Sunday, June 15, 2025
Google search engine
Homeತೀರ್ಥಹಳ್ಳಿBig breaking news: ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸರ ದಾಳಿ..! ಅಪಾರ...

Big breaking news: ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸರ ದಾಳಿ..! ಅಪಾರ ಪ್ರಮಾಣದ ವಿದೇಶಿ ಮಧ್ಯ ಹಾಗೂ ಕಾಡು ಪ್ರಾಣಿಗಳ ಕೊಂಬು ವಶ ‌..!

ತೀರ್ಥಹಳ್ಳಿ : ವಿಹಂಗಮ ರೆಸಾರ್ಟ್ ನಲ್ಲಿ ಹಲವು ವರ್ಷಗಳಿಂದ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ವಿದೇಶಿ ಮಧ್ಯಗಳ ಸರಬರಾಜು, ಕಾಡುಪ್ರಾಣಿಗಳ ಕೊಂಬು ಮಾರಾಟದ ಬಗ್ಗೆ ಅಲ್ಲಲ್ಲಿ ಗುಸು ಗುಸು ಪಿಸು ಪಿಸು ಮಾತುಗಳು ನಡೆಯುತ್ತಿದ್ದವು.

ತೀರ್ಥಹಳ್ಳಿ ಪೊಲೀಸ್ ಇಲಾಖೆಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ,

     ಗಜಾನನ ವಾಮನ ಸುತಾರ  ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ಮತ್ತು  ಅಶ್ವತ್ ಗೌಡ  ಪೋಲಿಸ್ ನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ ರವರ ನೇತೃತ್ವದ  ಸಾಗರ್ ಅತ್ತರವಾಲ ಪೊಲೀಸ್ ಉಪನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ,  ನವೀನ್ ಕುಮಾರ್ ಮಠಪತಿ ಪೊಲೀಸ್ ಉಪನಿರೀಕ್ಷಕರು ಮಾಳೂರು ಪೊಲೀಸ್ ಠಾಣೆ,  ರಂಗನಾಥ ಅಂತರಗಟ್ಟಿ ಪೋಲಿಸ್ ಉಪನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ,  ಪ್ರವೀಣ್, ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್ ಪೇಟೆ ಪೊಲೀಸ್ ಠಾಣೆ ಹಾಗೂ 50 ಜನ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡ ತಂಡವು ನಿನ್ನೆ ಅಂದರೆ ದಿನಾಂಕ  : 12-08-2023 ರಂದು ರಾತ್ರಿ ಸ್ಥಳಕ್ಕೆ ಹೋಗಿ ವಿಹಂಗಮ ರೆಸಾರ್ಟ್  ಮೇಲೆ ದಾಳಿ ನಡೆಸಿ  ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1) ಅಂದಾಜು ಮೌಲ್ಯ  1,00,000/- ರೂಗಳ  ಒಂದು ಡಬಲ್ ಬ್ಯಾರಲ್ ಬಂದೂಕು, 2) ಅಂದಾಜು ಮೌಲ್ಯ 25,000 /- ರೂಗಳ   310 ಜೀವಂತ ಗುಂಡುಗಳು    3) ಒಂದು ಕತ್ತಿ ಮತ್ತು ಒಂದು ಚಾಕು 4) ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, 5) ಆರು ಜಿಂಕೆ ಕೊಂಬಿನ ಟ್ರೊಫಿ, 6) ಒಂದು ಸಿಸಿ ಟಿವಿ ಡಿವಿ ಆರ್ 7) ಅಂದಾಜು ಮೌಲ್ಯ 7,650/- ರೂ ಗಳ ಒಟ್ಟು 51 ಬಿಯರ್ ಟಿನ್ ಗಳು, 8) ಅಂದಾಜು ಮೌಲ್ಯ 1,00,000/- ರೂ ಗಳ ಮದ್ಯ ತುಂಬಿದ ಬಾಟಲ್ ಗಳು 9) ಅಂದಾಜು ಮೌಲ್ಯ 750/- ರೂ ಗಳ ಒಟ್ಟು 6 Breezer ಬಾಟಲ್ ಮತ್ತು 10) 3 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ದಕ್ಷ ಪ್ರಾಮಾಣಿಕ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜೆ ಕೆ ಅವರ ಆದೇಶದ ಮೇರೆಗೆ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ್ ವಾಮನ್ ಸುತಾರ್ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಪೊಲೀಸ್ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ .

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!