Wednesday, April 30, 2025
Google search engine
Homeತೀರ್ಥಹಳ್ಳಿಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಪ್ರತಿಭಟನೆಗೆ ಸಜ್ಜಾದ ರಾಜ್ಯ ಕಾಂಗ್ರೆಸ್..! ತೀರ್ಥಹಳ್ಳಿ...

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಪ್ರತಿಭಟನೆಗೆ ಸಜ್ಜಾದ ರಾಜ್ಯ ಕಾಂಗ್ರೆಸ್..! ತೀರ್ಥಹಳ್ಳಿ ಶಾಸಕರ ಸಮಜಾಯಿಸಿ ಏನು..?!

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಷ್ಟ್ರದ ಹಿರಿಯ ರಾಜಕಾರಣಿಗಳು ಆದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವಹೇಳನ ಮಾಡಿ ಟೀಕಿಸಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಹಾಗೂ ಮಾಜಿ‌ ಗೃಹ ಸಚಿವರಾದ ಆರಗ ಜಾನೇಂದ್ರ ಅವರ ವಿರುದ್ಧ ತಾಲ್ಲೂಕು ಅಫೀಸ್ ಎದುರು ಪ್ರತಿಭಟನೆಯನ್ನು ಮಾಜಿ ಸಚಿವರಾದ ಕಿಮ್ಮನೆ ರತ್ನಕರ್ ಹಾಗೂ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯ ಸಂಚಾಲಕರು ಡಾ ಆರ್ ಎಂ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದು ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರು ಪಟ್ಟಣ ಪಂಚಾಯತಿ ಸದಸ್ಯರು ಗ್ರಾ ಪ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು APMC ಸದಸ್ಯರು ಎಲ್ಲರೂ ಕಾಂಗ್ರೆಸ್ ಕಛೇರಿ ( ಗಾಂಧಿ ಭವನ ) ಹತ್ತಿರ 11, 30 ಬೆಳಗ್ಗೆ ಇಂದು 03 08 2023 ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲು ತಿಳಿಸಿದ್ದಾರೆ.. ಇತ್ತ ಶಿವಮೊಗ್ಗದಲ್ಲೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲು ಮುಂದಾಗಿದ್ದಾರೆ..

ಬೆಂಗಳೂರಿನ ನಿಮ್ಹಾನ್ಸ್ ಗೆ ಸೇರಿಸಿ ಎಂದ ಡಿಕೆ ಶಿವಕುಮಾರ್:

ಮಾಜಿ ಗೃಹ ಸಚಿವರ ಮನಸ್ಥಿತಿ ಸರಿಯಿಲ್ಲ ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಉಚಿತ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿದ್ದಾರೆ‌‌.

ಏನಿದು ಘಟನೆ..?!

ಕಸ್ತೂರಿ ರಂಗನ್ ವರದಿ ಕುರಿತಂತೆ ರಾಜ್ಯ ಸರ್ಕಾರ ಅದರಲ್ಲೂ ರಾಜ್ಯ ಸರ್ಕಾರದ ಅರಣ್ಯ ಮಂತ್ರಿ ಈಶ್ವರ್ ಖಂಡ್ರೆ ಕ್ರಮಕ್ಕೆ ಒಲವು ತೋರಿಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆಯನ್ನು ನಡೆಸಿತ್ತು. ಈ ಪ್ರತಿಭಟನೆಯ ಸಮಯದಲ್ಲಿ ಜ್ಞಾನೇಂದ್ರ ಅವರು ಮಾತನಾಡುತ್ತಾ ಬಯಲು ಸೀಮೆಯವರಿಗೆ ಮಲೆನಾಡಿನ ಸಮಸ್ಯೆ ಅರ್ಥವಾಗುವುದಿಲ್ಲ ಅವರ ತಲೆ ಕೂದಲು ಮೈಬಣ್ಣ ನೋಡಿದರೆ ಗೊತ್ತಾಗುತ್ತದೆ ಎನ್ನುವ ರೀತಿಯಲ್ಲಿ ಮಾತನಾಡಿದರು ಮಾತನಾಡುವ ಬರದಲ್ಲಿ ಈಶ್ವರ್ ಖಂಡ್ರೆ ಬದಲಾಗಿ ಮಲ್ಲಿಕಾರ್ಜುನ್ ಖರ್ಗೆಯನ್ನು ಹೋಲಿಸಿ ಮಾತನಾಡಿದರು. ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಮಾತನಾಡಿದ್ದೇನೆ ಆದರೆ ಬೇಕಂತ ಮಾತನಾಡಿರುವುದಲ್ಲ ತಪ್ಪಾಗಿ ಮಾತನಾಡಿರುವುದು ಇದನ್ನು ತಪ್ಪಾಗಿ ಅರ್ಥೈಸುವ ಅಗತ್ಯತೆ ಇಲ್ಲ ಎಂದು ಸಮಜಾಯಿಸಿ ನೀಡಿದ್ದಾರೆ.

ಇದು ದಲಿತ ಸಮುದಾಯದವರ ಮೇಲೆ ಮಾಡಿರುವ ಗಂಭೀರ ಆರೋಪ ಜಾತಿನಿಂದಲೇ ಆಗುತ್ತದೆ ಆದ್ದರಿಂದ ಶಾಸಕರನ್ನು ಕೂಡಲೇ ವಜಾ ಗೊಳಿಸಬೇಕು ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆಗೆ ಮುಂದಾಗಿದೆ..

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...