Wednesday, April 30, 2025
Google search engine
Homeಶಿವಮೊಗ್ಗನ್ಯೂಸ್ ವಾರಿಯರ್ಸ್ ಪತ್ರಿಕೆ ನೀಡಿದ ಮಾಹಿತಿ ಹಾಗೂ ವರದಿ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಇಬ್ಬರು ಪುರುಷರು,ಒಬ್ಬ...

ನ್ಯೂಸ್ ವಾರಿಯರ್ಸ್ ಪತ್ರಿಕೆ ನೀಡಿದ ಮಾಹಿತಿ ಹಾಗೂ ವರದಿ ಬೆನ್ನಲ್ಲೇ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಇಬ್ಬರು ಪುರುಷರು,ಒಬ್ಬ ಮಹಿಳೆಯನ್ನು ರಕ್ಷಿಸಿದ ತಂಡ…. ವಂದನೆಗಳು ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ…

ಕಳೆದ ಎರಡು ಮೂರು ತಿಂಗಳಿಂದ ಶಿವಮೊಗ್ಗ ನಗರದ ಶೇಷಾದ್ರಿಪುರಂ ರೈಲ್ವೆ ಸ್ಟೇಷನ್ ಬಳಿ ಯಾವುದೇ ವಿಳಾಸವಿಲ್ಲದ ಇಬ್ಬರು ವ್ಯಕ್ತಿಗಳು ಶೇಷಾದ್ರಿಪುರಂ ಅಂಡರ್ ಪಾಸ್ ನ ಕೆಳಗೆ ದಿನನಿತ್ಯ ಮಲಗುತ್ತಿದ್ದರು.

ಕೋವಿಡ್ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ನಾಗರಿಕ ರಕ್ಷಣಾ ಸಮಿತಿಯ ಸದಸ್ಯರುಗಳು ಇವರಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ರಕ್ಷಣೆ ಸಿಗಬೇಕು.ಇಲ್ಲವಾದಲ್ಲಿ ಇವರಿಗೆ ಕೋವಿಡ್ ಸೋಂಕು ಬಂದಲ್ಲಿ ಸುತ್ತಮುತ್ತಲ ಜನರಿಗೂ ಬರುವ ಸಾಧ್ಯತೆ ಇದೆ ಎಂದು ನ್ಯೂಸ್ ವಾರಿಯರ್ಸ್ ಪತ್ರಿಕೆ ಬಳಿ ತಮ್ಮ ಕಳವಳ ವ್ಯಕ್ತಪಡಿಸಿದ್ದರು.

ಹಾಗೂ ಇನ್ನೊಂದು ಪ್ರಕರಣದಲ್ಲಿ ಮೀನಾಕ್ಷಿ ಭವನ್ ಹತ್ತಿರ ಒಂದು ಮಹಿಳೆ ನಿರಂತರವಾಗಿ ಜನರಿಗೆ ಕಲ್ಲುಗಳಿಂದ ಹೊಡೆಯುವುದು ಕೂಗಾಡುವುದು ಮಾಡುತ್ತಿದ್ದಳು.ಇದರಿಂದ ಅಲ್ಲಿ ಓಡಾಡುವ ಜನರಿಗೆ, ಸಾರ್ವಜನಿಕರಿಗೆ, ತುಂಬಾ ಕಿರಿಕಿರಿ ಉಂಟಾಗುತ್ತಿತ್ತು. ಇದನ್ನು ಗಮನಿಸಿದ ಶಿವಮೊಗ್ಗ ನಗರ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ ಒಬ್ಬರು ನ್ಯೂಸ್ ವಾರಿಯರ್ಸ್ ಪತ್ರಿಕೆಗೆ ಈ ಮಹಿಳೆಗೆ ರಕ್ಷಣೆ ಒದಗಿಸುವಂತೆ ಕೇಳಿಕೊಂಡಿದ್ದರು.

ಇವೆರಡು ಪ್ರಕರಣಗಳಲ್ಲಿ ಕೂಡ ಪತ್ರಿಕೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದಾಗ ಸೂಕ್ತವಾಗಿ ಸ್ಪಂದಿಸಿದ ಅಧಿಕಾರಿಗಳು 3 ವ್ಯಕ್ತಿಗಳನ್ನು ರಕ್ಷಿಸಿ ಅವರಿಗೆ ಸೂಕ್ತವಾದ ರಕ್ಷಣೆ ಒದಗಿಸಿದ್ದಾರೆ. ಮಾಹಿತಿ ನೀಡಿದ ಶೇಷಾದ್ರಿಪುರಂ ನಾಗರಿಕ ಸಮಿತಿಯ ಸದಸ್ಯರಿಗೂ, ಹಾಗೂ ಶಿವಮೊಗ್ಗ ನಗರದ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿಗೂ, ಕ್ರಮ ತೆಗೆದುಕೊಂಡ ಭಿಕ್ಷುಕರ ಪುನರ್ವಸತಿ ಕೇಂದ್ರದ ಅಧೀಕ್ಷಕರಿಗೆ, ಹಾಗೂ ಮಹಿಳಾ ಅಭಿವೃದ್ಧಿ ಅಧಿಕಾರಿಯಾದ ಗಂಗಾಬಾಯಿ ಅವರಿಗೆ ಈ ಕಾರ್ಯಾಚರಣೆಯಲ್ಲಿ ಸಹಕರಿಸಿದ ಸಖಿತಂಡ, ಆರೋಗ್ಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳಿಗೂ ನ್ಯೂಸ್ ವಾರಿಯರ್ಸ್ ಪತ್ರಿಕೆ ತಂಡದ ವತಿಯಿಂದ ಧನ್ಯವಾದಗಳು….

ವರದಿ …ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...