Home ಶಿವಮೊಗ್ಗನಾಳೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಗ್ಯಾರಂಟಿ- ಹೆಚ್.ಸಿ ಯೋಗೀಶ್.

ನಾಳೆ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಗ್ಯಾರಂಟಿ- ಹೆಚ್.ಸಿ ಯೋಗೀಶ್.

by Reporter Smg

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯನ್ನು ರಾಜ್ಯ ಸರ್ಕಾರ ನಾಳೆ ಅನುಷ್ಠಾನಕ್ಕೆ ತರಲಿದೆ.

ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಮ್ ಡಿ.ಕೆ ಶಿವಕುಮಾರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಗೃಹ ಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಿದ್ದಾರೆ.

ಈ ಕುರಿತಂತೆ ಜಿಲ್ಲಾ ಕಾಂಗಯ ಕಛೇರಿಯಲ್ಲಿ ಮಾಧ್ಯಮಗಳ ಮಾತನಾಡಿದ ಪಾಲಿಕೆ ಸದಸ್ಯ ಹೆಚ್.ಸಿ ಯೋಗೀಶ್ ರವರು ನಾಳೆ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತದಿಂದ  ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪರವರು ಕಾರ್ಯಕ್ರಮ ನೆರವೇರಿಸಿಕೊಡಲಿದ್ದಾರೆ.

ಕಾರ್ಯಕ್ರಮದಲ್ಲಿ ನಗರದ ಶಾಸಕರು ಜನ ಪ್ರತಿನಿಧಿಗಳು ಉಪಸ್ಥಿತಿ ಇರುತ್ತದೆ.


92.75 ಕೋಟಿಯಷ್ಟು ಹಣ ನಾಳೆ‌ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆಯಾಗಲಿದೆ
ಕಾಂಗ್ರೆಸ್ ಪಕ್ಷದ  ಜಾರಿಗೊಳಿಸಲಾಗಿರುವ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆ ಈ ಗೃಹ ಲಕ್ಷ್ಮಿ ಯೋಜನೆ ಆರಂಭದಲ್ಲಿ ಈ ಯೋಜನೆ ಜಾರಿಗೆ ತರಲು ಆಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದವು ಆದರೆ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಎಲ್ಲಾ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆವ ಸರ್ಕಾರ ಎಂದು ಸಾಬೀತು ಮಾಡಿದ್ದಾರೆ.


ನಗರದ ಎಲ್ಲಾ ವಾರ್ಡ್ ಗಳ ಸರ್ಕಾರಿ ಶಾಲೆಗಳು ಹಾಗು ಸಮುದಾಯ ಭವನದಲ್ಲಿ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ.

ನಾಳೆ ಅಂಬೇಡ್ಕರ್ ಭವನದಲ್ಲಿ‌ನಡೆಯುವ ಕಾರ್ಯಕ್ರಮಕ್ಕೆ 5ಸಾವಿರ ಜನ ಸೇರುವ ನಿರೀಕ್ಷೆ ಇದೆ.

ಇನ್ನೂ ಹಲವಾರು ಮಹಿಳೆಯರು ಯೋಜನೆಯ ವ್ಯಾಪ್ತಿಗೆ ಬಂದಿಲ್ಲ ಗೃಹ ಲಕ್ಷ್ಮಿ ಯೋಜನೆಗೆ ನಿರ್ದಿಷ್ಟ ಕಾಲಮಾನ ಇರುವುದಿಲ್ಲ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗಬಹುದು.


ಅಶಕ್ತ ಮಹಿಳೆಯರಿಗೆ ಸಹಾಯ ಮಾಡಲು 200ಜನರ ಪ್ರಜಾಪ್ರತಿನಿಧಿ ಹೆಸರಿನ ಸ್ವಯಂ ಸೇವಕರು ತಯಾರಿದ್ದಾರೆ ಇವರ ಸಂಪರ್ಕ ಸಂಖ್ಯೆಯನ್ನು ನಾಳೆ ಸಾರ್ವಜನಿಕರಿಗೆ ನೀಡಲಾಗುವುದು ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!