Wednesday, April 30, 2025
Google search engine
Homeರಾಜ್ಯಉಪನ್ಯಾಸ ಭಾಗ 2... ಪ್ರತಿಭಟನೆಯೂ ಎರಡು.

ಉಪನ್ಯಾಸ ಭಾಗ 2… ಪ್ರತಿಭಟನೆಯೂ ಎರಡು.

ಶಿವಮೊಗ್ಗ : ನಗರದ ಬಿ.ಹೆಚ್ ರಸ್ತೆಯಲ್ಲಿರುವ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮಕ್ಕೆ ಸಂಜೆ ವೇಳೆಯಲ್ಲಿ ಪ್ರತಿಭಟನೆಯ ಗಾಳಿ ಬೀಸಿತು.

ಜಿಲ್ಲಾ ಕಾಂಗ್ರೆಸ್ ನಿಂದ ಕಾರ್ಯಕರ್ತರು ಕರ್ನಾಟಕ ಸಂಘ ಬಳಿ ಸೂಲಿಬೆಲೆ ವಿರುದ್ಧ ಘೋಷಣೆ ಕೂಗುತ್ತಾ ಕರ್ನಾಟಕ ಸಂಘ ಬಳಿ ಆಗಮಿಸಿದರು. ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪೊರಕೆ ಹಿಡಿದು ದಿಕ್ಕಾರ ಕೂಗಿದರು.

ಪ್ರತಿಭಟಿಸಲು ಬಂದವರು ಪ್ರತಿಭಟನೆ ಎದುರಿಸಿದರು.


ಕಾರ್ಯಕ್ರಮದ ರುವಾರಿಗಳಾದ ನಮೋ ಬ್ರಿಗೇಡ್ ತಂಡದವರು ಕರ್ನಾಟಕ ಸಂಘದ ಹೊರ ಬಂದು ಕಾಂಗ್ರೆಸ್ ಪಕ್ಷದ ವಿರುದ್ಧ ದಿಕ್ಕಾರ ಕೂಗಲು ಆರಂಭಿಸಿದರು.

ಎರಡೂ ಕಡೆಯವರ ಪರಸ್ಪರ ಪ್ರತಿಭಟನೆ ಘೋಷಣೆಗಳು ಸಾರ್ವಜನಿಕರನ್ನು ಕರ್ನಾಟಕ ಸಂಘದ ಮುಂದೆ ನಿಲ್ಲುವಂತೆ ಮಾಡಿತ್ತು.

ಮೋದಿ…ಮೋದಿ…ಮೋದಿ


ಕಾಂಗ್ರೆಸ್ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೋಲೀಸರು ಬಸ್ ನಲ್ಲಿ ಕಾರ್ಯಕರ್ತರನ್ನು ತೆಗೆದುಕೊಂಡು ಸ್ಥಳಾಂತರಿಸುವಾಗ ರಸ್ತೆ ದಾಟಿ ಬಸ್ ಬಳಿ ಬಂದ ನಮೋ ಬ್ರಿಗೇಡ್ ಹಾಗು ಬಿಜೆಪಿ ಕಾರ್ಯಕರ್ತರು ಬಸ್ ಸಾಗುವಾಗ ಡಿವೈಡರ್ ಮೇಲೆ ನಿಂತು ಮೋದಿ ಜೈಕಾರದ ಘೋಷಣೆಗಳನ್ನು ಹಾಕಿದರು.

ಪ್ರತಿಭಟನಾ ಸ್ಥಳಕ್ಕೆ ಗೋ ಮೂತ್ರ ಸಿಂಪಡಿಸಿದರು.

ಎರಡೂ ಕಡೆಯವರ ಪ್ರತಿಭಟನೆ ತಣ್ಣಗಾದ ನಂತರ ನಮೋ ಬ್ರಿಗೇಡ್ ನ ಅಭಿಮಾನಿ ಒಬ್ಬ ಕಾಂಗ್ರೆಸ್ ಪ್ರತಿಭಟನೆ ಮಾಡಿದ ಸ್ಥಳಕ್ಕೆಲ್ಲಾ ಗೋಮೂತ್ರ ಹಾಕಿದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...