Wednesday, April 30, 2025
Google search engine
Homeರಾಜ್ಯ1.5ಕೋಟಿ ಕೊಡಿ- ಪಾಲಿಕೆ ಸದಸ್ಯರ ಮನವಿ.

1.5ಕೋಟಿ ಕೊಡಿ- ಪಾಲಿಕೆ ಸದಸ್ಯರ ಮನವಿ.

ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರ ಸರ್ವಪಕ್ಷ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿತು.

ಹಣ ಬಿಡುಗಡೆಗೆ ಮನವಿ.

ಬಾರಿ ನಾಡ ಹಬ್ಬ ದಸರಾ ಹಬ್ಬವನ್ನು ಶಿವಮೊಗ್ಗ ನಗರದಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ1.5 ಕೋಟಿ ಹಣ ಮಂಜೂರು ಮಾಡುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಸರ್ವ ಪಕ್ಷಗಳ ನಿಯೋಗವು ಶಾಸಕರಾದ ಚನ್ನಬಸಪ್ಪ ನೇತೃತ್ವದಲ್ಲಿ ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಿದರು.

ಕಳೆದ ಬಾರಿ ಶಿವಮೊಗ್ಗ ನಗರದ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರ 1ಕೋಟಿ ಮಂಜೂರು ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕೂಡ ಹಲವು ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿ ಯಶಸ್ವಿಗೊಳಿಸಲಾಗಿತ್ತು. ಈ ಭಾರಿ ಅದ್ದೂರಿಯ ದಸರಾ ನಡೆಸುವ ಸಲುವಾಗಿ ಇನ್ನೂ ಹೆಚ್ಚಿನ ಹಣ ಮಂಜೂರಿಗೆ ಪಾಲಿಕೆ ಸರ್ವಪಕ್ಷಗಳ ನಿಯೋಗ ಮುಖ್ಯಮಂತ್ರಿಗಳ ಭೇಟಿಗೆ ತೆರಳಿದ್ದರು.

ಏನಂದ್ರು ಸಿ.ಎಮ್ ಸಿದ್ಧರಾಮಯ್ಯ.

ಶಾಸಕರ ಹಾಗು ಪಾಲಿಕೆ ಸದಸ್ಯರ ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ದಸರಾ ಕಾರ್ಯಕ್ರಮಗಳ ಪಟ್ಟಿಯನ್ನು ಪರಿಶೀಲಿಸಿ ಹಣ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ಮಹಾನಗರ ಪಾಲಿಕೆ ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಲಕ್ಷ್ಮೀ ಶಂಕರ ನಾಯ್ಕ, ಆಡಳಿತ ಪಕ್ಷದ ನಾಯಕ ಜ್ಞಾನೇಶ್ವರ್‌ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್‌, , ಪಾಲಿಕೆ ಸದಸ್ಯರಾದ ಹೆಚ್‌.ಸಿ. ಯೋಗೀಶ್‌, ನಾಗರಾಜ ಕಂಕಾರಿ,ಸುವರ್ಣ ಶಂಕರ್‌,ಭಾನುಮತಿ ವಿನೋದ್‌ , ಧೀರರಾಜ್‌ ಹೊನ್ನವಿಲೆ, ವಿಶ್ವಾಸ್ , ಎಸ್ ಜಿ ರಾಜು, ಆರ್‌.ಸಿ. ನಾಯ್ಕ್, ಹಾಗೂ ಪ್ರಮುಖರಾದ ಶಂಕರ ನಾಯ್ಕ, ಕೆ ರಂಗನಾಥ್ ಇನ್ನಿತರರಿದ್ದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...