Saturday, June 14, 2025
Google search engine
Homeರಾಜ್ಯಕಾಮನ್ ಮ್ಯಾನ್ ಹೀರೋ ಬಡವ ರಾಸ್ಕಲ್ "ಡಾಲಿ ಉತ್ಸವ" ಕ್ಕೆ ದಿನಗಣನೆ..!

ಕಾಮನ್ ಮ್ಯಾನ್ ಹೀರೋ ಬಡವ ರಾಸ್ಕಲ್ “ಡಾಲಿ ಉತ್ಸವ” ಕ್ಕೆ ದಿನಗಣನೆ..!

ಸ್ಯಾಂಡಲ್‌ವುಡ್ ಡಾಲಿ ಎಂದೇ ಖ್ಯಾತಿಗಳಿಸಿರುವ ನಟ ಧನಂಜಯ್ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ನಟನಾಗಿ, ನಿರ್ಮಾಪಕನಾಗಿ ಖ್ಯಾತಿಗಳಿಸಿರುವ ಡಾಲಿ ಧನಂಜಯ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ‘ಕಾಮನ್ ಮ್ಯಾನ್ ಹೀರೋ’ ಅಂತನೇ ಬಿರುದು ಪಡೆದಿರುವ ಡಾಲಿ ಈ ಬಾರಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ಬರ್ತಡೇ ದಿನ ಅಭಿಮಾನಿಗಳ ಜೊತೆ ಸಮಯ ಕಳೆಯಲು ನಿರ್ಧರಿಸಿದ್ದಾರೆ. ಅಂದಹಾಗೆ ಧನಂಜಯ್ ಹುಟ್ಟುಹಬ್ಬ ಆಗಸ್ಟ್ 23. ಆದರೆ ಈಗಾಗಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ. ಡಾಲಿ ಉತ್ಸವಕ್ಕೆ ಅಭಿಮಾನಿಗಳು ಸಜ್ಜಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳನ್ನು ಶೇರ್ ಮಾಡಿ ಸಂಭ್ರಮಿಸುತ್ತಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳು ಡಾಲಿ ಉತ್ಸವ ಹೆಸರಿನಲ್ಲಿ ಆಚರಿಸುತ್ತಿದ್ದಾರೆ. ಡಾಲಿ ಉತ್ಸವ ಎಂದು ಹೆಸರಿಟ್ಟು ‘ಅಭಿಮಾನದ ತೇರು ಎಳೆಯೋಣ ಬನ್ನಿ’ ಎಂದು ಟ್ಯಾಗ್ ಲೈನ್ ಇಡಲಾಗಿದೆ. ಇವತ್ತಿಗೆ ಸರಿಯಾಗಿ 25 ದಿನಗಳು ಬಾಕಿ ಉಳಿದಿದ್ದು. ಇಂದಿನಿಂದನೆ ಅಭಿಮಾನಿಗಳು ಉತ್ಸವಕ್ಕೆ ರೆಡಿಯಾಗಿದ್ದಾರೆ. ಅಂದಹಾಗೆ ಈ ಬಾರಿಯ ಧನಂಜಯ್ ಹುಟ್ಟುಹಬ್ಬ ತುಂಬನೇ ವಿಶೇಷ. 4 ವರ್ಷಗಳ ಬಳಿಕ ಅದ್ದೂರಿಯಾಗಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ ಜೊತೆಗೆ ಡಾಲಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಾಗಿದೆ. ಹಾಗಾಗಿ ಈ ಬಾರಿಯ ಹುಟ್ಟುಹಬ್ಬ ಧನಂಜಯ್ ಅವರಿಗೆ ತುಂಬಾ ವಿಶೇಷವಾಗಿದೆ.

ನೆರೆ, ಕೊರೊನಾ, ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಾರಣದಿಂದ ಧನಂಜಯ್ ಕಳೆದ 4 ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಅಭಿಮಾನಿಗಳ ಕೈಗೂ ಸಿಕ್ಕಿರಲಿಲ್ಲ. ಹಾಗಾಗಿ ಈ ಬಾರಿ ದೊಡ್ಡ ಮಟ್ಟದಲ್ಲಿ ಬರ್ತಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದು ಹುಟ್ಟುಹಬ್ಬದ ದಿನ ಅಭಿಮಾನಿಗಳ ಜೊತೆಯೇ ಸಮಯ ಕಳೆಯಲು ನಿರ್ಧರಿಸಿದ್ದಾರೆ.

ಜಿಪಿ ನಗರದ ಗ್ರೌಂಡ್‌ನಲ್ಲಿ ಸೆಲೆಬ್ರೇಷನ್..!

ಧನಂಜಯ್ ಬರ್ತಡೇ ಸೆಲೆಬ್ರೇಷನ್ ಜೆಪಿ ನಗರದ ಗ್ರೌಂಡ್‌ನಲ್ಲಿ ನಡೆಯಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಬರುವ ಕಾರಣ ದೊಡ್ಡ ಗ್ರೌಂಡ್‌ನಲ್ಲಿ ಆಚರಣೆ ಮಾಡಿಕೊಳ್ಳಲು ಧನಂಜಯ್ ನಿರ್ಧರಿಸಿದ್ದಾರೆ. ಆಗಸ್ಟ್ 22ರ ರಾತ್ರಿಯಿಂದನೇ ಸೆಲೆಬ್ರೇಷನ್ ಶುರುವಾಗಲಿದೆ. 23ರಂದು ಗ್ರೌಂಡ್‌ನಲ್ಲಿ ಧನಂಜಯ್ ಎಲ್ಲಾ ಅಭಿಮಾನಿಗಳನ್ನು ಭೇಟಿ ಮಾಡಿ ಅಭಿಮಾನಿಗಳ ಪ್ರೀತಿಯ ವಿಶ್ ಸ್ವೀಕರಿಸಲಿದ್ದಾರೆ.

ಊಟದ ವ್ಯವಸ್ಥೆ..!

ದೂರ ಊರುಗಳಿಂದ ಅಭಿಮಾನಿಗಳು ಬರುವ ಕಾರಣದಿಂದ ಊಟದ ವ್ಯವಸ್ಥೆ ಕೂಡ ಇರಲಿದೆ ಎನ್ನಲಾಗಿದೆ. ಮಾಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿಸಲಾಗಿದ್ದು ಎಲ್ಲಾ ಅಭಿಮಾನಿಗಳು ಊಟ ಮಾಡಿ ಸುರಕ್ಷಿತವಾಗಿ ಮತ್ತೆ ತಮ್ಮ ಊರುಗಳಿಗೆ ಮರಳಬೇಕು ಎನ್ನುವುದು ಧನಂಜಯ್ ಅವರ ಆಸೆ. ಹಾಗಾಗಿ ಡಾಲಿ ಉತ್ಸವ ಎಲ್ಲಾ ರೀತಿಯ ಸಕಲ ಸಿದ್ಧತೆ ಈಗಾಗಲೇ ನಡೆಯುತ್ತಿದ್ದು ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆ ಇದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!