Wednesday, April 30, 2025
Google search engine
Homeಚಿತ್ರದುರ್ಗBIG NEWS:ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಲೀಲಾವತಿ, ಬಿಲ್ ಕಲೆಕ್ಟರ್ ನಿಶಾನಿ ಕಾಂತರಾಜ್ ಲೋಕಾಯುಕ್ತ ಬಲೆಗೆ..!

BIG NEWS:ಚಳ್ಳಕೆರೆ ನಗರಸಭೆ ಪೌರಾಯುಕ್ತೆ ಲೀಲಾವತಿ, ಬಿಲ್ ಕಲೆಕ್ಟರ್ ನಿಶಾನಿ ಕಾಂತರಾಜ್ ಲೋಕಾಯುಕ್ತ ಬಲೆಗೆ..!

ಚಳ್ಳಕೆರೆ :- ಚಳ್ಳಕೆರೆ ನಗರಸಭೆಯ ವ್ಯಾಪ್ತಿಯಲ್ಲಿರುವ ಒಬ್ಬರಿಗೆ ಮನೆ ಖಾತೆ ಬದಲಾವಣೆ ಮಾಡಿಕೊಡಲು 3 ಲಕ್ಷ ರೂ.ಗಳ ಲಂಚ ಸ್ವೀಕರಿಸುವಾಗ ಚಳ್ಳಕೆರೆ ನಗರಸಭೆ ಆಯುಕ್ತೆ ಟಿ.ಲೀಲಾವತಿ ಹಾಗೂ ಬಿಲ್ ಕಲೆಕ್ಟರ್ ನಿಶಾನಿ ಕಾಂತರಾಜ್ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.


ದೂರುದಾರ ವೈ.ನಾಗರಾಜಾಚಾರಿ ತಮ್ಮ ಪತ್ನಿ ಸುವರ್ಣಮ್ಮ ಹೆಸರಿನಲ್ಲಿ ಮನೆ ಖರೀದಿಸಿದ್ದು ಪತ್ನಿಯ ಹೆಸರಿಗೆ ಖಾತೆ ಬದಲಾವಣೆ ಮಾಡಿಸಿಕೊಳ್ಳಲು ಕಳೆದ ಮೇ 26ರಂದು ಅರ್ಜಿ ಸಲ್ಲಿಸಿದ್ದು 2 ತಿಂಗಳ ನಂತರ ಖಾತೆ ಬದಲಾವಣೆ ಮಾಡಿಕೊಡಲು 5 ಲಕ್ಷಕ್ಕೆ ಬೇಡಿಕೆ ಇಟ್ಟು ಕೊನೆಗೆ 3 ಲಕ್ಷ ರೂ.ಗಳನ್ನು ದೂರುದಾರರಿಂದ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚದ ಹಣ ಸಮೇತ ಇಬ್ಬರು ಆರೋಪಿಗಳನ್ನು ಗುರುವಾರ ಸಂಜೆ ಬಂಧಿಸಿದ್ದಾರೆ.


ನಗರಸಭೆ ಪೌರಾಯುಕ್ತೆ ಟಿ.ಲೀಲಾವತಿ ಆರೋಪಿ ನಂಬರ್-1 ಆಗಿದ್ದು 2ನೇ ಆರೋಪಿ ಬಿಲ್ ಕಲೆಕ್ಟರ್ ನಿಶಾನಿ ಕಾಂತರಾಜ್ ಆಗಿರುತ್ತಾರೆ. ಪೌರಾಯುಕ್ತೆಯ ಸೂಚನೆ ಮೇರೆಗೆ 2ನೇ ಆರೋಪಿ ಲಂಚದ 3 ಲಕ್ಷ ರೂ.ಗಳನ್ನು ಪಡೆದು 1ನೇ ಆರೋಪಿ ಲೀಲಾವತಿ ಬಳಕೆ ಮಾಡುವ ಕಾರಿನಲ್ಲಿ ಶೇಖರಣೆ ಮಾಡಿ ಇಟ್ಟಿರುತ್ತಾನೆ.

ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯಲ್ಲಿರುವ ಎಲ್.ಪಿ. ಗೇಟ್ ಬಳಿ ದೂರುದಾರ ವೈ. ನಾಗರಾಜಾಚಾರಿ ಇವರಿಂದ 3 ಲಕ್ಷ ಲಂಚದ ಹಣವನ್ನು ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುತ್ತಾರೆ.


ಚಿತ್ರದುರ್ಗ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕ ಎನ್. ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಚಿತ್ರದುರ್ಗ ಲೋಕಾಯುಕ್ತ ಕಚೇರಿ ಡಿವೈಎಸ್ಪಿ ಎನ್. ಮೃತ್ಯುಂಜಯ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಪ್ರಕರಣ ದಾಖಲಿಸಲಾಗಿದೆ.


ದಾಳಿ ಸಂದರ್ಭದಲ್ಲಿ ಚಿತ್ರದುರ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ನಿರೀಕ್ಷಕರುಗಳಾದ ವೈಎಸ್‌, ಶಿಲ್ಪಾ, ಆರ್. ವಸಂತಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಜಿ.ಎಂ.ತಿಪ್ಪೇಸ್ವಾಮಿ, ಹೆಚ್. ಶ್ರೀನಿವಾಸ, ಎಸ್.ಆರ್.ಪುಷ್ಪ, ಎಲ್.ಜಿ.ಸತೀಶ, ಜಿ.ಎನ್. ಸಂತೋಷ್ ಕುಮಾರ್, ಎಂ.ವೀರೇಶ್, ರಾಜೇಶ್, ಮಂಜುನಾಥ, ಮಹಲಿಂಗಪ್ಪ, ಕೆ.ಟಿ. ಮಾರುತಿ, ಆರ್.ವೆಂಕಟೇಶ್ಕುಮಾರ್, ಟಿ.ವಿ.ಸಂತೋಷ್, ಡಿ.ಮಾರುತಿ, ಎನ್.ಎಲ್.ಶ್ರೀಪತಿ, ಶಿವಮೊಗ್ಗ ಲೋಕಾಯುಕ್ತ ಠಾಣೆಯ ಸಿಬ್ಬಂದಿಗಳಾದ ಆರ್. ಮಹಂತೇಶ, ಆರ್. ಸಾವಿತ್ರಮ್ಮ, ಪ್ರಶಾಂತ್ ಕುಮಾರ್, ತರುಣ್‌ಕುಮಾರ್, ಇವರುಗಳು ಹಾಜರಿದ್ದು ಕರ್ತವ್ಯ ನಿರ್ವಹಿಸಿರುತ್ತಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...