Wednesday, April 30, 2025
Google search engine
Homeತೀರ್ಥಹಳ್ಳಿBig breaking news: ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸರ ದಾಳಿ..! ಅಪಾರ...

Big breaking news: ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸರ ದಾಳಿ..! ಅಪಾರ ಪ್ರಮಾಣದ ವಿದೇಶಿ ಮಧ್ಯ ಹಾಗೂ ಕಾಡು ಪ್ರಾಣಿಗಳ ಕೊಂಬು ವಶ ‌..!

ತೀರ್ಥಹಳ್ಳಿ : ವಿಹಂಗಮ ರೆಸಾರ್ಟ್ ನಲ್ಲಿ ಹಲವು ವರ್ಷಗಳಿಂದ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು ವಿದೇಶಿ ಮಧ್ಯಗಳ ಸರಬರಾಜು, ಕಾಡುಪ್ರಾಣಿಗಳ ಕೊಂಬು ಮಾರಾಟದ ಬಗ್ಗೆ ಅಲ್ಲಲ್ಲಿ ಗುಸು ಗುಸು ಪಿಸು ಪಿಸು ಮಾತುಗಳು ನಡೆಯುತ್ತಿದ್ದವು.

ತೀರ್ಥಹಳ್ಳಿ ಪೊಲೀಸ್ ಇಲಾಖೆಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ,

     ಗಜಾನನ ವಾಮನ ಸುತಾರ  ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ಮತ್ತು  ಅಶ್ವತ್ ಗೌಡ  ಪೋಲಿಸ್ ನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ ರವರ ನೇತೃತ್ವದ  ಸಾಗರ್ ಅತ್ತರವಾಲ ಪೊಲೀಸ್ ಉಪನಿರೀಕ್ಷಕರು ತೀರ್ಥಹಳ್ಳಿ ಪೊಲೀಸ್ ಠಾಣೆ,  ನವೀನ್ ಕುಮಾರ್ ಮಠಪತಿ ಪೊಲೀಸ್ ಉಪನಿರೀಕ್ಷಕರು ಮಾಳೂರು ಪೊಲೀಸ್ ಠಾಣೆ,  ರಂಗನಾಥ ಅಂತರಗಟ್ಟಿ ಪೋಲಿಸ್ ಉಪನಿರೀಕ್ಷಕರು ಆಗುಂಬೆ ಪೊಲೀಸ್ ಠಾಣೆ,  ಪ್ರವೀಣ್, ಪೊಲೀಸ್ ಉಪ ನಿರೀಕ್ಷಕರು, ರಿಪ್ಪನ್ ಪೇಟೆ ಪೊಲೀಸ್ ಠಾಣೆ ಹಾಗೂ 50 ಜನ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡ ತಂಡವು ನಿನ್ನೆ ಅಂದರೆ ದಿನಾಂಕ  : 12-08-2023 ರಂದು ರಾತ್ರಿ ಸ್ಥಳಕ್ಕೆ ಹೋಗಿ ವಿಹಂಗಮ ರೆಸಾರ್ಟ್  ಮೇಲೆ ದಾಳಿ ನಡೆಸಿ  ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1) ಅಂದಾಜು ಮೌಲ್ಯ  1,00,000/- ರೂಗಳ  ಒಂದು ಡಬಲ್ ಬ್ಯಾರಲ್ ಬಂದೂಕು, 2) ಅಂದಾಜು ಮೌಲ್ಯ 25,000 /- ರೂಗಳ   310 ಜೀವಂತ ಗುಂಡುಗಳು    3) ಒಂದು ಕತ್ತಿ ಮತ್ತು ಒಂದು ಚಾಕು 4) ಮೂರು ಕಾಡು ಕೋಣದ ಕೊಂಬಿನ ಟ್ರೊಫಿ, 5) ಆರು ಜಿಂಕೆ ಕೊಂಬಿನ ಟ್ರೊಫಿ, 6) ಒಂದು ಸಿಸಿ ಟಿವಿ ಡಿವಿ ಆರ್ 7) ಅಂದಾಜು ಮೌಲ್ಯ 7,650/- ರೂ ಗಳ ಒಟ್ಟು 51 ಬಿಯರ್ ಟಿನ್ ಗಳು, 8) ಅಂದಾಜು ಮೌಲ್ಯ 1,00,000/- ರೂ ಗಳ ಮದ್ಯ ತುಂಬಿದ ಬಾಟಲ್ ಗಳು 9) ಅಂದಾಜು ಮೌಲ್ಯ 750/- ರೂ ಗಳ ಒಟ್ಟು 6 Breezer ಬಾಟಲ್ ಮತ್ತು 10) 3 ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ದಕ್ಷ ಪ್ರಾಮಾಣಿಕ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜೆ ಕೆ ಅವರ ಆದೇಶದ ಮೇರೆಗೆ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ್ ವಾಮನ್ ಸುತಾರ್ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಪೊಲೀಸ್ ಇಲಾಖೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ .

ರಘುರಾಜ್ ಹೆಚ್.ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...