Wednesday, April 30, 2025
Google search engine
Homeರಾಜ್ಯರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ - ಕೆ.ಎಸ್ ಈಶ್ವರಪ್ಪ.

ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ – ಕೆ.ಎಸ್ ಈಶ್ವರಪ್ಪ.

ಶಿವಮೊಗ್ಗ :  ಕಾಂಗ್ರೆಸ್ ಪಕ್ಷ ಅವರ ಹಣೆಬರಹಕ್ಕೆ ಬಿಜೆಪಿಯ ಒಬ್ಬ ಶಾಸಕರನ್ನು ತೆಗೆದುಕೊಳ್ಳಲು ಆಗಲಿಲ್ಲ. ಬರೆದಿಟ್ಟುಕೊಳ್ಳಿ ಲೋಕಸಭಾ ಚುನಾವಣೆಯ ಸಮಯದಲ್ಲಿ  ರಾಜ್ಯದಲ್ಲಿ ಈ ಸರ್ಕಾರ ಇರೋಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೆ.ಎಸ್ ಈಶ್ವರಪ್ಪರವರು ಡಿ.ಕೆ ಶಿವಕುಮಾರ್ ರವರು ನಮ್ಮ ಪಕ್ಷದ ನಾಯಕರ ವಿರುದ್ಧ ಬಹಳ ಕೀಳಾಗಿ ಮಾತನಾಡುತ್ತಿದ್ದಾರೆ.

ಈ ಹಿಂದೆ ಅವರ ಸರ್ಕಾರ ಇದ್ದಾಗ ಆಡಳಿತ ವೈಖರಿಯ ಅಸಮಾಧಾನದಿಂದ 17ಜನ ಶಾಸಕರು ರಾಜಿನಾಮೆ ನೀಡಿ ಹೊರಬಂದಿದ್ದರು ಇದು ಡಿಕೆಶಿ ನೆನಪು ಮಾಡಿಕೊಳ್ಳಬೇಕು. ಈಗಿನ ಸರ್ಕಾರದಲ್ಲಿರುವ ಶಾಸಕರು ಕೂಡ ಅಸಮಾಧಾನದಲ್ಲಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅಸಮಾಧಾನ ಇದ್ದ ಮೇಲೆ ನೀವು ಅಧಿಕಾರದಲ್ಲಿ ಯಾಕೆ ಇರುತ್ತೀರಿ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆಯವರೇ ನೋಡ್ತಾ ಇರಿ.


ಸಚಿವ ಪ್ರಿಯಾಂಕ್ ಖರ್ಗೆಯವರು ಬಿ.ಎಲ್ ಸಂತೋಷ್ ರವರಿಗೆ ಸರ್ಕಾರ ಮುಟ್ಟಿ ನೋಡಿ ಎಂದು ಹೇಳಿದ್ದಾರೆ. ನೋಡುತ್ತಾ ಇರಿ ಪ್ರಿಯಾಂಕ್ ಖರ್ಗೆ ಲೋಕಸಭಾ ಚುನಾವಣೆ ವೇಳೆ ನಿಮ್ಮ ಸರ್ಕಾರ ಏನಾಗಿರುತ್ತೆ ಎಂದು ತಿಳಿಸಿದರು.ರಾಜ್ಯದಲ್ಲಿ ಆಪರೇಷನ್ ಕಮಲ ನೂರಕ್ಕೆ ನೂರರಷ್ಟು ಆಗುತ್ತೆ ಈ ಸರ್ಕಾರ ಬೀಳುತ್ತೆ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...