Sunday, June 15, 2025
Google search engine
Homeರಾಜ್ಯವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

ವಿಮಾನ ಹಾರಾಟ ಆರಂಭದ ಕಾರ್ಯಕ್ರಮದಲ್ಲಿ ರೈತರ ಅಸಮಧಾನ ಸ್ಪೋಟ.

ಶಿವಮೊಗ್ಗ : ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಯಾನ ಸೇವೆಗಳು ಅಧಿಕೃತವಾಗಿ ಆರಂಭವಾಗಿದೆ‌. ವಿಮಾನ ಹಾರಾಟ ಆರಂಭದ ಕಾರ್ಯಕ್ರಮವು ಏರ್ ಪೋರ್ಟ್ ನಲ್ಲಿ ನಡೆಯುತ್ತಿರುವಾಗ ಸಂಸದ ಬಿ.ವೈ ರಾಘವೇಂದ್ರ ರವರು ನಿಲ್ದಾಣ ನಿರ್ಮಾಣಕ್ಕೆ ಭೂಮಿ ಕೊಟ್ಟ ರೈತರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸಾಂಕೇತಿಕವಾಗಿ ಕೃಷ್ಣಪ್ಪ ಮತ್ತು ಗೋವಿಂದರಾಜು  ಎಂಬ ಇಬ್ಬರು ರೈತರನ್ನು ಸನ್ಮಾನಿಸಲು ವೇದಿಕೆ ಮೇಲೆ ಆಹ್ವಾನಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್(ದನಿ) ವೇದಿಕೆ ಮೇಲೆ ಬಂದು ಇವರಿಬ್ಬರೇನಾ ರೈತರು ಇರೋದು ಎಂದು ಆಕ್ರೋಶ ವ್ಯಕ್ತಪಡಿಸಿದರು ತಕ್ಷಣ ಭದ್ರತಾ ಸಿಬ್ಬಂದಿಯವರು ವಿಜಯ್ ಕುಮಾರ್ ರವರನ್ನು ವಶಕ್ಕೆ ಪಡೆದರು.

ಇನ್ನೊಂದು ಭಾಗದಲ್ಲಿ ರೈತರ ಗುಂಪಿನಿಂದ ಸನ್ಮಾನಕ್ಕೆ ನೀವು ಕರೆದವರು ರೈತರಲ್ಲ ಬ್ರೋಕರ್ ಗಳು ಎಂದು ತಮ್ಮ ಅಸಮಧಾನ ಹೊರ ಹಾಕಿದರು.

ವೇದಿಕೆ ಮೇಲಿಂದ ಸಂಸದ ಬಿ.ವೈ.ರಾಘವೇಂದ್ರ ರೈತರು ಪಕ್ಷ, ಧರ್ಮ, ಜಾತಿಗಳಗಿಂತ ಮಿಗಿಲಾದವರು ಎಂದು ಹೇಳಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಂದ ಇಬ್ಬರಿಗೆ ಸನ್ಮಾನ ಮಾಡಿಸಿದರು.


ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!