Sunday, June 15, 2025
Google search engine
Homeಶಿವಮೊಗ್ಗನ್ಯೂಸ್ ವಾರಿಯರ್ಸ್ ಪತ್ರಿಕೆ ನೀಡಿದ ಮಾಹಿತಿ ಹಾಗೂ ವರದಿ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಇಬ್ಬರು ಪುರುಷರು,ಒಬ್ಬ...

ನ್ಯೂಸ್ ವಾರಿಯರ್ಸ್ ಪತ್ರಿಕೆ ನೀಡಿದ ಮಾಹಿತಿ ಹಾಗೂ ವರದಿ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಇಬ್ಬರು ಪುರುಷರು,ಒಬ್ಬ ಮಹಿಳೆಯನ್ನು ರಕ್ಷಿಸಿದ ತಂಡ…. ವಂದನೆಗಳು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ…

ಕಳೆದ ಎರಡು ಮೂರು ತಿಂಗಳಿಂದ ಶಿವಮೊಗ್ಗ ನಗರದ ಶೇಷಾದ್ರಿಪುರಂ ರೈಲ್ವೆ ಸ್ಟೇಷನ್ ಬಳಿ ಯಾವುದೇ ವಿಳಾಸವಿಲ್ಲದ ಇಬ್ಬರು ವ್ಯಕ್ತಿಗಳು ಶೇಷಾದ್ರಿಪುರಂ ಅಂಡರ್ ಪಾಸ್ ನ ಕೆಳಗೆ ದಿನನಿತ್ಯ ಮಲಗುತ್ತಿದ್ದರು.

ಕೋವಿಡ್ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ನಾಗರಿಕ ರಕ್ಷಣಾ ಸಮಿತಿಯ ಸದಸ್ಯರುಗಳು ಇವರಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ರಕ್ಷಣೆ ಸಿಗಬೇಕು.ಇಲ್ಲವಾದಲ್ಲಿ ಇವರಿಗೆ ಕೋವಿಡ್ ಸೋಂಕು ಬಂದಲ್ಲಿ ಸುತ್ತಮುತ್ತಲ ಜನರಿಗೂ ಬರುವ ಸಾಧ್ಯತೆ ಇದೆ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ಬಳಿ ತಮ್ಮ ಕಳವಳ ವ್ಯಕ್ತಪಡಿಸಿದ್ದರು.

ಹಾಗೂ ಇನ್ನೊಂದು ಪ್ರಕರಣದಲ್ಲಿ ಮೀನಾಕ್ಷಿ ಭವನ್ ಹತ್ತಿರ ಒಂದು ಮಹಿಳೆ ನಿರಂತರವಾಗಿ ಜನರಿಗೆ ಕಲ್ಲುಗಳಿಂದ ಹೊಡೆಯುವುದು ಕೂಗಾಡುವುದು ಮಾಡುತ್ತಿದ್ದಳು.ಇದರಿಂದ ಅಲ್ಲಿ ಓಡಾಡುವ ಜನರಿಗೆ, ಸಾರ್ವಜನಿಕರಿಗೆ, ತುಂಬಾ ಕಿರಿಕಿರಿ ಉಂಟಾಗುತ್ತಿತ್ತು. ಇದನ್ನು ಗಮನಿಸಿದ ಶಿವಮೊಗ್ಗ ನಗರ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ ಒಬ್ಬರು ನ್ಯೂಸ್ ವಾರಿಯರ್ಸ್ ಪತ್ರಿಕೆಗೆ ಈ ಮಹಿಳೆಗೆ ರಕ್ಷಣೆ ಒದಗಿಸುವಂತೆ ಕೇಳಿಕೊಂಡಿದ್ದರು.

ಇವೆರಡು ಪ್ರಕರಣಗಳಲ್ಲಿ ಕೂಡ ಪತ್ರಿಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದಾಗ ಸೂಕ್ತವಾಗಿ ಸ್ಪಂದಿಸಿದ ಅಧಿಕಾರಿಗಳು 3 ವ್ಯಕ್ತಿಗಳನ್ನು ರಕ್ಷಿಸಿ ಅವರಿಗೆ ಸೂಕ್ತವಾದ ರಕ್ಷಣೆ ಒದಗಿಸಿದ್ದಾರೆ. ಮಾಹಿತಿ ನೀಡಿದ ಶೇಷಾದ್ರಿಪುರಂ ನಾಗರಿಕ ಸಮಿತಿಯ ಸದಸ್ಯರಿಗೂ, ಹಾಗೂ ಶಿವಮೊಗ್ಗ ನಗರದ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಗೂ, ಕ್ರಮ ತೆಗೆದುಕೊಂಡ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧೀಕ್ಷಕರಿಗೆ, ಹಾಗೂ ಮಹಿಳಾ ಅಭಿವೃದ್ಧಿ ಅಧಿಕಾರಿಯಾದ ಗಂಗಾಬಾಯಿ ಅವರಿಗೆ ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ ಸಖಿತಂಡ, ಆರೋಗ್ಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳಿಗೂ ನ್ಯೂಸ್ ವಾರಿಯರ್ಸ್ ಪತ್ರಿಕೆ ತಂಡದ ವತಿಯಿಂದ ಧನ್ಯವಾದಗಳು….

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!