Monday, June 16, 2025
Google search engine
Homeಶಿವಮೊಗ್ಗನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

ನಂಜನಗೂಡು ರಾಯರ ಮಠದಲ್ಲಿ ಆರಾಧನಾ ಮಹೋತ್ಸವ.

ಶಿವಮೊಗ್ಗ : ಬೊಮ್ಮನ ಕಟ್ಟೆ ರಸ್ತೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ 75ನೇ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಗಸ್ಟ್ 31ರಿಂದ ಸೆ.2ರವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ.

ಆರಾಧನೆಯಲ್ಲಿ ಏನೆಲ್ಲಾ ಸೇವೆಗಳು ನಡೆಯಲಿವೆ..?

ಆರಾಧನಾ ಮಹೋತ್ಸವದ ವಿವರಣೆ ನೀಡಿದ ಮಠದ ವ್ಯವಸ್ಥಾಪಕ ಧೀರೇಂದ್ರ ಆಚಾರ್ ಆಗಸ್ಟ್ 30ರಂದು ಸಂಜೆ 6ಕ್ಕೆ ಗೋಪೂಜೆ, ಲಕ್ಷ್ಮೀ ಪೂಜೆ, ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ‌ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್ ಈಶ್ವರಪ್ಪರವರ ಉಪಸ್ಥಿತಿ ಇರಲಿದೆ.

ಆಗಸ್ಟ್‌ 31ರ ಬೆಳಗ್ಗೆ 5.30 ಕ್ಕೆ ಸುಫ್ರಭಾತದಿಂದ ಆರಂಭವಾಗುವ ಪೂರ್ವಾರಾಧನೆ ಅಷ್ಟೋತ್ತರ, ಕ್ಷೀರಾಭಿಷೇಕ, ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ನಡೆಸಿ ಮಹಾಮಂಗಳಾರತಿ ತೀರ್ಥಪ್ರಸಾಧ ವಿನಿಯೋಗ ಮಾಡುವ ಮೂಲಕ ಕೊನೆಯಾಗುತ್ತದೆ.
ಸೆ.1(ದ್ವಿತೀಯ) ಗುರುರಾಜರ ಮಧ್ಯಾರಾಧನೆ ಹಾಗು ಸೆ.2 ಶ್ರೀ ಗುರುರಾಜರ ಉತ್ತರಾಧನೆ ನಡೆಯಲಿದ್ದು ಅಂದು ಬೆಳಗ್ಗೆ 9ಕ್ಕೆ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ತಿಳಿಸಿದರು. ಭಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಕೋರಿದರು.

ವರದಿ- ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!