Wednesday, April 30, 2025
Google search engine
Homeರಾಜ್ಯಇದೊಂದು ಪುಕ್ಕಲು ಸರ್ಕಾರ - ಚಕ್ರವರ್ತಿ ಸೂಲಿಬೆಲೆ..!

ಇದೊಂದು ಪುಕ್ಕಲು ಸರ್ಕಾರ – ಚಕ್ರವರ್ತಿ ಸೂಲಿಬೆಲೆ..!

ಶಿವಮೊಗ್ಗ : ಪ್ರಖರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ಎಫ್ ಐ ಆರ್ ವಿನೋಬಾ ನಗರ ಪೋಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇಂದು ಈ ಸಂಬಂದ ಸೂಲಿಬೆಲೆ ಯವರಿಗೆ ನೋಟೀಸ್ ಜಾರಿ ಮಾಡಿ ಠಾಣೆಗೆ ಕರೆಸಿಕೊಳ್ಳಲಾಗಿತ್ತು. ಶಾಸಕ ಎಸ್ ಎನ್ ಚನ್ನಬಸಪ್ಪ ಜೊತೆಗೆ ವಿನೋಬಾ ನಗರ ಪೋಲೀಸ್ ಠಾಣೆಗೆ ಆಗಮಿಸಿ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದರು.

ಬಳಿಕ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ನನ್ನ ವಿರುದ್ಧ ದಾಖಲಾದ ಸಣ್ಣ ದೂರಿಗೆ ಎಫ್ ಐ ಆರ್ ದಾಖಲಿಸಿ ನನ್ನ ಸ್ಟೇಟ್ ಮೆಂಟ್ ತೆಗೆದುಕೊಳ್ಳಲು ಠಾಣೆಗೆ ಕರೆಸಿಕೊಳ್ಳಲಾಗಿತ್ತು.

ಪೋಲೀಸರು ಬಹಳ ಪ್ರೀತಿಯಿಂದ ನನ್ನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ‌. ಈ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ನನ್ನ ಪೋಲೀಸ್ ಠಾಣೆ ಮೆಟ್ಟಿಲು ಏರುವಂತೆ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು ಆದರೆ ಅದು ಈ ರೀತಿ ಎಂದು ಕೊಂಡಿರಲಿಲ್ಲ.

ಕಾಂಗ್ರೆಸ್ ಸರ್ಕಾರ ಸಜ್ಜನರನ್ನು ಎದುರಿಸಲಾಗದೆ ಪೋಲೀಸರನ್ನ ಬಳಸಿಕೊಂಡು ಈ ರೀತಿಯ ಪ್ರಯತ್ನ‌ ಮಾಡುತ್ತಿದ್ದಾರೆ. ನಾವು ಇದ್ಯಾವುದಕ್ಕೂ ಹೆದರುವುದಿಲ್ಲ ಕಾಂಗ್ರೆಸ್ ಒಂದು ಪುಕ್ಕಲು ಸರ್ಕಾರ.


ಸೌಗಂಧಿಕರವರು ಫೇಸ್ ಬುಕ್ ನಲ್ಲಿ ಮೋದಿಯವರನ್ನು ಮೋರಿ ಎಂದು ಕರೆದಿದ್ದರು ಅದಕ್ಕೆ ಪ್ರತ್ಯುತ್ತರವಾಗಿ‌ ನಮ್ಮ ಸೋಷಿಯಲ್ ಮೀಡಿಯಾದ ಹುಡುಗರು ನಿನಗ್ಯಾಕೆ ಉರಿ ಎಂದು ಸಂದೇಶ ಹಾಕಿದ್ದರು.

ಮೋದಿಯವರಂತ ಮಹಾನ್ ನಾಯಕರ ಬಗ್ಗೆ ‌ಕೀಳಾದ ಹೇಳಿಕೆ ನೀಡುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾದವರು ಎಚ್ಚೆತ್ತುಕೊಳ್ಳ ಬೇಕು ಇಲ್ಲವಾದಲ್ಲಿ ಜನರೇ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು.

ವರದಿ : ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...