Home ರಾಜ್ಯಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಹೇರಿಕೆ ಬಗ್ಗೆ ಸಚಿವ ಎಮ್.ಬಿ ಪಾಟೀಲ್ ಏನಂದ್ರು…!?

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಹೇರಿಕೆ ಬಗ್ಗೆ ಸಚಿವ ಎಮ್.ಬಿ ಪಾಟೀಲ್ ಏನಂದ್ರು…!?

by Reporter Smg
0 comments

ಶಿವಮೊಗ್ಗ : ಮಲೆನಾಡಿನಿಂದ ಲೋಹದ ಹಕ್ಕಿಗಳ ಹಾರಾಟ ಇಂದಿನಿಂದ ನಿರಂತರವಾಗಿರಲಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಇಂಡಿಗೋ ವಿಮಾನ ಭೂಸ್ಪರ್ಶ ಮಾಡಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ಸಚಿವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವರಾದ ಎಮ್.ಬಿ ಪಾಟೀಲ್, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಗಣ್ಯರು ಆಕಾಶ ಮಾರ್ಗದ ಮೂಲಕ ಇಂಡಿಗೋ ಫ್ಲೈಟ್ ನಲ್ಲಿ ಶಿವಮೊಗ್ಗಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಗಮನ ಸೆಳೆದ ವಿಮಾನ ಸಂಚಾರದ ವೇಳಾಪಟ್ಟಿ.


ಬೆಂಗಳೂರಿನ ಕನ್ನಡ ಭಾಷಾಭಿಮಾನಿ ರೂಪೇಶ್ ರಾಜಣ್ಣ ಎಂಬುವರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿರುವ ವಿಮಾನ ಸಂಚಾರದ ವೇಳಾಪಟ್ಟಿಯು ಎಲ್ಇಡಿ ಸ್ಕ್ರೀನ್ ನಲ್ಲಿ ಇಂಗ್ಲೀಷ್ ಹಾಗು ಹಿಂದಿ ಭಾಷೆಯಲ್ಲಿ ಬರುತ್ತಿರುವುದನ್ನು ಗಮನಿಸಿ ಸಚಿವ ಎಮ್.ಬಿ ಪಾಟೀಲ್ ರವರಿಗೆ ಟ್ವೀಟ್ ಮೂಲಕ ಗಮನಕ್ಕೆ ತಂದು ಎಲ್ಲಿದೆ ಕನ್ನಡ ಎಂದು ಕೇಳಿದ್ದಾರೆ.

ಸಚಿವ ಎಮ್‌.ಬಿ ಪಾಟೀಲ್ ಉತ್ತರ.


ಶಿವಮೊಗ್ಗ ಏರ್ ಪೋರ್ಟ್ ನ ವಿಮಾನ ಸಂಚಾರದ ವೇಳಾಪಟ್ಟಿ ಹಿಂದಿ ಹಾಗು ಇಂಗ್ಲೀಷ್ ಭಾಷೆಯಲ್ಲಿರುವುದು ಅರಿತ ಸಚಿವರು

ಇದು ನನ್ನ ಗಮನಕ್ಕೆ ಬಂದಿರಲಿಲ್ಲ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಈ ಕುರಿತು ಮಾತನಾಡುವೆ ಎಂದು ಟ್ವೀಟ್ ಮೂಲಕ ಉತ್ತರಿಸಿದ್ದಾರೆ.

ಕನ್ನಡಿಗ ರೂಪೇಶ್ ರಾಜಣ್ಣರ ಕನ್ನಡ ಬಗೆಗಿನ ಕಳಕಳಿ ಶ್ಲಾಘನೀಯ. ಸಚಿವರ ಗಮನಕ್ಕೆ ಬಂದ ನಂತರ ವಿಮಾನ ಸಂಚಾರ ವೇಳಾಪಟ್ಟಿ ಕನ್ನಡ ಭಾಷೆಯಲ್ಲಿ ಯಾವಾಗ ಆರಂಭ ಆಗುತ್ತದೆ ಎಂದು ಕಾದು ನೋಡಬೇಕಿದೆ.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!