ ಮ್ಯಾಕ್ಸ್ ಆಸ್ಪತ್ರೆಯವರು ಎಚ್ಚೆತ್ತುಕೊಂಡು ಅಲ್ಲಿ ಪಾದಚಾರಿಗಳ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಸುಲಭವಾಗಿ ಓಡಾಡಲು ಅನುಕೂಲವಾಗುವಂತೆ ಅನುವು ಮಾಡಿಕೊಡಲಿ ಎನ್ನುವುದು ಪತ್ರಿಕೆಯ ಆಶಯ…

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...