Home ಶಿವಮೊಗ್ಗಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಜಂಟಿ ಪರಿವೀಕ್ಷಣೆಗೆ ದಿನಾಂಕ ನಿಗದಿ..!

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಜಂಟಿ ಪರಿವೀಕ್ಷಣೆಗೆ ದಿನಾಂಕ ನಿಗದಿ..!

by EDITOR NEWS WARRIORS
0 comments


ಶಿವಮೊಗ್ಗ,: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಪ್ಯಾಕೇಜ್‌ಗಳಲ್ಲಿ ಆಯ್ದ ವಾರ್ಡ್ಗಳಲ್ಲಿ ರಸ್ತೆ, ಚರಂಡಿ, ಫುಟ್‌ಪಾತ್, ಪಾರ್ಕ್, ಬಸ್ ಶೆಲ್ಟರ್, ಕನ್ಸರ್‌ವೆನ್ಸಿ, ಸರ್ಕಲ್ ಅಭಿವೃದ್ಧಿ, ಶೌಚಾಲಯ ಇತ್ಯಾದಿಗಳ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಎಲ್ಲಾ ನಿರ್ಮಾಣ ಕಾಮಗಾರಿಗಳನ್ನು ಹಸ್ತಾಂತರಿಸಲು ಶಿವಮೊಗ್ಗ ಮಹಾನಗರ ಪಾಲಿಕೆಯು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳ ಜೊತೆ ಜಂಟಿ ಪರಿವೀಕ್ಷಣೆಯನ್ನು ನಡೆಸಿ, ನ್ಯೂನ್ಯತೆ ಇದ್ದಲ್ಲಿ ಸರಿಪಡಿಸಿಕೊಂಡು ಹಸ್ತಾಂತರಿಸಿಕೊಳ್ಳಲು ನಿರ್ಣಯಿಸಿದೆ.


ಪ್ರಾಥಮಿಕ ಹಂತವಾಗಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ., ವತಿಯಿಂದ ಅಳವಡಿಸಲಾಗಿರುವ ಭೂಗತ ಕೇಬಲ್, ಬೀದಿ ದೀಪದ ಕಂಬಗಳ ಸಂಬಂಧ ಮೆಸ್ಕಾಂ, ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಇತರೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು, ವಾರ್ಡ್ ಸದಸ್ಯರುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಗುತ್ತಿಗೆದಾರರ ಸಮ್ಮುಖದಲ್ಲಿ ಆ. 22 ರಿಂದ 25ರವರೆಗೆ ಬೆಳಗ್ಗೆ 10.00 ರಿಂದ ಮ.12.00ರವರೆಗೆ ಜಂಟಿ ಸ್ಥಳ ಪರಿಶೀಲನೆ, ಸಮೀಕ್ಷೆ ನಡೆಸಿ ನ್ಯೂನ್ಯತೆ ಗುರುತಿಸಿ ನಂತರದ ದಿನದಲ್ಲಿ ಸರಿಪಡಿಸಿಕೊಳ್ಳಲು ತೀರ್ಮಾನಿಸಿದೆ.
ಆ.22 ರಂದು ದುರ್ಗಿಗುಡಿ, ಸವರ್‌ಲೈನ್‌ರಸ್ತೆ ದೇವಸ್ಥಾನದ ಹತ್ತಿರ, ಗಾರ್ಡನ್‌ಏರಿಯಾ, ಗೌರವ್ ಲಾಡ್ಜ್ ಎದುರುಗಡೆ, ಗಾರ್ಡನ್ ಏರಿಯಾ ಸ್ಕಾçಪ್ ಷಾಪ್ ಎದುರುಗಡೆ, ಜ್ಯೂಯಲ್‌ರಾಕ್ ರಸ್ತೆ, ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ, ಮಿಷನ್ ಕಾಂಪೌಂಡ್, ಖಾಸಗಿ ಬಸ್ ನಿಲ್ದಾಣದ ಎದುರು.
ಆ. 23 ರಂದು ಜೈಲ್‌ರಸ್ತೆ, ಎಎನ್‌ಕೆ ರಸ್ತೆ, ವೆಂಕಟೇಶ್‌ನಗರ, ಗಾಂಧಿನಗರ, ಚೆನ್ನಪ್ಪ ಲೇಔಟ್, ರವೀಂದ್ರನಗರ, ಅಚ್ಯುತರಾವ್ ಲೇಔಟ್, ಗಾಂಧಿನಗರ ಮುಖ್ಯರಸ್ತೆ, ಶರಾವತಿನಗರ, ಹೊಸಮನೆ, ಕುವೆಂಪುರಸ್ತೆ, ಲಾಸ್ಟ್ ಮೈಲ್ ಕನೆಕ್ಟಿವಿಟಿ.
ಆ.24ರಂದು ಜಯನಗರ, ಬಸವನಗುಡಿ, ವಿನಾಯಕನಗರ, ಹನುಮಂತನಗರ, ಎ.ಎ.ಕಾಲೋನಿ.
ಆ.25 ರಂದು ಸೋಮಯ್ಯ ಲೇಔಟ್, ಬಾಪೂಜಿನಗರ, ಟ್ಯಾಂಕ್‌ಮೊಹಲ್ಲಾ, ಕೋಟೆರಸ್ತೆ, ಸಿಎಲ್ ರಾಮಣ್ಣ ರಸ್ತೆ, ಎಸ್‌ಪಿಎಂ ರಸ್ತೆ, ಗುಂಡಪ್ಪ ಶೆಡ್, ಶೇಷಾದ್ರಿಪುರಂ

ಈ ಎಲ್ಲಾ ಪ್ರದೇಶಗಳ ಸಾರ್ವಜನಿಕರು, ಸಂಘಸಂಸ್ಥೆಗಳು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ., ನಿಂದ ನಿರ್ವಹಿಸಿದ ಭೂಗತ ಕೇಬಲ್, ಬೀದಿದೀಪ ಕಂಬಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಿರ್ಧಿಷ್ಟ ದೂರು, ಸಮಸ್ಯೆ ಇದ್ದಲ್ಲಿ ಲಿಖಿತವಾಗಿಯಾಗಲೀ ಅಥವಾ ಪರಿಶೀಲನೆ ದಿನ ಸೂಚಿತ ಸಮಯದಂದು ಸ್ಥಳದಲ್ಲಿ ಹಾಜರಿದ್ದಾಗಲಿ ಪರಿವೀಕ್ಷಣೆಗೆ ಸಹಕರಿಸುವಂತೆ ಸ್ಮಾರ್ಟ್ ಸಿಟಿ ಲಿ., ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...