Thursday, May 1, 2025
Google search engine
Homeರಾಜ್ಯBig news: ಲಂಬಾಣಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ವಿದ್ಯಾ ಸಂಸ್ಥೆಯನ್ನೇ ಸುರ್ಪದಿಗೆ ತೆಗೆದುಕೊಂಡು ಸೂಕ್ತ ತನಿಖೆ...

Big news: ಲಂಬಾಣಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ವಿದ್ಯಾ ಸಂಸ್ಥೆಯನ್ನೇ ಸುರ್ಪದಿಗೆ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ಮಾಜಿ ಶಾಸಕ ಅಶೋಕ್ ನಾಯ್ಕ್..! ಪಾದ್ರಿಯನ್ನು ಗಲ್ಲಿಗೇರಿಸಿ ಹಿಂದೂ ಹೆಣ್ಣು ಮಕ್ಕಳನ್ನು ರಕ್ಷಿಸಿ ಹಿಂದೂ ಸಂಘಟನೆಗಳ ಆಗ್ರಹ..!

ಶಿವಮೊಗ್ಗ : ನಗರದದ ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಪ್ರಾನ್ಸಿಸ್ ಫರ್ನಾಂಡಿಸ್ ಬಂಜಾರ ಸಮುದಾಯದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ನ್ಯಾಯಾಂಗಬಂಧನದಲ್ಲಿದ್ದು ಈ ಅತ್ಯಾಚಾರವನ್ನು ಖಂಡಿಸಿ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ‌ಬಂಜಾರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಭರ್ಜರಿ ಪ್ರತಿಭಟನೆ ನಡೆಸಲಾಯತು.

ನಗರದ ಸೈನ್ಸ್ ಮೈದಾನದಿಂದ ಕಾನ್ವೆಂಟ್ ರಸ್ತೆ, ಡಿವಿಎಸ್ ಸರ್ಕಲ್ ಮಹಾವೀರ ವೃತ್ತಕ್ಕೆ ತಲುಪಿದ ಪ್ರತಿಭಟನಾ ಮೆರವಣಿಗೆ ನಂತರ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು .

ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸದ ಪ್ರತಿಭಟನಾಕಾರರು. “”ರಕ್ಷಿಸಿ ರಕ್ಷಿಸಿ ಹಿಂದೂ ಮಕ್ಕಳನ್ನ ರಕ್ಷಿಸಿ””, “ಆರೋಪಿಯನ್ನ ಗಲ್ಲಿಗೇರಿಸಿ”_ ಎಂದು ಘೋಷಣೆ ಕೂಗುವುದರ ಮೂಲಕ ನಿರಂತರವಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹಿಂದುಳಿದ ವರ್ಗದ ಲಂಬಾಣಿ ವಿದ್ಯಾರ್ಥಿನಿಯರ ವಿರುದ್ಧ ಅತ್ಯಾಚಾರ ವೆಸಗಲಾಗಿದೆ. ಇದನ್ನ ತನಿಖೆ ನಡೆಸಬೇಕು.. ಈ ಪ್ರಕರಣದಲ್ಲಿ ವಿದ್ಯಾಸಂಸ್ಥೆಯನ್ನ ಸರ್ಕಾರ ಸುಪರ್ಧಿಗೆ ತೆಗೆದುಕೊಳ್ಳಬೇಕು, ಪ್ರಕರಣವನ್ನ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಬೇಕೆಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಬೃಹತ್ ಮೆರವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಯ ಡಿ.ಆರ್.ಗಿರೀಶ್, ಶ್ರೀಮತಿ ಚಂಪಾ, ಉಮಾಮಹೇಶ್ವರ ನಾಯ್ಕದ, ಧನಲಕ್ಷ್ಮೀ ಬಾಯಿ ಬಿಜೆಪಿಯ ಬೋಜ್ಯ ನಾಯ್ಕ, ಹಿಂದೂ ಸಂಘಟನೆಯ ವಾಸುದೇವ್, ರಾಜೇಶ್ ಗೌಡ, ಸುರೇಶ್ ಬಾಬು ಮೊದಲಾದವರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...